Advertisement
MIRROR FOCUS

ಡಿ.19 ರಬ್ಬರ್ ಬೆಳೆಗಾರರ ಸಮಾವೇಶ | ರಬ್ಬರ್ ಕೃಷಿಗೆ ಆರ್ಥಿಕ ನೆರವು |

Share

ರಬ್ಬರ್ ಮಂಡಳಿ ವತಿಯಿಂದ ರಬ್ಬರ್ ಬೆಳೆಗಾರರ ಸಮಾವೇಶ ಡಿಸೆಂಬರ್ 19 ರಂದು ಬೆಳಿಗ್ಗೆ 10 ಗಂಟೆಯಿಂದ ಎಸ್.ಡಿ.ಎಂ ಕಲಾಭವನ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ನಡೆಯಲಿದೆ.

ರಬ್ಬರ್ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕರು, ಉತ್ಪನ್ನ ಆಯುಕ್ತ ಮತ್ತು ಹಿರಿಯ ಅಧಿಕಾರಿಗಳು ಈ ಸಮಾವೇಶದಲ್ಲಿ ಭಾಗವಹಿಸಿ ರಬ್ಬರ್ ಬೆಳೆಗಾರರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ರಬ್ಬರ್ ಮಂಡಳಿ ಮಂಗಳೂರು ಪ್ರಾದೇಶಿಕ ಕಚೇರಿ ಪ್ರಕಟಣೆ ತಿಳಿಸಿದೆ.

ರಬ್ಬರ್ ಕೃಷಿಗೆ ಆರ್ಥಿಕ ನೆರವು ನೀಡಲು ರಬ್ಬರ್ ಮಂಡಳಿಯಿಂದ 2023 ಮತ್ತು 2024ರಲ್ಲಿ ಮರುನಾಟಿ ಮಾಡಿದ ಅಥವಾ ಹೊಸದಾಗಿ ನಾಟಿ ಮಾಡಿದ ರಬ್ಬರ್ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಗರಿಷ್ಠ 5 ಹೆಕ್ಟೇರ್‍ಗಳ ವರೆಗೆ ರಬ್ಬರ್ ಪ್ರದೇಶವನ್ನು ಹೊಂದಿರುವವರು ಷರತ್ತುಗಳಿಗೆ ಒಳಪಟ್ಟು 5 ಹೆಕ್ಟೇರ್‍ಗೆ ಸಹಾಯಧನಕ್ಕೆ ಅರ್ಹರಾಗಿರುತ್ತಾರೆ. ಕೇಂದ್ರ ಸರ್ಕಾರದ “ಸರ್ವಿಸ್ ಪ್ಲಸ್” ಪೋರ್ಟಲ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ.

ಜಮೀನಿನ ಮಾಲೀಕತ್ವವನ್ನು ಸಾಬೀತುಪಡಿಸಲು ಗ್ರಾಮಾಧಿಕಾರಿಗಳ ಅರ್ಜಿಯೊಂದಿಗೆ ಪ್ರಮಾಣಪತ್ರ ಅಥವಾ ಪಹಣಿ ಪತ್ರ (RTC), ಸಾಗುವಳಿ ಜಮೀನಿನ ಗಡಿ ತೋರಿಸುವ ಅಂದಾಜು ನಕ್ಷೆ, ಆಧಾರ್ ಲಿಂಕ್ ಮಾಡಿದ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ರಬ್ಬರ್ ಸಸಿಗಳ ಖರೀದಿಸಿದ ಪುರಾವೆ/ರಶೀದಿ, ಜಂಟಿ ಮಾಲೀಕರು ಮತ್ತು ಅಪ್ರಾಪ್ತ ವಯಸ್ಕರಿದ್ದಲ್ಲಿ  ನಾಮನಿರ್ದೇಶನ ಪ್ರತಿಗಳನ್ನು ಅಪ್‍ಲೋಡ್ ಮಾಡಬೇಕು.

ಸಾಂಪ್ರದಾಯಿಕವಲ್ಲದ ಪ್ರದೇಶದಲ್ಲಿ ಸಬ್ಸಿಡಿ ಮೊತ್ತ ರೂ. 50,000/ಹೆಕ್ಟೇರ್‍ನಂತೆ 5 ಹೆಕ್ಟೇರ್‌ ಗೆ ಸೀಮಿತವಾಗಿದೆ. ರೂಟ್ ಟ್ರೈನರ್ ಸಸಿಗಳು ಅಥವಾ ಪಾಲಿ ಬ್ಯಾಗ್ ಸಸಿಗಳನ್ನು ಬಳಸಿ ಹೊಸನಾಟಿ ಮತ್ತು ಮರುನಾಟಿ ಮಾಡಿರುವ ಬೆಳೆಗಾರರಿಗೆ ಮತ್ತು ಗುಂಪುಗಳಿಗೆ ಪರಿವೀಕ್ಷಣೆ ನಂತರ ಅರ್ಹ ಆರ್ಥಿಕ ಸಹಾಯವನ್ನು ಮೊದಲ ವರ್ಷದಲ್ಲಿ ಪ್ರತಿ ಹೆಕ್ಟೇರಿಗೆ ರೂ 40,000 ಮತ್ತು 10,000 ದಂತೆ ಕಂತುಗಳಲ್ಲಿ ಬೆಳೆಗಾರರ ಖಾತೆಗೆ ಜಮಾ ಮಾಡಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

10 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

13 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

14 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

14 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

14 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

22 hours ago