Advertisement
MIRROR FOCUS

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

Share

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಲಿದೆ ಎಂದು ಕೇರಳದ ಮಾತೃಭೂಮಿ ವರದಿ ಮಾಡಿದೆ.

ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ರಬ್ಬರ್ ಉತ್ಪಾದನೆಯಲ್ಲಿ  ಹೆಚ್ಚಳವಾಗಿದೆ. ಅದೇ ಸಮಯದಲ್ಲಿ, ರಬ್ಬ‌ರ್ ಮತ್ತು ಸಂಯುಕ್ತ ರಬ್ಬರ್ ಆಮದಿನಲ್ಲಿ ಏರಿಕೆ ಕಂಡುಬಂದಿದೆ. 2024-25ರ ಹಣಕಾಸು ವರ್ಷದಲ್ಲಿ ಉತ್ಪಾದನೆಯು ಶೇ. 2.1 ರಷ್ಟು ಹೆಚ್ಚಾಗಿದ್ದರೂ, ಆಮದು ಶೇ. 11.8 ರಷ್ಟು ಹೆಚ್ಚಾಗಿದೆ. ಸಂಯುಕ್ತ ರಬ್ಬರ್ ಆಮದಿನಲ್ಲಿನ ಏರಿಕೆ ಕೃಷಿ ವಲಯಕ್ಕೆ ಕಳವಳಕಾರಿ ಸಂಗತಿಯಾಗಿದೆ. ಇದು ಶೇ. 44.5 ರಷ್ಟು ಹೆಚ್ಚಳವಾಗಿದೆ. ಸಂಯುಕ್ತ ರಬ್ಬರ್ ಆಮದು 2.45 ಲಕ್ಷ ಟನ್‌ಗಳಷ್ಟಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ದೇಶವು ವಾರ್ಷಿಕವಾಗಿ 7,000 ಕೋಟಿ ರೂ. ಮೌಲ್ಯದ ರಬ್ಬರ್  ಆಮದು ಮಾಡಿಕೊಳ್ಳುತ್ತದೆ. ಉತ್ಪಾದನೆ ಮತ್ತು ಬಳಕೆಯ ನಡುವೆ 5.35 ಲಕ್ಷ ಟನ್‌ಗಳ ಅಂತರವಿದೆ. ಈ ಅಂತರವನ್ನು ತುಂಬುವ ಗುರಿಯನ್ನು ಇರಿಸಿಕೊಂಡು ದೇಶದ ಈಶಾನ್ಯ ರಾಜ್ಯಗಳಿಗೆ ಕೃಷಿಯ ವಿಸ್ತರಣೆ ಹೊಂದಿದೆ. ಅಲ್ಲಿ ಕೃಷಿ ಚಟುವಟಿಕೆಗೆ ವೇಗ ನೀಡಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆಗಳು ಏರುತ್ತಿರುವಾಗಲೂ ಟೈರ್ ಕಂಪನಿಗಳು  ಸ್ಥಳೀಯ ರಬ್ಬರ್‌  ಖರೀದಿಸದೆ ಆಮದು ಮಾಡಿಕೊಳ್ಳುತ್ತಿವೆ. ಆಸಿಯಾನ್ ದೇಶಗಳಾದ ಥೈಲ್ಯಾಂಡ್, ಮಲೇಷ್ಯಾ ಮತ್ತು ಇಂಡೋನೇಷ್ಯಾದಿಂದ ರಬ್ಬರ್‌ ಆಮದು ನಡೆಯುತ್ತಿದೆ. ಇಲ್ಲಿ ಆಮದು ಸುಂಕ ಅತೀ ಕಡಿಮೆ ಅಂದರೆ 0-5 ಶೇಕಡಾವರೆಗೆ ಆಮದು ಸುಂಕ ಇರುವುದರಿಂದ ಅಲ್ಲಿಂದ ಹೆಚ್ಚಿನ ಪ್ರಮಾಣದ ಸಂಯುಕ್ತ ರಬ್ಬರ್ ಬರುತ್ತಿದೆ. ಹೀಗಾಗಿ ರಬ್ಬರ್‌ ಧಾರಣೆಯು ಬೆಳೆಗಾರರಿಗೆ ಸಮಧಾನಕರವಾಗಿಲ್ಲ ಎಂದು ಮಾತೃಭೂಮಿ ವರದಿಯಲ್ಲಿ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

1 hour ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

13 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

14 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

21 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago