Advertisement
ಸುದ್ದಿಗಳು

ಈಶಾನ್ಯ ಭಾರತದಲ್ಲಿ ರಬ್ಬರ್‌ ಬೆಳೆ ವಿಸ್ತರಣೆ | 1.25 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ರಬ್ಬರ್‌ ತೋಟ |

Share

2024-25 ರ ಹೊತ್ತಿಗೆ ಈಶಾನ್ಯ ರಾಜ್ಯಗಳು ಮತ್ತು ಪಶ್ಚಿಮ ಬಂಗಾಳದ 94 ಜಿಲ್ಲೆಗಳಲ್ಲಿ 1.25 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಹೊಸ ರಬ್ಬರ್ ತೋಟಗಳನ್ನು ಸ್ಥಾಪಿಸಲಾಗಿದೆ. ಕೇವಲ ನಾಲ್ಕು ವರ್ಷಗಳಲ್ಲಿ ಭಾರತದ ಅತ್ಯಂತ ಮಹತ್ವದ ರಬ್ಬರ್ ತೋಟದ ವಿಸ್ತರಣೆಗಳಲ್ಲಿ ಇದು ಒಂದಾಗಿದೆ. …..ಮುಂದೆ ಓದಿ….

ರಬ್ಬರ್ ಬೋರ್ಡ್ ಆಫ್ ಇಂಡಿಯಾದ ನೇತೃತ್ವದಲ್ಲಿ ಮತ್ತು ಆಟೋಮೋಟಿವ್ ಟೈರ್ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ​​ಹಾಗೂ ಪ್ರಮುಖ ಟೈರ್ ತಯಾರಕರುಗಳಾದ ಅಪೊಲೊ, ಸಿಯೇಟ್ ಮೊದಲಾದ ಕಂಪನಿಗಳ ಬೆಂಬಲದೊಂದಿಗೆ, ರಬ್ಬರ್‌ ಬೆಳೆ ವಿಸ್ತರಣೆ ಮಾಡಲಾಗಿದೆ. ಸುಮಾರು  2 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ರಬ್ಬರ್ ತೋಟಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ. ಟೈರ್ ಉದ್ಯಮವು ನೇರವಾಗಿ ತೋಟದ ಅಭಿವೃದ್ಧಿಯಲ್ಲಿ ಹೂಡಿಕೆ ಮಾಡುವ ಜಾಗತಿಕವಾಗಿ ಮೊದಲ ಪ್ರಯತ್ನ ಇದಾಗಿದೆ.

ಇದುವರೆಗಿನ ಸವಾಲುಗಳ ನಡುವೆ  ನಾಲ್ಕು ವರ್ಷಗಳ ಪ್ಲಾಂಟೇಶನ್ ಗುರಿಯಲ್ಲಿ ಸುಮಾರು 90% ರಷ್ಟು ತಲುಪಲಾಗಿದೆ. ರಬ್ಬರ್‌  ಪ್ರದೇಶಗಳನ್ನು ವಿಸ್ತರಿಸುವುದರ ಜೊತೆಗೆ, ಯೋಜನೆಯು ಸ್ಥಳೀಯ ನರ್ಸರಿಗಳನ್ನು ಬಲಪಡಿಸಿದೆ . ಟೈರ್ ಕಂಪನಿಗಳು ಮತ್ತು ರಬ್ಬರ್ ಬೋರ್ಡ್ ಆಫ್ ಇಂಡಿಯಾ ಸಯಯೋಗದ ಪ್ರಯತ್ನ ಇದಾಗಿದೆ ಎಂದು ಯೋಜನೆಯ ನಾಲ್ಕನೇ ವಾರ್ಷಿಕೋತ್ಸವದಲ್ಲಿ ಯೋಜನೆ ನಿರ್ದೇಶಕ ರಾಜೀವ್ ಬುದಿರಾಜ ಹೇಳಿದರು.

ಕಳೆದ ನಾಲ್ಕು ವರ್ಷಗಳಲ್ಲಿ, ಈ ಯೋಜನೆಯು 5.3 ಕೋಟಿ ನಾಟಿ ಸಾಮಗ್ರಿಗಳನ್ನು ವಿತರಿಸಿದೆ. ಒಂದು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರನ್ನು ಈ ಯೋಜನೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿದೆ. ಯೋಜನೆ ಪೂರ್ಣಗೊಳ್ಳುವ ವೇಳೆ  2.5 ಲಕ್ಷ ಫಲಾನುಭವಿಗಳ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗಳನ್ನು ಉನ್ನತೀಕರಿಸುವ ನಿರೀಕ್ಷೆಯಿದೆ. ರಬ್ಬರ್ ತೋಟಗಳು ಬೆಳೆದಂತೆ, ಮಾದರಿ ಸ್ಮೋಕ್‌ಹೌಸ್‌ಗಳು ಮತ್ತು ರಬ್ಬರ್ ಬೆಳೆಗಾರರಲ್ಲಿ ಸುಧಾರಿತ ಕ್ರಮಗಳನ್ನು ಪ್ರಸಾರ ಮಾಡುವುದು ಸೇರಿದಂತೆ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವತ್ತ ಗಮನ ಹರಿಸಲಾಗುವುದು ಎಂದು ರಾಜೀವ್ ಬುದಿರಾಜ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

6 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

11 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

11 hours ago

ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ

ಮೈಸೂರು ವಿಭಾಗದ ತಂಬಾಕು ರೈತರು ಖರೀದಿ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದು, ಈ ಬಗ್ಗೆ ಕೇಂದ್ರ…

11 hours ago

ಅಡಿಕೆ ತೋಟದ ಹಳದಿ ಎಲೆ ರೋಗ ಚೀನಾದಲ್ಲೂ ಮದ್ದಿಲ್ಲ…! | ಮಣ್ಣಿನೊಳಗಿನ ಡಿಎನ್‌ಎ ನೀಡುತ್ತಿದೆ ಎಚ್ಚರಿಕೆ

ಅಡಿಕೆಯ ಹಳದಿ ಎಲೆ ರೋಗವು(YLD) ಕೇವಲ ಎಲೆಯ ಸಮಸ್ಯೆಯಲ್ಲ, ಮಣ್ಣಿನೊಳಗಿನ ಸೂಕ್ಷ್ಮಜೀವಿಗಳ ಸಮತೋಲನ…

23 hours ago

ಹವಾಮಾನ ವರದಿ | 02-03-2026 | ರಾಜ್ಯದಲ್ಲಿ ಮೋಡ ಕವಿದ ವಾತಾವರಣ… ಆದರೆ, ಮಳೆ ಇದೆಯೋ..? ಇಲ್ವೋ..?!

ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಾರ್ಚ್‌ 3 ರವರೆಗೆ ಮಳೆಯ ಸಾಧ್ಯತೆ…

1 day ago