ರಬ್ಬರ್ ಬೆಲೆ ಕುಸಿತ ಹಾಗೂ ಇತರ ಸಮಸ್ಯೆಗಳ ಬಗ್ಗೆ ನಿಯೋಗವು ಬೆಂಗಳೂರಿನಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲೂ ಬೆಂಬಲ ಬೆಲೆ ಘೋಷಿಸುವಂತೆ ಮನವಿಸಲಾಯಿತು.
ಉಜಿರೆ ರಬ್ಬರ್ ಸೊಸೈಟಿ ಹಾಗೂ ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಶನ್ ಹಾಗೂ ಶಾಸಕ ಹರೀಶ್ ಪೂಂಜಾ ನೇತೃತ್ವದ ನಿಯೋಗವು ಸಚಿವರನ್ನು ಭೇಟಿಯಾಯಿತು. ಈ ಸಂದರ್ಭ ರಬ್ಬರ್ ಕೃಷಿಕರ ಸಮಸ್ಯೆಯನ್ನು ಸಚಿವರಿಗೆ ಮನವರಿಕೆ ಮಾಡಲಾಯಿತು. ಅಲ್ಲದೆ ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲೂ ಬೆಂಬಲ ಬೆಲೆ ಘೋಷಿಸುವಂತೆ ಮನವಿಸಲಾಯಿತು.
ಈ ವೇಳೆ ಪ್ರತಿಕ್ರಿಯಿಸಿದ ಸಚಿವರು ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ನಿಯೋಗದಲ್ಲಿ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ್ ಜಿ ಭಿಡೆ, ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಶನ್ ನಿರ್ದೇಶಕ ಫಾ. ಶಾಜಿ ಮ್ಯಾಥ್ಯು , ಅಧ್ಯಕ್ಷ ಬಿಟ್ಟಿ ಬಿ ನೆಡುನಿಲಂ, ಪ್ರಧಾನ ಕಾರ್ಯದರ್ಶಿ ಸೆಬಾಸ್ಟಿಯನ್ ಎಂ.ಜೆ, ಪಿಆರ್ಒ ಸೆಬಾಸ್ಟಿಯನ್ ಪಿ ಸಿ, , ಸಿಇಒ ರಾಜು ಶೆಟ್ಟಿ, ನಿರ್ದೇಶಕ ಎಚ್ ಪದ್ಮ ಗೌಡ ಮೊದಲಾದವರು ಉಪಸ್ಥಿತರಿದ್ದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…