Advertisement
MIRROR FOCUS

ಡಿ.19 ರಬ್ಬರ್ ಬೆಳೆಗಾರರ ಸಮಾವೇಶ | ರಬ್ಬರ್ ಕೃಷಿಗೆ ಆರ್ಥಿಕ ನೆರವು |

Share

ರಬ್ಬರ್ ಮಂಡಳಿ ವತಿಯಿಂದ ರಬ್ಬರ್ ಬೆಳೆಗಾರರ ಸಮಾವೇಶ ಡಿಸೆಂಬರ್ 19 ರಂದು ಬೆಳಿಗ್ಗೆ 10 ಗಂಟೆಯಿಂದ ಎಸ್.ಡಿ.ಎಂ ಕಲಾಭವನ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ನಡೆಯಲಿದೆ.

Advertisement
Advertisement
Advertisement
Advertisement

ರಬ್ಬರ್ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕರು, ಉತ್ಪನ್ನ ಆಯುಕ್ತ ಮತ್ತು ಹಿರಿಯ ಅಧಿಕಾರಿಗಳು ಈ ಸಮಾವೇಶದಲ್ಲಿ ಭಾಗವಹಿಸಿ ರಬ್ಬರ್ ಬೆಳೆಗಾರರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ರಬ್ಬರ್ ಮಂಡಳಿ ಮಂಗಳೂರು ಪ್ರಾದೇಶಿಕ ಕಚೇರಿ ಪ್ರಕಟಣೆ ತಿಳಿಸಿದೆ.

Advertisement

ರಬ್ಬರ್ ಕೃಷಿಗೆ ಆರ್ಥಿಕ ನೆರವು ನೀಡಲು ರಬ್ಬರ್ ಮಂಡಳಿಯಿಂದ 2023 ಮತ್ತು 2024ರಲ್ಲಿ ಮರುನಾಟಿ ಮಾಡಿದ ಅಥವಾ ಹೊಸದಾಗಿ ನಾಟಿ ಮಾಡಿದ ರಬ್ಬರ್ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಗರಿಷ್ಠ 5 ಹೆಕ್ಟೇರ್‍ಗಳ ವರೆಗೆ ರಬ್ಬರ್ ಪ್ರದೇಶವನ್ನು ಹೊಂದಿರುವವರು ಷರತ್ತುಗಳಿಗೆ ಒಳಪಟ್ಟು 5 ಹೆಕ್ಟೇರ್‍ಗೆ ಸಹಾಯಧನಕ್ಕೆ ಅರ್ಹರಾಗಿರುತ್ತಾರೆ. ಕೇಂದ್ರ ಸರ್ಕಾರದ “ಸರ್ವಿಸ್ ಪ್ಲಸ್” ಪೋರ್ಟಲ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ.

Advertisement

ಜಮೀನಿನ ಮಾಲೀಕತ್ವವನ್ನು ಸಾಬೀತುಪಡಿಸಲು ಗ್ರಾಮಾಧಿಕಾರಿಗಳ ಅರ್ಜಿಯೊಂದಿಗೆ ಪ್ರಮಾಣಪತ್ರ ಅಥವಾ ಪಹಣಿ ಪತ್ರ (RTC), ಸಾಗುವಳಿ ಜಮೀನಿನ ಗಡಿ ತೋರಿಸುವ ಅಂದಾಜು ನಕ್ಷೆ, ಆಧಾರ್ ಲಿಂಕ್ ಮಾಡಿದ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ರಬ್ಬರ್ ಸಸಿಗಳ ಖರೀದಿಸಿದ ಪುರಾವೆ/ರಶೀದಿ, ಜಂಟಿ ಮಾಲೀಕರು ಮತ್ತು ಅಪ್ರಾಪ್ತ ವಯಸ್ಕರಿದ್ದಲ್ಲಿ  ನಾಮನಿರ್ದೇಶನ ಪ್ರತಿಗಳನ್ನು ಅಪ್‍ಲೋಡ್ ಮಾಡಬೇಕು.

ಸಾಂಪ್ರದಾಯಿಕವಲ್ಲದ ಪ್ರದೇಶದಲ್ಲಿ ಸಬ್ಸಿಡಿ ಮೊತ್ತ ರೂ. 50,000/ಹೆಕ್ಟೇರ್‍ನಂತೆ 5 ಹೆಕ್ಟೇರ್‌ ಗೆ ಸೀಮಿತವಾಗಿದೆ. ರೂಟ್ ಟ್ರೈನರ್ ಸಸಿಗಳು ಅಥವಾ ಪಾಲಿ ಬ್ಯಾಗ್ ಸಸಿಗಳನ್ನು ಬಳಸಿ ಹೊಸನಾಟಿ ಮತ್ತು ಮರುನಾಟಿ ಮಾಡಿರುವ ಬೆಳೆಗಾರರಿಗೆ ಮತ್ತು ಗುಂಪುಗಳಿಗೆ ಪರಿವೀಕ್ಷಣೆ ನಂತರ ಅರ್ಹ ಆರ್ಥಿಕ ಸಹಾಯವನ್ನು ಮೊದಲ ವರ್ಷದಲ್ಲಿ ಪ್ರತಿ ಹೆಕ್ಟೇರಿಗೆ ರೂ 40,000 ಮತ್ತು 10,000 ದಂತೆ ಕಂತುಗಳಲ್ಲಿ ಬೆಳೆಗಾರರ ಖಾತೆಗೆ ಜಮಾ ಮಾಡಲಾಗುತ್ತದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

30 mins ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago