ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್ ಆಮದು ನೀತಿಯು ರಬ್ಬರ್ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಲಿದೆ ಎಂದು ಕೇರಳದ ಮಾತೃಭೂಮಿ ವರದಿ ಮಾಡಿದೆ.
ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ರಬ್ಬರ್ ಉತ್ಪಾದನೆಯಲ್ಲಿ ಹೆಚ್ಚಳವಾಗಿದೆ. ಅದೇ ಸಮಯದಲ್ಲಿ, ರಬ್ಬರ್ ಮತ್ತು ಸಂಯುಕ್ತ ರಬ್ಬರ್ ಆಮದಿನಲ್ಲಿ ಏರಿಕೆ ಕಂಡುಬಂದಿದೆ. 2024-25ರ ಹಣಕಾಸು ವರ್ಷದಲ್ಲಿ ಉತ್ಪಾದನೆಯು ಶೇ. 2.1 ರಷ್ಟು ಹೆಚ್ಚಾಗಿದ್ದರೂ, ಆಮದು ಶೇ. 11.8 ರಷ್ಟು ಹೆಚ್ಚಾಗಿದೆ. ಸಂಯುಕ್ತ ರಬ್ಬರ್ ಆಮದಿನಲ್ಲಿನ ಏರಿಕೆ ಕೃಷಿ ವಲಯಕ್ಕೆ ಕಳವಳಕಾರಿ ಸಂಗತಿಯಾಗಿದೆ. ಇದು ಶೇ. 44.5 ರಷ್ಟು ಹೆಚ್ಚಳವಾಗಿದೆ. ಸಂಯುಕ್ತ ರಬ್ಬರ್ ಆಮದು 2.45 ಲಕ್ಷ ಟನ್ಗಳಷ್ಟಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ದೇಶವು ವಾರ್ಷಿಕವಾಗಿ 7,000 ಕೋಟಿ ರೂ. ಮೌಲ್ಯದ ರಬ್ಬರ್ ಆಮದು ಮಾಡಿಕೊಳ್ಳುತ್ತದೆ. ಉತ್ಪಾದನೆ ಮತ್ತು ಬಳಕೆಯ ನಡುವೆ 5.35 ಲಕ್ಷ ಟನ್ಗಳ ಅಂತರವಿದೆ. ಈ ಅಂತರವನ್ನು ತುಂಬುವ ಗುರಿಯನ್ನು ಇರಿಸಿಕೊಂಡು ದೇಶದ ಈಶಾನ್ಯ ರಾಜ್ಯಗಳಿಗೆ ಕೃಷಿಯ ವಿಸ್ತರಣೆ ಹೊಂದಿದೆ. ಅಲ್ಲಿ ಕೃಷಿ ಚಟುವಟಿಕೆಗೆ ವೇಗ ನೀಡಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆಗಳು ಏರುತ್ತಿರುವಾಗಲೂ ಟೈರ್ ಕಂಪನಿಗಳು ಸ್ಥಳೀಯ ರಬ್ಬರ್ ಖರೀದಿಸದೆ ಆಮದು ಮಾಡಿಕೊಳ್ಳುತ್ತಿವೆ. ಆಸಿಯಾನ್ ದೇಶಗಳಾದ ಥೈಲ್ಯಾಂಡ್, ಮಲೇಷ್ಯಾ ಮತ್ತು ಇಂಡೋನೇಷ್ಯಾದಿಂದ ರಬ್ಬರ್ ಆಮದು ನಡೆಯುತ್ತಿದೆ. ಇಲ್ಲಿ ಆಮದು ಸುಂಕ ಅತೀ ಕಡಿಮೆ ಅಂದರೆ 0-5 ಶೇಕಡಾವರೆಗೆ ಆಮದು ಸುಂಕ ಇರುವುದರಿಂದ ಅಲ್ಲಿಂದ ಹೆಚ್ಚಿನ ಪ್ರಮಾಣದ ಸಂಯುಕ್ತ ರಬ್ಬರ್ ಬರುತ್ತಿದೆ. ಹೀಗಾಗಿ ರಬ್ಬರ್ ಧಾರಣೆಯು ಬೆಳೆಗಾರರಿಗೆ ಸಮಧಾನಕರವಾಗಿಲ್ಲ ಎಂದು ಮಾತೃಭೂಮಿ ವರದಿಯಲ್ಲಿ ತಿಳಿಸಿದೆ.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…