Advertisement
MIRROR FOCUS

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

Share

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಲಿದೆ ಎಂದು ಕೇರಳದ ಮಾತೃಭೂಮಿ ವರದಿ ಮಾಡಿದೆ.

ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ರಬ್ಬರ್ ಉತ್ಪಾದನೆಯಲ್ಲಿ  ಹೆಚ್ಚಳವಾಗಿದೆ. ಅದೇ ಸಮಯದಲ್ಲಿ, ರಬ್ಬ‌ರ್ ಮತ್ತು ಸಂಯುಕ್ತ ರಬ್ಬರ್ ಆಮದಿನಲ್ಲಿ ಏರಿಕೆ ಕಂಡುಬಂದಿದೆ. 2024-25ರ ಹಣಕಾಸು ವರ್ಷದಲ್ಲಿ ಉತ್ಪಾದನೆಯು ಶೇ. 2.1 ರಷ್ಟು ಹೆಚ್ಚಾಗಿದ್ದರೂ, ಆಮದು ಶೇ. 11.8 ರಷ್ಟು ಹೆಚ್ಚಾಗಿದೆ. ಸಂಯುಕ್ತ ರಬ್ಬರ್ ಆಮದಿನಲ್ಲಿನ ಏರಿಕೆ ಕೃಷಿ ವಲಯಕ್ಕೆ ಕಳವಳಕಾರಿ ಸಂಗತಿಯಾಗಿದೆ. ಇದು ಶೇ. 44.5 ರಷ್ಟು ಹೆಚ್ಚಳವಾಗಿದೆ. ಸಂಯುಕ್ತ ರಬ್ಬರ್ ಆಮದು 2.45 ಲಕ್ಷ ಟನ್‌ಗಳಷ್ಟಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ದೇಶವು ವಾರ್ಷಿಕವಾಗಿ 7,000 ಕೋಟಿ ರೂ. ಮೌಲ್ಯದ ರಬ್ಬರ್  ಆಮದು ಮಾಡಿಕೊಳ್ಳುತ್ತದೆ. ಉತ್ಪಾದನೆ ಮತ್ತು ಬಳಕೆಯ ನಡುವೆ 5.35 ಲಕ್ಷ ಟನ್‌ಗಳ ಅಂತರವಿದೆ. ಈ ಅಂತರವನ್ನು ತುಂಬುವ ಗುರಿಯನ್ನು ಇರಿಸಿಕೊಂಡು ದೇಶದ ಈಶಾನ್ಯ ರಾಜ್ಯಗಳಿಗೆ ಕೃಷಿಯ ವಿಸ್ತರಣೆ ಹೊಂದಿದೆ. ಅಲ್ಲಿ ಕೃಷಿ ಚಟುವಟಿಕೆಗೆ ವೇಗ ನೀಡಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆಗಳು ಏರುತ್ತಿರುವಾಗಲೂ ಟೈರ್ ಕಂಪನಿಗಳು  ಸ್ಥಳೀಯ ರಬ್ಬರ್‌  ಖರೀದಿಸದೆ ಆಮದು ಮಾಡಿಕೊಳ್ಳುತ್ತಿವೆ. ಆಸಿಯಾನ್ ದೇಶಗಳಾದ ಥೈಲ್ಯಾಂಡ್, ಮಲೇಷ್ಯಾ ಮತ್ತು ಇಂಡೋನೇಷ್ಯಾದಿಂದ ರಬ್ಬರ್‌ ಆಮದು ನಡೆಯುತ್ತಿದೆ. ಇಲ್ಲಿ ಆಮದು ಸುಂಕ ಅತೀ ಕಡಿಮೆ ಅಂದರೆ 0-5 ಶೇಕಡಾವರೆಗೆ ಆಮದು ಸುಂಕ ಇರುವುದರಿಂದ ಅಲ್ಲಿಂದ ಹೆಚ್ಚಿನ ಪ್ರಮಾಣದ ಸಂಯುಕ್ತ ರಬ್ಬರ್ ಬರುತ್ತಿದೆ. ಹೀಗಾಗಿ ರಬ್ಬರ್‌ ಧಾರಣೆಯು ಬೆಳೆಗಾರರಿಗೆ ಸಮಧಾನಕರವಾಗಿಲ್ಲ ಎಂದು ಮಾತೃಭೂಮಿ ವರದಿಯಲ್ಲಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 hour ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

10 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

10 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

10 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

11 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

21 hours ago