ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್ ಆಮದು ನೀತಿಯು ರಬ್ಬರ್ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಲಿದೆ ಎಂದು ಕೇರಳದ ಮಾತೃಭೂಮಿ ವರದಿ ಮಾಡಿದೆ.
ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ರಬ್ಬರ್ ಉತ್ಪಾದನೆಯಲ್ಲಿ ಹೆಚ್ಚಳವಾಗಿದೆ. ಅದೇ ಸಮಯದಲ್ಲಿ, ರಬ್ಬರ್ ಮತ್ತು ಸಂಯುಕ್ತ ರಬ್ಬರ್ ಆಮದಿನಲ್ಲಿ ಏರಿಕೆ ಕಂಡುಬಂದಿದೆ. 2024-25ರ ಹಣಕಾಸು ವರ್ಷದಲ್ಲಿ ಉತ್ಪಾದನೆಯು ಶೇ. 2.1 ರಷ್ಟು ಹೆಚ್ಚಾಗಿದ್ದರೂ, ಆಮದು ಶೇ. 11.8 ರಷ್ಟು ಹೆಚ್ಚಾಗಿದೆ. ಸಂಯುಕ್ತ ರಬ್ಬರ್ ಆಮದಿನಲ್ಲಿನ ಏರಿಕೆ ಕೃಷಿ ವಲಯಕ್ಕೆ ಕಳವಳಕಾರಿ ಸಂಗತಿಯಾಗಿದೆ. ಇದು ಶೇ. 44.5 ರಷ್ಟು ಹೆಚ್ಚಳವಾಗಿದೆ. ಸಂಯುಕ್ತ ರಬ್ಬರ್ ಆಮದು 2.45 ಲಕ್ಷ ಟನ್ಗಳಷ್ಟಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ದೇಶವು ವಾರ್ಷಿಕವಾಗಿ 7,000 ಕೋಟಿ ರೂ. ಮೌಲ್ಯದ ರಬ್ಬರ್ ಆಮದು ಮಾಡಿಕೊಳ್ಳುತ್ತದೆ. ಉತ್ಪಾದನೆ ಮತ್ತು ಬಳಕೆಯ ನಡುವೆ 5.35 ಲಕ್ಷ ಟನ್ಗಳ ಅಂತರವಿದೆ. ಈ ಅಂತರವನ್ನು ತುಂಬುವ ಗುರಿಯನ್ನು ಇರಿಸಿಕೊಂಡು ದೇಶದ ಈಶಾನ್ಯ ರಾಜ್ಯಗಳಿಗೆ ಕೃಷಿಯ ವಿಸ್ತರಣೆ ಹೊಂದಿದೆ. ಅಲ್ಲಿ ಕೃಷಿ ಚಟುವಟಿಕೆಗೆ ವೇಗ ನೀಡಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆಗಳು ಏರುತ್ತಿರುವಾಗಲೂ ಟೈರ್ ಕಂಪನಿಗಳು ಸ್ಥಳೀಯ ರಬ್ಬರ್ ಖರೀದಿಸದೆ ಆಮದು ಮಾಡಿಕೊಳ್ಳುತ್ತಿವೆ. ಆಸಿಯಾನ್ ದೇಶಗಳಾದ ಥೈಲ್ಯಾಂಡ್, ಮಲೇಷ್ಯಾ ಮತ್ತು ಇಂಡೋನೇಷ್ಯಾದಿಂದ ರಬ್ಬರ್ ಆಮದು ನಡೆಯುತ್ತಿದೆ. ಇಲ್ಲಿ ಆಮದು ಸುಂಕ ಅತೀ ಕಡಿಮೆ ಅಂದರೆ 0-5 ಶೇಕಡಾವರೆಗೆ ಆಮದು ಸುಂಕ ಇರುವುದರಿಂದ ಅಲ್ಲಿಂದ ಹೆಚ್ಚಿನ ಪ್ರಮಾಣದ ಸಂಯುಕ್ತ ರಬ್ಬರ್ ಬರುತ್ತಿದೆ. ಹೀಗಾಗಿ ರಬ್ಬರ್ ಧಾರಣೆಯು ಬೆಳೆಗಾರರಿಗೆ ಸಮಧಾನಕರವಾಗಿಲ್ಲ ಎಂದು ಮಾತೃಭೂಮಿ ವರದಿಯಲ್ಲಿ ತಿಳಿಸಿದೆ.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…