Advertisement
MIRROR FOCUS

ಡಿ.19 ರಬ್ಬರ್ ಬೆಳೆಗಾರರ ಸಮಾವೇಶ | ರಬ್ಬರ್ ಕೃಷಿಗೆ ಆರ್ಥಿಕ ನೆರವು |

Share

ರಬ್ಬರ್ ಮಂಡಳಿ ವತಿಯಿಂದ ರಬ್ಬರ್ ಬೆಳೆಗಾರರ ಸಮಾವೇಶ ಡಿಸೆಂಬರ್ 19 ರಂದು ಬೆಳಿಗ್ಗೆ 10 ಗಂಟೆಯಿಂದ ಎಸ್.ಡಿ.ಎಂ ಕಲಾಭವನ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ನಡೆಯಲಿದೆ.

ರಬ್ಬರ್ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕರು, ಉತ್ಪನ್ನ ಆಯುಕ್ತ ಮತ್ತು ಹಿರಿಯ ಅಧಿಕಾರಿಗಳು ಈ ಸಮಾವೇಶದಲ್ಲಿ ಭಾಗವಹಿಸಿ ರಬ್ಬರ್ ಬೆಳೆಗಾರರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ರಬ್ಬರ್ ಮಂಡಳಿ ಮಂಗಳೂರು ಪ್ರಾದೇಶಿಕ ಕಚೇರಿ ಪ್ರಕಟಣೆ ತಿಳಿಸಿದೆ.

ರಬ್ಬರ್ ಕೃಷಿಗೆ ಆರ್ಥಿಕ ನೆರವು ನೀಡಲು ರಬ್ಬರ್ ಮಂಡಳಿಯಿಂದ 2023 ಮತ್ತು 2024ರಲ್ಲಿ ಮರುನಾಟಿ ಮಾಡಿದ ಅಥವಾ ಹೊಸದಾಗಿ ನಾಟಿ ಮಾಡಿದ ರಬ್ಬರ್ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಗರಿಷ್ಠ 5 ಹೆಕ್ಟೇರ್‍ಗಳ ವರೆಗೆ ರಬ್ಬರ್ ಪ್ರದೇಶವನ್ನು ಹೊಂದಿರುವವರು ಷರತ್ತುಗಳಿಗೆ ಒಳಪಟ್ಟು 5 ಹೆಕ್ಟೇರ್‍ಗೆ ಸಹಾಯಧನಕ್ಕೆ ಅರ್ಹರಾಗಿರುತ್ತಾರೆ. ಕೇಂದ್ರ ಸರ್ಕಾರದ “ಸರ್ವಿಸ್ ಪ್ಲಸ್” ಪೋರ್ಟಲ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ.

ಜಮೀನಿನ ಮಾಲೀಕತ್ವವನ್ನು ಸಾಬೀತುಪಡಿಸಲು ಗ್ರಾಮಾಧಿಕಾರಿಗಳ ಅರ್ಜಿಯೊಂದಿಗೆ ಪ್ರಮಾಣಪತ್ರ ಅಥವಾ ಪಹಣಿ ಪತ್ರ (RTC), ಸಾಗುವಳಿ ಜಮೀನಿನ ಗಡಿ ತೋರಿಸುವ ಅಂದಾಜು ನಕ್ಷೆ, ಆಧಾರ್ ಲಿಂಕ್ ಮಾಡಿದ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ರಬ್ಬರ್ ಸಸಿಗಳ ಖರೀದಿಸಿದ ಪುರಾವೆ/ರಶೀದಿ, ಜಂಟಿ ಮಾಲೀಕರು ಮತ್ತು ಅಪ್ರಾಪ್ತ ವಯಸ್ಕರಿದ್ದಲ್ಲಿ  ನಾಮನಿರ್ದೇಶನ ಪ್ರತಿಗಳನ್ನು ಅಪ್‍ಲೋಡ್ ಮಾಡಬೇಕು.

ಸಾಂಪ್ರದಾಯಿಕವಲ್ಲದ ಪ್ರದೇಶದಲ್ಲಿ ಸಬ್ಸಿಡಿ ಮೊತ್ತ ರೂ. 50,000/ಹೆಕ್ಟೇರ್‍ನಂತೆ 5 ಹೆಕ್ಟೇರ್‌ ಗೆ ಸೀಮಿತವಾಗಿದೆ. ರೂಟ್ ಟ್ರೈನರ್ ಸಸಿಗಳು ಅಥವಾ ಪಾಲಿ ಬ್ಯಾಗ್ ಸಸಿಗಳನ್ನು ಬಳಸಿ ಹೊಸನಾಟಿ ಮತ್ತು ಮರುನಾಟಿ ಮಾಡಿರುವ ಬೆಳೆಗಾರರಿಗೆ ಮತ್ತು ಗುಂಪುಗಳಿಗೆ ಪರಿವೀಕ್ಷಣೆ ನಂತರ ಅರ್ಹ ಆರ್ಥಿಕ ಸಹಾಯವನ್ನು ಮೊದಲ ವರ್ಷದಲ್ಲಿ ಪ್ರತಿ ಹೆಕ್ಟೇರಿಗೆ ರೂ 40,000 ಮತ್ತು 10,000 ದಂತೆ ಕಂತುಗಳಲ್ಲಿ ಬೆಳೆಗಾರರ ಖಾತೆಗೆ ಜಮಾ ಮಾಡಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

5 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

13 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

13 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

14 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

14 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

24 hours ago