Advertisement
MIRROR FOCUS

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

Share

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಲಿದೆ ಎಂದು ಕೇರಳದ ಮಾತೃಭೂಮಿ ವರದಿ ಮಾಡಿದೆ.

ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ರಬ್ಬರ್ ಉತ್ಪಾದನೆಯಲ್ಲಿ  ಹೆಚ್ಚಳವಾಗಿದೆ. ಅದೇ ಸಮಯದಲ್ಲಿ, ರಬ್ಬ‌ರ್ ಮತ್ತು ಸಂಯುಕ್ತ ರಬ್ಬರ್ ಆಮದಿನಲ್ಲಿ ಏರಿಕೆ ಕಂಡುಬಂದಿದೆ. 2024-25ರ ಹಣಕಾಸು ವರ್ಷದಲ್ಲಿ ಉತ್ಪಾದನೆಯು ಶೇ. 2.1 ರಷ್ಟು ಹೆಚ್ಚಾಗಿದ್ದರೂ, ಆಮದು ಶೇ. 11.8 ರಷ್ಟು ಹೆಚ್ಚಾಗಿದೆ. ಸಂಯುಕ್ತ ರಬ್ಬರ್ ಆಮದಿನಲ್ಲಿನ ಏರಿಕೆ ಕೃಷಿ ವಲಯಕ್ಕೆ ಕಳವಳಕಾರಿ ಸಂಗತಿಯಾಗಿದೆ. ಇದು ಶೇ. 44.5 ರಷ್ಟು ಹೆಚ್ಚಳವಾಗಿದೆ. ಸಂಯುಕ್ತ ರಬ್ಬರ್ ಆಮದು 2.45 ಲಕ್ಷ ಟನ್‌ಗಳಷ್ಟಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ದೇಶವು ವಾರ್ಷಿಕವಾಗಿ 7,000 ಕೋಟಿ ರೂ. ಮೌಲ್ಯದ ರಬ್ಬರ್  ಆಮದು ಮಾಡಿಕೊಳ್ಳುತ್ತದೆ. ಉತ್ಪಾದನೆ ಮತ್ತು ಬಳಕೆಯ ನಡುವೆ 5.35 ಲಕ್ಷ ಟನ್‌ಗಳ ಅಂತರವಿದೆ. ಈ ಅಂತರವನ್ನು ತುಂಬುವ ಗುರಿಯನ್ನು ಇರಿಸಿಕೊಂಡು ದೇಶದ ಈಶಾನ್ಯ ರಾಜ್ಯಗಳಿಗೆ ಕೃಷಿಯ ವಿಸ್ತರಣೆ ಹೊಂದಿದೆ. ಅಲ್ಲಿ ಕೃಷಿ ಚಟುವಟಿಕೆಗೆ ವೇಗ ನೀಡಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆಗಳು ಏರುತ್ತಿರುವಾಗಲೂ ಟೈರ್ ಕಂಪನಿಗಳು  ಸ್ಥಳೀಯ ರಬ್ಬರ್‌  ಖರೀದಿಸದೆ ಆಮದು ಮಾಡಿಕೊಳ್ಳುತ್ತಿವೆ. ಆಸಿಯಾನ್ ದೇಶಗಳಾದ ಥೈಲ್ಯಾಂಡ್, ಮಲೇಷ್ಯಾ ಮತ್ತು ಇಂಡೋನೇಷ್ಯಾದಿಂದ ರಬ್ಬರ್‌ ಆಮದು ನಡೆಯುತ್ತಿದೆ. ಇಲ್ಲಿ ಆಮದು ಸುಂಕ ಅತೀ ಕಡಿಮೆ ಅಂದರೆ 0-5 ಶೇಕಡಾವರೆಗೆ ಆಮದು ಸುಂಕ ಇರುವುದರಿಂದ ಅಲ್ಲಿಂದ ಹೆಚ್ಚಿನ ಪ್ರಮಾಣದ ಸಂಯುಕ್ತ ರಬ್ಬರ್ ಬರುತ್ತಿದೆ. ಹೀಗಾಗಿ ರಬ್ಬರ್‌ ಧಾರಣೆಯು ಬೆಳೆಗಾರರಿಗೆ ಸಮಧಾನಕರವಾಗಿಲ್ಲ ಎಂದು ಮಾತೃಭೂಮಿ ವರದಿಯಲ್ಲಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

33 minutes ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 hour ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 hour ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

7 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

9 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

10 hours ago