Advertisement
ಸುದ್ದಿಗಳು

ಈಶಾನ್ಯ ಭಾರತದಲ್ಲಿ ರಬ್ಬರ್‌ ಬೆಳೆ ವಿಸ್ತರಣೆ | 1.25 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ರಬ್ಬರ್‌ ತೋಟ |

Share

2024-25 ರ ಹೊತ್ತಿಗೆ ಈಶಾನ್ಯ ರಾಜ್ಯಗಳು ಮತ್ತು ಪಶ್ಚಿಮ ಬಂಗಾಳದ 94 ಜಿಲ್ಲೆಗಳಲ್ಲಿ 1.25 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಹೊಸ ರಬ್ಬರ್ ತೋಟಗಳನ್ನು ಸ್ಥಾಪಿಸಲಾಗಿದೆ. ಕೇವಲ ನಾಲ್ಕು ವರ್ಷಗಳಲ್ಲಿ ಭಾರತದ ಅತ್ಯಂತ ಮಹತ್ವದ ರಬ್ಬರ್ ತೋಟದ ವಿಸ್ತರಣೆಗಳಲ್ಲಿ ಇದು ಒಂದಾಗಿದೆ. …..ಮುಂದೆ ಓದಿ….

Advertisement
Advertisement

ರಬ್ಬರ್ ಬೋರ್ಡ್ ಆಫ್ ಇಂಡಿಯಾದ ನೇತೃತ್ವದಲ್ಲಿ ಮತ್ತು ಆಟೋಮೋಟಿವ್ ಟೈರ್ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ​​ಹಾಗೂ ಪ್ರಮುಖ ಟೈರ್ ತಯಾರಕರುಗಳಾದ ಅಪೊಲೊ, ಸಿಯೇಟ್ ಮೊದಲಾದ ಕಂಪನಿಗಳ ಬೆಂಬಲದೊಂದಿಗೆ, ರಬ್ಬರ್‌ ಬೆಳೆ ವಿಸ್ತರಣೆ ಮಾಡಲಾಗಿದೆ. ಸುಮಾರು  2 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ರಬ್ಬರ್ ತೋಟಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ. ಟೈರ್ ಉದ್ಯಮವು ನೇರವಾಗಿ ತೋಟದ ಅಭಿವೃದ್ಧಿಯಲ್ಲಿ ಹೂಡಿಕೆ ಮಾಡುವ ಜಾಗತಿಕವಾಗಿ ಮೊದಲ ಪ್ರಯತ್ನ ಇದಾಗಿದೆ.

ಇದುವರೆಗಿನ ಸವಾಲುಗಳ ನಡುವೆ  ನಾಲ್ಕು ವರ್ಷಗಳ ಪ್ಲಾಂಟೇಶನ್ ಗುರಿಯಲ್ಲಿ ಸುಮಾರು 90% ರಷ್ಟು ತಲುಪಲಾಗಿದೆ. ರಬ್ಬರ್‌  ಪ್ರದೇಶಗಳನ್ನು ವಿಸ್ತರಿಸುವುದರ ಜೊತೆಗೆ, ಯೋಜನೆಯು ಸ್ಥಳೀಯ ನರ್ಸರಿಗಳನ್ನು ಬಲಪಡಿಸಿದೆ . ಟೈರ್ ಕಂಪನಿಗಳು ಮತ್ತು ರಬ್ಬರ್ ಬೋರ್ಡ್ ಆಫ್ ಇಂಡಿಯಾ ಸಯಯೋಗದ ಪ್ರಯತ್ನ ಇದಾಗಿದೆ ಎಂದು ಯೋಜನೆಯ ನಾಲ್ಕನೇ ವಾರ್ಷಿಕೋತ್ಸವದಲ್ಲಿ ಯೋಜನೆ ನಿರ್ದೇಶಕ ರಾಜೀವ್ ಬುದಿರಾಜ ಹೇಳಿದರು.

ಕಳೆದ ನಾಲ್ಕು ವರ್ಷಗಳಲ್ಲಿ, ಈ ಯೋಜನೆಯು 5.3 ಕೋಟಿ ನಾಟಿ ಸಾಮಗ್ರಿಗಳನ್ನು ವಿತರಿಸಿದೆ. ಒಂದು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರನ್ನು ಈ ಯೋಜನೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿದೆ. ಯೋಜನೆ ಪೂರ್ಣಗೊಳ್ಳುವ ವೇಳೆ  2.5 ಲಕ್ಷ ಫಲಾನುಭವಿಗಳ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗಳನ್ನು ಉನ್ನತೀಕರಿಸುವ ನಿರೀಕ್ಷೆಯಿದೆ. ರಬ್ಬರ್ ತೋಟಗಳು ಬೆಳೆದಂತೆ, ಮಾದರಿ ಸ್ಮೋಕ್‌ಹೌಸ್‌ಗಳು ಮತ್ತು ರಬ್ಬರ್ ಬೆಳೆಗಾರರಲ್ಲಿ ಸುಧಾರಿತ ಕ್ರಮಗಳನ್ನು ಪ್ರಸಾರ ಮಾಡುವುದು ಸೇರಿದಂತೆ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವತ್ತ ಗಮನ ಹರಿಸಲಾಗುವುದು ಎಂದು ರಾಜೀವ್ ಬುದಿರಾಜ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

8 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

8 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

8 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

8 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

17 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

17 hours ago