Advertisement
MIRROR FOCUS

ಡಿ.19 ರಬ್ಬರ್ ಬೆಳೆಗಾರರ ಸಮಾವೇಶ | ರಬ್ಬರ್ ಕೃಷಿಗೆ ಆರ್ಥಿಕ ನೆರವು |

Share

ರಬ್ಬರ್ ಮಂಡಳಿ ವತಿಯಿಂದ ರಬ್ಬರ್ ಬೆಳೆಗಾರರ ಸಮಾವೇಶ ಡಿಸೆಂಬರ್ 19 ರಂದು ಬೆಳಿಗ್ಗೆ 10 ಗಂಟೆಯಿಂದ ಎಸ್.ಡಿ.ಎಂ ಕಲಾಭವನ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ನಡೆಯಲಿದೆ.

ರಬ್ಬರ್ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕರು, ಉತ್ಪನ್ನ ಆಯುಕ್ತ ಮತ್ತು ಹಿರಿಯ ಅಧಿಕಾರಿಗಳು ಈ ಸಮಾವೇಶದಲ್ಲಿ ಭಾಗವಹಿಸಿ ರಬ್ಬರ್ ಬೆಳೆಗಾರರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ರಬ್ಬರ್ ಮಂಡಳಿ ಮಂಗಳೂರು ಪ್ರಾದೇಶಿಕ ಕಚೇರಿ ಪ್ರಕಟಣೆ ತಿಳಿಸಿದೆ.

ರಬ್ಬರ್ ಕೃಷಿಗೆ ಆರ್ಥಿಕ ನೆರವು ನೀಡಲು ರಬ್ಬರ್ ಮಂಡಳಿಯಿಂದ 2023 ಮತ್ತು 2024ರಲ್ಲಿ ಮರುನಾಟಿ ಮಾಡಿದ ಅಥವಾ ಹೊಸದಾಗಿ ನಾಟಿ ಮಾಡಿದ ರಬ್ಬರ್ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಗರಿಷ್ಠ 5 ಹೆಕ್ಟೇರ್‍ಗಳ ವರೆಗೆ ರಬ್ಬರ್ ಪ್ರದೇಶವನ್ನು ಹೊಂದಿರುವವರು ಷರತ್ತುಗಳಿಗೆ ಒಳಪಟ್ಟು 5 ಹೆಕ್ಟೇರ್‍ಗೆ ಸಹಾಯಧನಕ್ಕೆ ಅರ್ಹರಾಗಿರುತ್ತಾರೆ. ಕೇಂದ್ರ ಸರ್ಕಾರದ “ಸರ್ವಿಸ್ ಪ್ಲಸ್” ಪೋರ್ಟಲ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ.

ಜಮೀನಿನ ಮಾಲೀಕತ್ವವನ್ನು ಸಾಬೀತುಪಡಿಸಲು ಗ್ರಾಮಾಧಿಕಾರಿಗಳ ಅರ್ಜಿಯೊಂದಿಗೆ ಪ್ರಮಾಣಪತ್ರ ಅಥವಾ ಪಹಣಿ ಪತ್ರ (RTC), ಸಾಗುವಳಿ ಜಮೀನಿನ ಗಡಿ ತೋರಿಸುವ ಅಂದಾಜು ನಕ್ಷೆ, ಆಧಾರ್ ಲಿಂಕ್ ಮಾಡಿದ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ರಬ್ಬರ್ ಸಸಿಗಳ ಖರೀದಿಸಿದ ಪುರಾವೆ/ರಶೀದಿ, ಜಂಟಿ ಮಾಲೀಕರು ಮತ್ತು ಅಪ್ರಾಪ್ತ ವಯಸ್ಕರಿದ್ದಲ್ಲಿ  ನಾಮನಿರ್ದೇಶನ ಪ್ರತಿಗಳನ್ನು ಅಪ್‍ಲೋಡ್ ಮಾಡಬೇಕು.

ಸಾಂಪ್ರದಾಯಿಕವಲ್ಲದ ಪ್ರದೇಶದಲ್ಲಿ ಸಬ್ಸಿಡಿ ಮೊತ್ತ ರೂ. 50,000/ಹೆಕ್ಟೇರ್‍ನಂತೆ 5 ಹೆಕ್ಟೇರ್‌ ಗೆ ಸೀಮಿತವಾಗಿದೆ. ರೂಟ್ ಟ್ರೈನರ್ ಸಸಿಗಳು ಅಥವಾ ಪಾಲಿ ಬ್ಯಾಗ್ ಸಸಿಗಳನ್ನು ಬಳಸಿ ಹೊಸನಾಟಿ ಮತ್ತು ಮರುನಾಟಿ ಮಾಡಿರುವ ಬೆಳೆಗಾರರಿಗೆ ಮತ್ತು ಗುಂಪುಗಳಿಗೆ ಪರಿವೀಕ್ಷಣೆ ನಂತರ ಅರ್ಹ ಆರ್ಥಿಕ ಸಹಾಯವನ್ನು ಮೊದಲ ವರ್ಷದಲ್ಲಿ ಪ್ರತಿ ಹೆಕ್ಟೇರಿಗೆ ರೂ 40,000 ಮತ್ತು 10,000 ದಂತೆ ಕಂತುಗಳಲ್ಲಿ ಬೆಳೆಗಾರರ ಖಾತೆಗೆ ಜಮಾ ಮಾಡಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

6 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

7 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

16 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

17 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

17 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

21 hours ago