Advertisement
MIRROR FOCUS

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

Share

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಲಿದೆ ಎಂದು ಕೇರಳದ ಮಾತೃಭೂಮಿ ವರದಿ ಮಾಡಿದೆ.

ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ರಬ್ಬರ್ ಉತ್ಪಾದನೆಯಲ್ಲಿ  ಹೆಚ್ಚಳವಾಗಿದೆ. ಅದೇ ಸಮಯದಲ್ಲಿ, ರಬ್ಬ‌ರ್ ಮತ್ತು ಸಂಯುಕ್ತ ರಬ್ಬರ್ ಆಮದಿನಲ್ಲಿ ಏರಿಕೆ ಕಂಡುಬಂದಿದೆ. 2024-25ರ ಹಣಕಾಸು ವರ್ಷದಲ್ಲಿ ಉತ್ಪಾದನೆಯು ಶೇ. 2.1 ರಷ್ಟು ಹೆಚ್ಚಾಗಿದ್ದರೂ, ಆಮದು ಶೇ. 11.8 ರಷ್ಟು ಹೆಚ್ಚಾಗಿದೆ. ಸಂಯುಕ್ತ ರಬ್ಬರ್ ಆಮದಿನಲ್ಲಿನ ಏರಿಕೆ ಕೃಷಿ ವಲಯಕ್ಕೆ ಕಳವಳಕಾರಿ ಸಂಗತಿಯಾಗಿದೆ. ಇದು ಶೇ. 44.5 ರಷ್ಟು ಹೆಚ್ಚಳವಾಗಿದೆ. ಸಂಯುಕ್ತ ರಬ್ಬರ್ ಆಮದು 2.45 ಲಕ್ಷ ಟನ್‌ಗಳಷ್ಟಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ದೇಶವು ವಾರ್ಷಿಕವಾಗಿ 7,000 ಕೋಟಿ ರೂ. ಮೌಲ್ಯದ ರಬ್ಬರ್  ಆಮದು ಮಾಡಿಕೊಳ್ಳುತ್ತದೆ. ಉತ್ಪಾದನೆ ಮತ್ತು ಬಳಕೆಯ ನಡುವೆ 5.35 ಲಕ್ಷ ಟನ್‌ಗಳ ಅಂತರವಿದೆ. ಈ ಅಂತರವನ್ನು ತುಂಬುವ ಗುರಿಯನ್ನು ಇರಿಸಿಕೊಂಡು ದೇಶದ ಈಶಾನ್ಯ ರಾಜ್ಯಗಳಿಗೆ ಕೃಷಿಯ ವಿಸ್ತರಣೆ ಹೊಂದಿದೆ. ಅಲ್ಲಿ ಕೃಷಿ ಚಟುವಟಿಕೆಗೆ ವೇಗ ನೀಡಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆಗಳು ಏರುತ್ತಿರುವಾಗಲೂ ಟೈರ್ ಕಂಪನಿಗಳು  ಸ್ಥಳೀಯ ರಬ್ಬರ್‌  ಖರೀದಿಸದೆ ಆಮದು ಮಾಡಿಕೊಳ್ಳುತ್ತಿವೆ. ಆಸಿಯಾನ್ ದೇಶಗಳಾದ ಥೈಲ್ಯಾಂಡ್, ಮಲೇಷ್ಯಾ ಮತ್ತು ಇಂಡೋನೇಷ್ಯಾದಿಂದ ರಬ್ಬರ್‌ ಆಮದು ನಡೆಯುತ್ತಿದೆ. ಇಲ್ಲಿ ಆಮದು ಸುಂಕ ಅತೀ ಕಡಿಮೆ ಅಂದರೆ 0-5 ಶೇಕಡಾವರೆಗೆ ಆಮದು ಸುಂಕ ಇರುವುದರಿಂದ ಅಲ್ಲಿಂದ ಹೆಚ್ಚಿನ ಪ್ರಮಾಣದ ಸಂಯುಕ್ತ ರಬ್ಬರ್ ಬರುತ್ತಿದೆ. ಹೀಗಾಗಿ ರಬ್ಬರ್‌ ಧಾರಣೆಯು ಬೆಳೆಗಾರರಿಗೆ ಸಮಧಾನಕರವಾಗಿಲ್ಲ ಎಂದು ಮಾತೃಭೂಮಿ ವರದಿಯಲ್ಲಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

5 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

6 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

15 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

15 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

15 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

20 hours ago