ಭಾರತವು ಸಾಕಷ್ಟು ದೇಶೀಯ ಟಯರ್ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದೆ. ಹೀಗಾಗಿ ಮುಕ್ತ ವ್ಯಾಪಾರ ಒಪ್ಪಂದಗಳ ಮೂಲಕ ಟಯರ್ ಹಾಗೂ ರಬ್ಬರ್ ಆಮದು ಮಾಡಬಾರದು ಎಂದು ಅಟೋಮೋಟಿವ್ ಟಯರ್ ತಯಾರಕರ ಸಂಘ (ATMA) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ದೇಶದ 10 ಲಕ್ಷಕ್ಕೂ ಹೆಚ್ಚು ರಬ್ಬರ್ ಬೆಳೆಗಾರರು ರಬ್ಬರ್ ನಂಬಿ ಬದುಕು ಸಾಗಿಸುತ್ತಿದ್ದಾರೆ. ದೇಶೀಯ ರಬ್ಬರ್ನ ಉತ್ಪಾದನೆಯ ಶೇಕಡಾ 70 ಕ್ಕಿಂತ ಹೆಚ್ಚು ಟಯರ್ ಉದ್ಯಮದಲ್ಲಿ ಬಳಸಲಾಗುತ್ತಿದೆ. ಹೀಗಾಗಿ ಟಯರ್ ಉದ್ಯಮವನ್ನು ಕೂಡಾ ರಕ್ಷಣೆ ಮಾಡಬೇಕಿದೆ, ರಬ್ಬರ್ ಆಮದು ತಡೆಯಬೇಕಿದೆ ಎಂದು ಟಯರ್ ತಯಾರಕರ ಸಂಘ ಹೇಳಿದೆ.
ದೇಶೀಯ ರಬ್ಬರ್ ಹಾಗೂ ಟಯರ್ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ಮತ್ತು ತಾಂತ್ರಿಕ ಪ್ರಗತಿಯನ್ನು ಹೆಚ್ಚಿಸುವ ಮೂಲಕ, ಉದ್ಯೋಗವನ್ನು ಸೃಷ್ಟಿಸುವ, ಸುಸ್ಥಿರತೆಯನ್ನು ಉತ್ತೇಜಿಸುವ ಮತ್ತು ಆರ್ಥಿಕ ಬೆಳವಣಿಗೆಯನ್ನು ವೃದ್ಧಿ ಮಾಡಬಹುದು ಹಾಗೂ ಭಾರತವು ಟಯರ್ ಉದ್ಯಮದಲ್ಲಿ ಪ್ರಮುಖ ಸ್ಥಾನ ಪಡೆಯಲು ಸಾಧ್ಯವಿದೆ ಎಂದು ATMA ಹೇಳಿದೆ.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…