Advertisement
MIRROR FOCUS

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

Share

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಲಿದೆ ಎಂದು ಕೇರಳದ ಮಾತೃಭೂಮಿ ವರದಿ ಮಾಡಿದೆ.

ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ರಬ್ಬರ್ ಉತ್ಪಾದನೆಯಲ್ಲಿ  ಹೆಚ್ಚಳವಾಗಿದೆ. ಅದೇ ಸಮಯದಲ್ಲಿ, ರಬ್ಬ‌ರ್ ಮತ್ತು ಸಂಯುಕ್ತ ರಬ್ಬರ್ ಆಮದಿನಲ್ಲಿ ಏರಿಕೆ ಕಂಡುಬಂದಿದೆ. 2024-25ರ ಹಣಕಾಸು ವರ್ಷದಲ್ಲಿ ಉತ್ಪಾದನೆಯು ಶೇ. 2.1 ರಷ್ಟು ಹೆಚ್ಚಾಗಿದ್ದರೂ, ಆಮದು ಶೇ. 11.8 ರಷ್ಟು ಹೆಚ್ಚಾಗಿದೆ. ಸಂಯುಕ್ತ ರಬ್ಬರ್ ಆಮದಿನಲ್ಲಿನ ಏರಿಕೆ ಕೃಷಿ ವಲಯಕ್ಕೆ ಕಳವಳಕಾರಿ ಸಂಗತಿಯಾಗಿದೆ. ಇದು ಶೇ. 44.5 ರಷ್ಟು ಹೆಚ್ಚಳವಾಗಿದೆ. ಸಂಯುಕ್ತ ರಬ್ಬರ್ ಆಮದು 2.45 ಲಕ್ಷ ಟನ್‌ಗಳಷ್ಟಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ದೇಶವು ವಾರ್ಷಿಕವಾಗಿ 7,000 ಕೋಟಿ ರೂ. ಮೌಲ್ಯದ ರಬ್ಬರ್  ಆಮದು ಮಾಡಿಕೊಳ್ಳುತ್ತದೆ. ಉತ್ಪಾದನೆ ಮತ್ತು ಬಳಕೆಯ ನಡುವೆ 5.35 ಲಕ್ಷ ಟನ್‌ಗಳ ಅಂತರವಿದೆ. ಈ ಅಂತರವನ್ನು ತುಂಬುವ ಗುರಿಯನ್ನು ಇರಿಸಿಕೊಂಡು ದೇಶದ ಈಶಾನ್ಯ ರಾಜ್ಯಗಳಿಗೆ ಕೃಷಿಯ ವಿಸ್ತರಣೆ ಹೊಂದಿದೆ. ಅಲ್ಲಿ ಕೃಷಿ ಚಟುವಟಿಕೆಗೆ ವೇಗ ನೀಡಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆಗಳು ಏರುತ್ತಿರುವಾಗಲೂ ಟೈರ್ ಕಂಪನಿಗಳು  ಸ್ಥಳೀಯ ರಬ್ಬರ್‌  ಖರೀದಿಸದೆ ಆಮದು ಮಾಡಿಕೊಳ್ಳುತ್ತಿವೆ. ಆಸಿಯಾನ್ ದೇಶಗಳಾದ ಥೈಲ್ಯಾಂಡ್, ಮಲೇಷ್ಯಾ ಮತ್ತು ಇಂಡೋನೇಷ್ಯಾದಿಂದ ರಬ್ಬರ್‌ ಆಮದು ನಡೆಯುತ್ತಿದೆ. ಇಲ್ಲಿ ಆಮದು ಸುಂಕ ಅತೀ ಕಡಿಮೆ ಅಂದರೆ 0-5 ಶೇಕಡಾವರೆಗೆ ಆಮದು ಸುಂಕ ಇರುವುದರಿಂದ ಅಲ್ಲಿಂದ ಹೆಚ್ಚಿನ ಪ್ರಮಾಣದ ಸಂಯುಕ್ತ ರಬ್ಬರ್ ಬರುತ್ತಿದೆ. ಹೀಗಾಗಿ ರಬ್ಬರ್‌ ಧಾರಣೆಯು ಬೆಳೆಗಾರರಿಗೆ ಸಮಧಾನಕರವಾಗಿಲ್ಲ ಎಂದು ಮಾತೃಭೂಮಿ ವರದಿಯಲ್ಲಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

4 minutes ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

6 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

6 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

20 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

24 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago