ರಬ್ಬರ್ ಬೆಲೆ ಕುಸಿತ ಹಾಗೂ ಇತರ ಸಮಸ್ಯೆಗಳ ಬಗ್ಗೆ ನಿಯೋಗವು ಬೆಂಗಳೂರಿನಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲೂ ಬೆಂಬಲ ಬೆಲೆ ಘೋಷಿಸುವಂತೆ ಮನವಿಸಲಾಯಿತು.
ಉಜಿರೆ ರಬ್ಬರ್ ಸೊಸೈಟಿ ಹಾಗೂ ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಶನ್ ಹಾಗೂ ಶಾಸಕ ಹರೀಶ್ ಪೂಂಜಾ ನೇತೃತ್ವದ ನಿಯೋಗವು ಸಚಿವರನ್ನು ಭೇಟಿಯಾಯಿತು. ಈ ಸಂದರ್ಭ ರಬ್ಬರ್ ಕೃಷಿಕರ ಸಮಸ್ಯೆಯನ್ನು ಸಚಿವರಿಗೆ ಮನವರಿಕೆ ಮಾಡಲಾಯಿತು. ಅಲ್ಲದೆ ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲೂ ಬೆಂಬಲ ಬೆಲೆ ಘೋಷಿಸುವಂತೆ ಮನವಿಸಲಾಯಿತು.
ಈ ವೇಳೆ ಪ್ರತಿಕ್ರಿಯಿಸಿದ ಸಚಿವರು ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ನಿಯೋಗದಲ್ಲಿ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ್ ಜಿ ಭಿಡೆ, ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಶನ್ ನಿರ್ದೇಶಕ ಫಾ. ಶಾಜಿ ಮ್ಯಾಥ್ಯು , ಅಧ್ಯಕ್ಷ ಬಿಟ್ಟಿ ಬಿ ನೆಡುನಿಲಂ, ಪ್ರಧಾನ ಕಾರ್ಯದರ್ಶಿ ಸೆಬಾಸ್ಟಿಯನ್ ಎಂ.ಜೆ, ಪಿಆರ್ಒ ಸೆಬಾಸ್ಟಿಯನ್ ಪಿ ಸಿ, , ಸಿಇಒ ರಾಜು ಶೆಟ್ಟಿ, ನಿರ್ದೇಶಕ ಎಚ್ ಪದ್ಮ ಗೌಡ ಮೊದಲಾದವರು ಉಪಸ್ಥಿತರಿದ್ದರು.
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…