Advertisement
MIRROR FOCUS

ರಬ್ಬರ್‌, ಟಯರ್‌ ಆಮದಿಗೆ ಅನುಮತಿ ನೀಡಬಾರದು | ರಬ್ಬರ್‌ ಉದ್ಯಮ, ರಬ್ಬರ್ ಬೆಳೆಗಾರರನ್ನು ಬೆಂಬಲಿಸಬಹುದಾದ ಕ್ರಮಗಳು |

Share

ಭಾರತವು ಸಾಕಷ್ಟು ದೇಶೀಯ ಟಯರ್ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದೆ. ಹೀಗಾಗಿ ಮುಕ್ತ ವ್ಯಾಪಾರ ಒಪ್ಪಂದಗಳ ಮೂಲಕ ಟಯರ್‌ ಹಾಗೂ ರಬ್ಬರ್ ಆಮದು ಮಾಡಬಾರದು ಎಂದು ಅಟೋಮೋಟಿವ್ ಟಯರ್ ತಯಾರಕರ ಸಂಘ (‌ATMA) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ದೇಶದ 10 ಲಕ್ಷಕ್ಕೂ ಹೆಚ್ಚು ರಬ್ಬರ್ ಬೆಳೆಗಾರರು ರಬ್ಬರ್‌ ನಂಬಿ ಬದುಕು ಸಾಗಿಸುತ್ತಿದ್ದಾರೆ. ದೇಶೀಯ ರಬ್ಬರ್‌ನ ‌ ಉತ್ಪಾದನೆಯ ಶೇಕಡಾ 70 ಕ್ಕಿಂತ ಹೆಚ್ಚು  ಟಯರ್ ಉದ್ಯಮದಲ್ಲಿ ಬಳಸಲಾಗುತ್ತಿದೆ. ಹೀಗಾಗಿ ಟಯರ್‌ ಉದ್ಯಮವನ್ನು ಕೂಡಾ ರಕ್ಷಣೆ ಮಾಡಬೇಕಿದೆ, ರಬ್ಬರ್‌ ಆಮದು ತಡೆಯಬೇಕಿದೆ ಎಂದು ಟಯರ್ ತಯಾರಕರ ಸಂಘ ಹೇಳಿದೆ.

ದೇಶೀಯ ರಬ್ಬರ್‌ ಹಾಗೂ ಟಯರ್ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ಮತ್ತು ತಾಂತ್ರಿಕ ಪ್ರಗತಿಯನ್ನು ಹೆಚ್ಚಿಸುವ ಮೂಲಕ, ಉದ್ಯೋಗವನ್ನು ಸೃಷ್ಟಿಸುವ, ಸುಸ್ಥಿರತೆಯನ್ನು ಉತ್ತೇಜಿಸುವ ಮತ್ತು ಆರ್ಥಿಕ ಬೆಳವಣಿಗೆಯನ್ನು‌ ವೃದ್ಧಿ ಮಾಡಬಹುದು ಹಾಗೂ ಭಾರತವು ಟಯರ್ ಉದ್ಯಮದಲ್ಲಿ ಪ್ರಮುಖ ಸ್ಥಾನ ಪಡೆಯಲು ಸಾಧ್ಯವಿದೆ ಎಂದು ATMA ಹೇಳಿದೆ.

ಭಾರತದಲ್ಲಿ ದೇಶೀಯ ಟಯರ್‌  ಉತ್ಪಾದನೆಯ  ಹೊರತಾಗಿಯೂ ಕಳೆದ ವರ್ಷ2,000 ಕೋಟಿ ಮೌಲ್ಯದ ಟಯರ್‌  ಆಮದು ಮಾಡಿಕೊಳ್ಳಲಾಗಿದೆ. ಭಾರತವು ಸಾಕಷ್ಟು ಟಯರ್ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದೆ.‌ ಹೀಗಾಗಿ ಆಮದು ಸುಂಕದ ರಿಯಾಯಿತಿಗಳ ಮೂಲಕ ಮುಕ್ತ ಒಪ್ಪಂದದ ಆಧಾರದ ಮೂಲಕ ರಬ್ಬರ್‌ ಹಾಗೂ ಟಯರ್‌ ಗೆ ಆಮದುಗಳಿಗೆ ಅವಕಾಶ ನೀಡಬಾರದುಎಂದು ಉದ್ಯಮ ಸಂಸ್ಥೆಗಳು ಹೇಳಿವೆ. ದೇಶೀಯ ಟಯರ್ ಉದ್ಯಮವು 5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ ಮತ್ತು 10 ಲಕ್ಷ ರಬ್ಬರ್ ಬೆಳೆಗಾರರನ್ನು ಬೆಂಬಲಿಸುತ್ತದೆ, ಈ ಕಾರಣಕ್ಕಾಗಿ ದೇಶದ ರಬ್ಬರ್‌ ಉದ್ಯಮವನ್ನು ಬೆಂಬಲಿಸಬೇಕು ಎಂದೂ ATMA ಹೇಳಿದೆ.
Source :IRJournal
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

8 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

12 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

18 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

2 days ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

2 days ago