Advertisement
MIRROR FOCUS

ರಬ್ಬರ್‌, ಟಯರ್‌ ಆಮದಿಗೆ ಅನುಮತಿ ನೀಡಬಾರದು | ರಬ್ಬರ್‌ ಉದ್ಯಮ, ರಬ್ಬರ್ ಬೆಳೆಗಾರರನ್ನು ಬೆಂಬಲಿಸಬಹುದಾದ ಕ್ರಮಗಳು |

Share

ಭಾರತವು ಸಾಕಷ್ಟು ದೇಶೀಯ ಟಯರ್ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದೆ. ಹೀಗಾಗಿ ಮುಕ್ತ ವ್ಯಾಪಾರ ಒಪ್ಪಂದಗಳ ಮೂಲಕ ಟಯರ್‌ ಹಾಗೂ ರಬ್ಬರ್ ಆಮದು ಮಾಡಬಾರದು ಎಂದು ಅಟೋಮೋಟಿವ್ ಟಯರ್ ತಯಾರಕರ ಸಂಘ (‌ATMA) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ದೇಶದ 10 ಲಕ್ಷಕ್ಕೂ ಹೆಚ್ಚು ರಬ್ಬರ್ ಬೆಳೆಗಾರರು ರಬ್ಬರ್‌ ನಂಬಿ ಬದುಕು ಸಾಗಿಸುತ್ತಿದ್ದಾರೆ. ದೇಶೀಯ ರಬ್ಬರ್‌ನ ‌ ಉತ್ಪಾದನೆಯ ಶೇಕಡಾ 70 ಕ್ಕಿಂತ ಹೆಚ್ಚು  ಟಯರ್ ಉದ್ಯಮದಲ್ಲಿ ಬಳಸಲಾಗುತ್ತಿದೆ. ಹೀಗಾಗಿ ಟಯರ್‌ ಉದ್ಯಮವನ್ನು ಕೂಡಾ ರಕ್ಷಣೆ ಮಾಡಬೇಕಿದೆ, ರಬ್ಬರ್‌ ಆಮದು ತಡೆಯಬೇಕಿದೆ ಎಂದು ಟಯರ್ ತಯಾರಕರ ಸಂಘ ಹೇಳಿದೆ.

ದೇಶೀಯ ರಬ್ಬರ್‌ ಹಾಗೂ ಟಯರ್ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ಮತ್ತು ತಾಂತ್ರಿಕ ಪ್ರಗತಿಯನ್ನು ಹೆಚ್ಚಿಸುವ ಮೂಲಕ, ಉದ್ಯೋಗವನ್ನು ಸೃಷ್ಟಿಸುವ, ಸುಸ್ಥಿರತೆಯನ್ನು ಉತ್ತೇಜಿಸುವ ಮತ್ತು ಆರ್ಥಿಕ ಬೆಳವಣಿಗೆಯನ್ನು‌ ವೃದ್ಧಿ ಮಾಡಬಹುದು ಹಾಗೂ ಭಾರತವು ಟಯರ್ ಉದ್ಯಮದಲ್ಲಿ ಪ್ರಮುಖ ಸ್ಥಾನ ಪಡೆಯಲು ಸಾಧ್ಯವಿದೆ ಎಂದು ATMA ಹೇಳಿದೆ.

ಭಾರತದಲ್ಲಿ ದೇಶೀಯ ಟಯರ್‌  ಉತ್ಪಾದನೆಯ  ಹೊರತಾಗಿಯೂ ಕಳೆದ ವರ್ಷ2,000 ಕೋಟಿ ಮೌಲ್ಯದ ಟಯರ್‌  ಆಮದು ಮಾಡಿಕೊಳ್ಳಲಾಗಿದೆ. ಭಾರತವು ಸಾಕಷ್ಟು ಟಯರ್ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದೆ.‌ ಹೀಗಾಗಿ ಆಮದು ಸುಂಕದ ರಿಯಾಯಿತಿಗಳ ಮೂಲಕ ಮುಕ್ತ ಒಪ್ಪಂದದ ಆಧಾರದ ಮೂಲಕ ರಬ್ಬರ್‌ ಹಾಗೂ ಟಯರ್‌ ಗೆ ಆಮದುಗಳಿಗೆ ಅವಕಾಶ ನೀಡಬಾರದುಎಂದು ಉದ್ಯಮ ಸಂಸ್ಥೆಗಳು ಹೇಳಿವೆ. ದೇಶೀಯ ಟಯರ್ ಉದ್ಯಮವು 5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ ಮತ್ತು 10 ಲಕ್ಷ ರಬ್ಬರ್ ಬೆಳೆಗಾರರನ್ನು ಬೆಂಬಲಿಸುತ್ತದೆ, ಈ ಕಾರಣಕ್ಕಾಗಿ ದೇಶದ ರಬ್ಬರ್‌ ಉದ್ಯಮವನ್ನು ಬೆಂಬಲಿಸಬೇಕು ಎಂದೂ ATMA ಹೇಳಿದೆ.
Source :IRJournal
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

5 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

12 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

23 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

2 days ago