MIRROR FOCUS

ಸತತವಾಗಿ ಕುಸಿಯುತ್ತಿರುವ ರಬ್ಬರ್‌ ಧಾರಣೆ | ಒಂದು ತಿಂಗಳಲ್ಲಿ 35 ರೂಪಾಯಿ ಕುಸಿತ ಧಾರಣೆ | ಸುಂಕ ರಹಿತ ಆಮದು ಮಾಡಿಕೊಳ್ಳುವ ಹುನ್ನಾರವೇ ? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ನಾಲ್ಕು ವರ್ಷಗಳ ನಂತರ ನೈಸರ್ಗಿಕ ರಬ್ಬರ್‌ ಮಾರುಕಟ್ಟೆ ಚೇತರಿಕೆ ಕಂಡುಬಂದಿತ್ತು. ಪ್ರತೀ ಕೆಜಿಗೆ 192 ರೂಪಾಯಿವರೆಗೂ ತಲುಪಿ ಕೃಷಿಕರೂ ನಿಟ್ಟುಸಿರು ಬಿಡುವಂತೆ ಮಾಡಿತ್ತು. ಇದೀಗ ಒಂದು ತಿಂಗಳಿನಿಂದ ಧಾರಣೆ ಕುಸಿಯುತ್ತಿದ್ದು ಸದ್ಯ 158 ರೂಪಾಯಿ ಆಸುಪಾಸಿಗೆ ಬಂದಿದೆ. ಹೀಗಾಗಿ ಮತ್ತೆ ರಬ್ಬರ್‌ ಬೆಳೆಗಾರರು ಚಿಂತಿಸುವಂತೆ ಮಾಡಿದೆ.

Advertisement

ಕೊರೋನಾ ಕಾರಣದಿಂದ ಜಾಗತಿಕವಾಗಿ ವಾಹನ ಉದ್ದಿಮೆಗಳ ವ್ಯಾಪಾರ ವಹಿವಾಟು  ಕಡಿಮೆಯಾಗಿತ್ತು. ಹೀಗಾಗಿ ರಬ್ಬರ್‌ ಬಳಕೆ ಕೂಡಾ ಇಳಿಕೆಯಾಗಿತ್ತು. ಈ ಕಾರಣದಿಂದ ನೈಸರ್ಗಿಕ ರಬ್ಬರ್‌ ಧಾರಣೆ ಇಳಿಕೆಯ ಹಾದಿಯಲ್ಲಿ ಸಾಗಿತು. ಕೊರೋನಾ ನಂತರ ಉದ್ದಿಮೆಗಳು ಮತ್ತೆ ಬಲಗೊಂಡು ರಬ್ಬರ್‌ ಧಾರಣೆ ಕೂಡಾ ಜಾಗತಿಕವಾಗಿ ಏರಿಕೆಯ ಹಾದಿಯಲ್ಲಿ ಸಾಗಿತು. ಚೀನಾದಂತಹ ದೇಶಗಳಲ್ಲಿ ರಬ್ಬರ್‌ ಬಳಕೆ ಹೆಚ್ಚಾಗಿಯೇ ಮುಂದುವರಿಯಿತು. ಭಾರತ ಕೂಡಾ ದೇಶೀಯ ರಬ್ಬರ್‌ ಬಳಕೆಗೇ ಆದ್ಯತೆ ನೀಡಿತು. ಇದೀಗ ಮತ್ತೆ ಕೊರೋನಾ ಅಬ್ಬರದ ಕಾರಣದಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ರಬ್ಬರ್‌ ಧಾರಣೆಯ ಮೇಲೆ ಹೊಡೆತ ಬಿದ್ದಿದೆ.

ಆದರೆ ಭಾರತದಲ್ಲಿ ದೇಶೀಯ ರಬ್ಬರ್‌ ಉತ್ಪಾದನೆ ಇದ್ದರೂ ಸುಂಕ ರಹಿತವಾಗಿ ರಬ್ಬರ್‌ ಆಮದಿಗೆ ಒತ್ತಾಯ ಕೇಳಿಬಂದಿದೆ. ನೈಸರ್ಗಿಕ ರಬ್ಬರನ್ನು ಸುಂಕ ರಹಿತವಾಗಿ ಆಮದು ಮಾಡಿಕೊಳ್ಳಲು ಟೈರ್ ಉದ್ಯಮ ಸಂಸ್ಥೆಗಳು ಸರ್ಕಾರವನ್ನು ಒತ್ತಾಯಿಸುತ್ತಿದೆ. ಈಗಿನ ಯೋಜನೆಯಂತೆ 7,90,000 ಟನ್‌ ರಬ್ಬರ್‌ ಆಮದಿಗೆ ಬೇಡಿಕೆ ವ್ಯಕ್ತವಾಗಿದೆ. ಇದರಿಂದ ದೇಶೀಯ ರಬ್ಬರ್‌ ಮಾರುಕಟ್ಟೆ ಮೇಲೆ ಹೊಡೆತ ಬೀಳುವುದಲ್ಲದೆ ಇಲ್ಲಿನ ಕೃಷಿಕರು ಬೆಳೆಯುವ ರಬ್ಬರ್‌ ಮೇಲೂ ಪರಿಣಾಮವಾಗುತ್ತಿದೆ. ಈ ಕಾರಣದಿಂದ ಭಾರತದ ರಬ್ಬರ್‌ ಧಾರಣೆ ಸದ್ಯ ಇಳಿಕೆಯ ಹಾದಿಯಲ್ಲಿದೆ ಎನ್ನುವುದು  ರಬ್ಬರ್‌ ಮಾರುಕಟ್ಟೆ ವಲಯದ ಅಭಿಪ್ರಾಯ.

ಮಳೆಯ ಕಾರಣದಿಂದ ಎಲೆ ಎದುರಿದ ರಬ್ಬರ್‌ ಮರಗಳು

ಭಾರತದ ನೈಸರ್ಗಿಕ ರಬ್ಬರ್ ಉತ್ಪಾದನೆಯು ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ತೀವ್ರವಾಗಿ ಕುಸಿತವಾಗಿತ್ತು. ಭಾರೀ ಮಳೆಯ ಕಾರಣದಿಂದ ರಬ್ಬರ್‌ ಇಳುವರಿಯಲ್ಲೂ ಕೊರತೆಯಾಗಿತ್ತು. ಮಳೆಯ ಕಾರಣದಿಂದ ಎಲೆ ಉದುರುವ ರೋಗದಿಂದ ಇಳುವರಿ ಕಡಿಮೆಯಾಗಿತ್ತು. ದೇಶದಲ್ಲಿ ರಬ್ಬರ್ ಅಗ್ರ ಉತ್ಪಾದನೆಯ ದಕ್ಷಿಣ ರಾಜ್ಯವಾದ ಕೇರಳದಲ್ಲಿ ಭಾರೀ ಮಳೆಯು ಟ್ಯಾಪಿಂಗ್ ಮೇಲೆ ಪರಿಣಾಮ ಬೀರಿತ್ತು. ಇದೇ ಸಮಯದಲ್ಲಿ ಕಡಿಮೆ ಉತ್ಪಾದನೆಯ ಕಾರಣದಿಂದ ನೈಸರ್ಗಿಕ ರಬ್ಬರನ್ನು ಡಿಸೆಂಬರ್‌ ವೇಳೆಗೆ   ಇಂಡೋನೇಷ್ಯಾ, ಮಲೇಷ್ಯಾ ಮತ್ತು ಥೈಲ್ಯಾಂಡ್‌ನಿಂದ ಆಮದು ಮಾಡಲು ಟಯರ್‌ ಕಂಪನಿಗಳು ಒತ್ತಾಯಿಸಿದವು. ಹೀಗಾಗಿ ಭಾರತದಲ್ಲಿ ಧಾರಣೆ ಕೂಡಾ ಇಳಿಕೆಯಾದವು ಎನ್ನುವುದು  ಮಾರುಕಟ್ಟೆ ವಲಯದ ಅಭಿಪ್ರಾಯ.

ಜಾಗತಿಕವಾಗಿ ರಬ್ಬರ್‌ ಮಾರುಕಟ್ಟೆ ಭರವಸೆಯನ್ನು ಮೂಡಿಸುತ್ತಿದೆ. ನೈಸರ್ಗಿಕ ರಬ್ಬರ್ ಬೆಲೆಗಳು ಜಾಗತಿಕ ಮಾರುಕಟ್ಟೆಯಲ್ಲಿ ಮುಂಬರುವ ಋತುಮಾನದಲ್ಲಿ ಕಡಿಮೆ ಪೂರೈಕೆಯ ಕಾರಣದಿಂದ ಹಾಗೂ  ಚೀನಾದಲ್ಲಿ ಹೆಚ್ಚುತ್ತಿರುವ ರಬ್ಬರ್ ಬೇಡಿಕೆಯ ‌ಕಾರಣದಿಂದ ರಬ್ಬರ್‌ ಧಾರಣೆ ಏರಿಕೆಯಾಗಬಹುದು ಎಂದು ನೈಸರ್ಗಿಕ ರಬ್ಬರ್ ಉತ್ಪಾದಕ ರಾಷ್ಟ್ರಗಳ ಸಂಘ ಹೇಳಿದೆ.

Advertisement

ರಬ್ಬರ್‌ ಮಾರುಕಟ್ಟೆ ವರದಿಯ ಪ್ರಕಾರ ಡಿಸೆಂಬರ್ ಮತ್ತು ಜನವರಿ 2022 ರ ಅವಧಿಯಲ್ಲಿ ಚೀನಾ ಸುಮಾರು 5,00,000 ಟನ್‌ ರಬ್ಬರ್ ಗಳನ್ನು ದಾಸ್ತಾನು ಮಾಡುವ ಗುರಿ ಇರಿಸಿಕೊಂಡಿದೆ. ಕೋವಿಡ್‌ ಕಾರಣದಿಂದ ಉದ್ಯಮದಲ್ಲಿ ಬದಲಾವಣೆ ಸಾಧ್ಯತೆ ಇರುವುದರಿಂದ ರಬ್ಬರ್‌ ದಾಸ್ತಾನು ಮಾಡಿಕೊಳ್ಳುವ ಗುರಿ ಇರಿಸಿಕೊಂಡಿದೆ ಚೀನಾ.

2021 ರ ವರ್ಷದಲ್ಲಿ ವಿಶ್ವ ರಬ್ಬರ್ ಆರ್ಥಿಕತೆಯು ಸುಮಾರು 2,00,000 ಟನ್‌ಗಳ ಕೊರತೆಯೊಂದಿಗೆ ಕೊನೆಗೊಳ್ಳುವ ಸಾಧ್ಯತೆಯಿದೆ. ವಿಶ್ವದ ರಬ್ಬರ್ ಪೂರೈಕೆ 13.882 ಮಿಲಿಯನ್ ಟನ್‌ಗಳು ಇದ್ದು ಬೇಡಿಕೆ: 14,076 ಮಿಲಿಯನ್ ಟನ್‌ ಬೇಡಿಕೆ ಇದೆ ಎಂದು ರಬ್ಬರ್‌ ಜರ್ನಲ್‌ ತಿಳಿಸುತ್ತದೆ. ಆದರೆ ಒಮಿಕ್ರಾನ್ ರೂಪಾಂತರದ ಹರಡುವಿಕೆಯ ಕಾರಣದಿಂದ ಯುರೋಪಿನಾದ್ಯಂತ ವಿಧಿಸಲಾದ ಹೊಸ ನಿರ್ಬಂಧಗಳು ಮತ್ತು ರಬ್ಬರ್‌ನ ಬೇಡಿಕೆಯ ಮೇಲೂ ಪರಿಣಾಮ ಬೀರಬಹುದು  ಎನ್ನುವುದು  ರಬ್ಬರ್‌ ಫ್ಯೂಚರ್ಸ್ ಮಾರುಕಟ್ಟೆಯ ಅಭಿಪ್ರಾಯ.

ರಬ್ಬರ್‌ ಪ್ಯೂಚರ್‌ ಟ್ರೆಂಡ್‌ ಪ್ರಕಾರ, ಅಂತರಾಷ್ಟ್ರೀಯ ರಬ್ಬರ್‌ ಮಾರುಕಟ್ಟೆ ದರ ಕುಸಿತವು ಹೆಚ್ಚು ಸಮಯ ಉಳಿಯದು. ಮುಂದಿನ ತಿಂಗಳು ರಬ್ಬರ್ ಉತ್ಪಾದನೆಯು ಕಡಿಮೆಯಾಗುವುದರಿಂದ ಜನವರಿ ಮಧ್ಯದ ವೇಳೆಗೆ ಬೆಲೆಗಳು ಹೆಚ್ಚಾಗುತ್ತವೆ. ಈ ವರ್ಷ ಹವಾಮಾನ ಪರಿಸ್ಥಿತಿಗಳು ತುಂಬಾ ಅನಿಶ್ಚಿತ ಮತ್ತು ಅನಿಯಮಿತವಾಗಿವೆ. ಹೀಗಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ರಬ್ಬರ್‌ ಧಾರಣೆ ಏರಿಕೆಯ ನಿರೀಕ್ಷೆ ಇದೆ.

ಭಾರತದ ರಬ್ಬರ್‌ ಮಾರುಕಟ್ಟೆ ಚೇತರಿಕೆ ಕಂಡು ಇದೀಗ ಕುಸಿತದ ಹಾದಿಯಲ್ಲಿ ಇರುವುದು  ರಬ್ಬರ್‌ ಬೆಳೆಗಾರರಿಗೂ ಸಂಕಷ್ಟ ತಂದಿದೆ. ಸುಮಾರು 10 ವರ್ಷಗಳ ಬಳಿಕ ಧಾರಣೆ ಏರಿಕೆ ಕಂಡಿತ್ತು. ರಬ್ಬರ್‌ ಬೆಳೆಗಾರರು ಕೃಷಿ ಸುಧಾರಣೆಯನ್ನು ಕಂಡಿದ್ದರು. ಇದೀಗ ಮತ್ತೆ ಧಾರಣೆ ಇಳಿಕೆಯ ಹಾದಿಯಲ್ಲಿ ಸಾಗಿರುವುದು ಮತ್ತೆ ಆತಂಕಕ್ಕೆ ಕಾರಣವಾಗಿದೆ.

ರಬ್ಬರ್‌ ಧಾರಣೆ ಸ್ಥಿರತೆಯಾಗಲಿ
ರಬ್ಬರ್‌ ಧಾರಣೆ ಕುಸಿತದ  ಈ ಸಮಯದಲ್ಲಿ ರೈತರ ನೆರವಿಗೆ ರಬ್ಬರ್‌ ಬೋರ್ಡ್‌, ಸಂಸದರುಗಳು, ರಬ್ಬರ್‌ ಬೆಳೆಗಾರರ ಸಂಘಗಳು ಹಾಗೂ ಸಂಘಟನೆಗಳು ಮುಂದೆ ಬರಬೇಕು. ರಬ್ಬರ್‌ ಧಾರಣೆ ಸ್ಥಿರತೆ ಹಾಗೂ ಕನಿಷ್ಟ 180 ರೂಪಾಯಿ ಧಾರಣೆ ನಿಗದಿಯಾಗುವಂತೆ ಪ್ರಯತ್ನವಾಗಬೇಕು ಎಂದು ರಬ್ಬರ್‌ ಕೃಷಿಕ ವಿಜಯಕೃಷ್ಣ ಕಬ್ಬಿನಹಿತ್ಲು ಹೇಳುತ್ತಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

37 seconds ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

4 minutes ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

14 minutes ago

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…

21 minutes ago

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

34 minutes ago

ಕೋಲಾರದಲ್ಲಿ ಮಾವು ಬೆಲೆ ಕುಸಿತ | 15,000 ಬೆಂಬಲ ಬೆಲೆ ಘೋಷಿಸುವಂತೆ ಬೆಳೆಗಾರರ ಆಗ್ರಹ

ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ…

39 minutes ago