MIRROR FOCUS

ರಬ್ಬರ್‌, ಟಯರ್‌ ಆಮದಿಗೆ ಅನುಮತಿ ನೀಡಬಾರದು | ರಬ್ಬರ್‌ ಉದ್ಯಮ, ರಬ್ಬರ್ ಬೆಳೆಗಾರರನ್ನು ಬೆಂಬಲಿಸಬಹುದಾದ ಕ್ರಮಗಳು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತವು ಸಾಕಷ್ಟು ದೇಶೀಯ ಟಯರ್ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದೆ. ಹೀಗಾಗಿ ಮುಕ್ತ ವ್ಯಾಪಾರ ಒಪ್ಪಂದಗಳ ಮೂಲಕ ಟಯರ್‌ ಹಾಗೂ ರಬ್ಬರ್ ಆಮದು ಮಾಡಬಾರದು ಎಂದು ಅಟೋಮೋಟಿವ್ ಟಯರ್ ತಯಾರಕರ ಸಂಘ (‌ATMA) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

Advertisement

ದೇಶದ 10 ಲಕ್ಷಕ್ಕೂ ಹೆಚ್ಚು ರಬ್ಬರ್ ಬೆಳೆಗಾರರು ರಬ್ಬರ್‌ ನಂಬಿ ಬದುಕು ಸಾಗಿಸುತ್ತಿದ್ದಾರೆ. ದೇಶೀಯ ರಬ್ಬರ್‌ನ ‌ ಉತ್ಪಾದನೆಯ ಶೇಕಡಾ 70 ಕ್ಕಿಂತ ಹೆಚ್ಚು  ಟಯರ್ ಉದ್ಯಮದಲ್ಲಿ ಬಳಸಲಾಗುತ್ತಿದೆ. ಹೀಗಾಗಿ ಟಯರ್‌ ಉದ್ಯಮವನ್ನು ಕೂಡಾ ರಕ್ಷಣೆ ಮಾಡಬೇಕಿದೆ, ರಬ್ಬರ್‌ ಆಮದು ತಡೆಯಬೇಕಿದೆ ಎಂದು ಟಯರ್ ತಯಾರಕರ ಸಂಘ ಹೇಳಿದೆ.

ದೇಶೀಯ ರಬ್ಬರ್‌ ಹಾಗೂ ಟಯರ್ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ಮತ್ತು ತಾಂತ್ರಿಕ ಪ್ರಗತಿಯನ್ನು ಹೆಚ್ಚಿಸುವ ಮೂಲಕ, ಉದ್ಯೋಗವನ್ನು ಸೃಷ್ಟಿಸುವ, ಸುಸ್ಥಿರತೆಯನ್ನು ಉತ್ತೇಜಿಸುವ ಮತ್ತು ಆರ್ಥಿಕ ಬೆಳವಣಿಗೆಯನ್ನು‌ ವೃದ್ಧಿ ಮಾಡಬಹುದು ಹಾಗೂ ಭಾರತವು ಟಯರ್ ಉದ್ಯಮದಲ್ಲಿ ಪ್ರಮುಖ ಸ್ಥಾನ ಪಡೆಯಲು ಸಾಧ್ಯವಿದೆ ಎಂದು ATMA ಹೇಳಿದೆ.

ಭಾರತದಲ್ಲಿ ದೇಶೀಯ ಟಯರ್‌  ಉತ್ಪಾದನೆಯ  ಹೊರತಾಗಿಯೂ ಕಳೆದ ವರ್ಷ2,000 ಕೋಟಿ ಮೌಲ್ಯದ ಟಯರ್‌  ಆಮದು ಮಾಡಿಕೊಳ್ಳಲಾಗಿದೆ. ಭಾರತವು ಸಾಕಷ್ಟು ಟಯರ್ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದೆ.‌ ಹೀಗಾಗಿ ಆಮದು ಸುಂಕದ ರಿಯಾಯಿತಿಗಳ ಮೂಲಕ ಮುಕ್ತ ಒಪ್ಪಂದದ ಆಧಾರದ ಮೂಲಕ ರಬ್ಬರ್‌ ಹಾಗೂ ಟಯರ್‌ ಗೆ ಆಮದುಗಳಿಗೆ ಅವಕಾಶ ನೀಡಬಾರದುಎಂದು ಉದ್ಯಮ ಸಂಸ್ಥೆಗಳು ಹೇಳಿವೆ. ದೇಶೀಯ ಟಯರ್ ಉದ್ಯಮವು 5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ ಮತ್ತು 10 ಲಕ್ಷ ರಬ್ಬರ್ ಬೆಳೆಗಾರರನ್ನು ಬೆಂಬಲಿಸುತ್ತದೆ, ಈ ಕಾರಣಕ್ಕಾಗಿ ದೇಶದ ರಬ್ಬರ್‌ ಉದ್ಯಮವನ್ನು ಬೆಂಬಲಿಸಬೇಕು ಎಂದೂ ATMA ಹೇಳಿದೆ.
Source :IRJournal
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |

ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

3 hours ago

ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…

7 hours ago

ಹೊಸರುಚಿ | ಹಲಸಿನ ಕಾಯಿ ಪೂರಿ

ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…

9 hours ago

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

19 hours ago

ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್

ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…

19 hours ago

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

1 day ago