Advertisement
MIRROR FOCUS

ರಬ್ಬರ್‌, ಟಯರ್‌ ಆಮದಿಗೆ ಅನುಮತಿ ನೀಡಬಾರದು | ರಬ್ಬರ್‌ ಉದ್ಯಮ, ರಬ್ಬರ್ ಬೆಳೆಗಾರರನ್ನು ಬೆಂಬಲಿಸಬಹುದಾದ ಕ್ರಮಗಳು |

Share

ಭಾರತವು ಸಾಕಷ್ಟು ದೇಶೀಯ ಟಯರ್ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದೆ. ಹೀಗಾಗಿ ಮುಕ್ತ ವ್ಯಾಪಾರ ಒಪ್ಪಂದಗಳ ಮೂಲಕ ಟಯರ್‌ ಹಾಗೂ ರಬ್ಬರ್ ಆಮದು ಮಾಡಬಾರದು ಎಂದು ಅಟೋಮೋಟಿವ್ ಟಯರ್ ತಯಾರಕರ ಸಂಘ (‌ATMA) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ದೇಶದ 10 ಲಕ್ಷಕ್ಕೂ ಹೆಚ್ಚು ರಬ್ಬರ್ ಬೆಳೆಗಾರರು ರಬ್ಬರ್‌ ನಂಬಿ ಬದುಕು ಸಾಗಿಸುತ್ತಿದ್ದಾರೆ. ದೇಶೀಯ ರಬ್ಬರ್‌ನ ‌ ಉತ್ಪಾದನೆಯ ಶೇಕಡಾ 70 ಕ್ಕಿಂತ ಹೆಚ್ಚು  ಟಯರ್ ಉದ್ಯಮದಲ್ಲಿ ಬಳಸಲಾಗುತ್ತಿದೆ. ಹೀಗಾಗಿ ಟಯರ್‌ ಉದ್ಯಮವನ್ನು ಕೂಡಾ ರಕ್ಷಣೆ ಮಾಡಬೇಕಿದೆ, ರಬ್ಬರ್‌ ಆಮದು ತಡೆಯಬೇಕಿದೆ ಎಂದು ಟಯರ್ ತಯಾರಕರ ಸಂಘ ಹೇಳಿದೆ.

ದೇಶೀಯ ರಬ್ಬರ್‌ ಹಾಗೂ ಟಯರ್ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ಮತ್ತು ತಾಂತ್ರಿಕ ಪ್ರಗತಿಯನ್ನು ಹೆಚ್ಚಿಸುವ ಮೂಲಕ, ಉದ್ಯೋಗವನ್ನು ಸೃಷ್ಟಿಸುವ, ಸುಸ್ಥಿರತೆಯನ್ನು ಉತ್ತೇಜಿಸುವ ಮತ್ತು ಆರ್ಥಿಕ ಬೆಳವಣಿಗೆಯನ್ನು‌ ವೃದ್ಧಿ ಮಾಡಬಹುದು ಹಾಗೂ ಭಾರತವು ಟಯರ್ ಉದ್ಯಮದಲ್ಲಿ ಪ್ರಮುಖ ಸ್ಥಾನ ಪಡೆಯಲು ಸಾಧ್ಯವಿದೆ ಎಂದು ATMA ಹೇಳಿದೆ.

ಭಾರತದಲ್ಲಿ ದೇಶೀಯ ಟಯರ್‌  ಉತ್ಪಾದನೆಯ  ಹೊರತಾಗಿಯೂ ಕಳೆದ ವರ್ಷ2,000 ಕೋಟಿ ಮೌಲ್ಯದ ಟಯರ್‌  ಆಮದು ಮಾಡಿಕೊಳ್ಳಲಾಗಿದೆ. ಭಾರತವು ಸಾಕಷ್ಟು ಟಯರ್ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದೆ.‌ ಹೀಗಾಗಿ ಆಮದು ಸುಂಕದ ರಿಯಾಯಿತಿಗಳ ಮೂಲಕ ಮುಕ್ತ ಒಪ್ಪಂದದ ಆಧಾರದ ಮೂಲಕ ರಬ್ಬರ್‌ ಹಾಗೂ ಟಯರ್‌ ಗೆ ಆಮದುಗಳಿಗೆ ಅವಕಾಶ ನೀಡಬಾರದುಎಂದು ಉದ್ಯಮ ಸಂಸ್ಥೆಗಳು ಹೇಳಿವೆ. ದೇಶೀಯ ಟಯರ್ ಉದ್ಯಮವು 5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ ಮತ್ತು 10 ಲಕ್ಷ ರಬ್ಬರ್ ಬೆಳೆಗಾರರನ್ನು ಬೆಂಬಲಿಸುತ್ತದೆ, ಈ ಕಾರಣಕ್ಕಾಗಿ ದೇಶದ ರಬ್ಬರ್‌ ಉದ್ಯಮವನ್ನು ಬೆಂಬಲಿಸಬೇಕು ಎಂದೂ ATMA ಹೇಳಿದೆ.
Source :IRJournal
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago