2024-25 ರ ಹೊತ್ತಿಗೆ ಈಶಾನ್ಯ ರಾಜ್ಯಗಳು ಮತ್ತು ಪಶ್ಚಿಮ ಬಂಗಾಳದ 94 ಜಿಲ್ಲೆಗಳಲ್ಲಿ 1.25 ಲಕ್ಷ ಹೆಕ್ಟೇರ್ಗೂ ಹೆಚ್ಚು ಹೊಸ ರಬ್ಬರ್ ತೋಟಗಳನ್ನು ಸ್ಥಾಪಿಸಲಾಗಿದೆ. ಕೇವಲ ನಾಲ್ಕು ವರ್ಷಗಳಲ್ಲಿ ಭಾರತದ ಅತ್ಯಂತ ಮಹತ್ವದ ರಬ್ಬರ್ ತೋಟದ ವಿಸ್ತರಣೆಗಳಲ್ಲಿ ಇದು ಒಂದಾಗಿದೆ. …..ಮುಂದೆ ಓದಿ….
ರಬ್ಬರ್ ಬೋರ್ಡ್ ಆಫ್ ಇಂಡಿಯಾದ ನೇತೃತ್ವದಲ್ಲಿ ಮತ್ತು ಆಟೋಮೋಟಿವ್ ಟೈರ್ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ಹಾಗೂ ಪ್ರಮುಖ ಟೈರ್ ತಯಾರಕರುಗಳಾದ ಅಪೊಲೊ, ಸಿಯೇಟ್ ಮೊದಲಾದ ಕಂಪನಿಗಳ ಬೆಂಬಲದೊಂದಿಗೆ, ರಬ್ಬರ್ ಬೆಳೆ ವಿಸ್ತರಣೆ ಮಾಡಲಾಗಿದೆ. ಸುಮಾರು 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರಬ್ಬರ್ ತೋಟಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ. ಟೈರ್ ಉದ್ಯಮವು ನೇರವಾಗಿ ತೋಟದ ಅಭಿವೃದ್ಧಿಯಲ್ಲಿ ಹೂಡಿಕೆ ಮಾಡುವ ಜಾಗತಿಕವಾಗಿ ಮೊದಲ ಪ್ರಯತ್ನ ಇದಾಗಿದೆ.
ಇದುವರೆಗಿನ ಸವಾಲುಗಳ ನಡುವೆ ನಾಲ್ಕು ವರ್ಷಗಳ ಪ್ಲಾಂಟೇಶನ್ ಗುರಿಯಲ್ಲಿ ಸುಮಾರು 90% ರಷ್ಟು ತಲುಪಲಾಗಿದೆ. ರಬ್ಬರ್ ಪ್ರದೇಶಗಳನ್ನು ವಿಸ್ತರಿಸುವುದರ ಜೊತೆಗೆ, ಯೋಜನೆಯು ಸ್ಥಳೀಯ ನರ್ಸರಿಗಳನ್ನು ಬಲಪಡಿಸಿದೆ . ಟೈರ್ ಕಂಪನಿಗಳು ಮತ್ತು ರಬ್ಬರ್ ಬೋರ್ಡ್ ಆಫ್ ಇಂಡಿಯಾ ಸಯಯೋಗದ ಪ್ರಯತ್ನ ಇದಾಗಿದೆ ಎಂದು ಯೋಜನೆಯ ನಾಲ್ಕನೇ ವಾರ್ಷಿಕೋತ್ಸವದಲ್ಲಿ ಯೋಜನೆ ನಿರ್ದೇಶಕ ರಾಜೀವ್ ಬುದಿರಾಜ ಹೇಳಿದರು.
ಕಳೆದ ನಾಲ್ಕು ವರ್ಷಗಳಲ್ಲಿ, ಈ ಯೋಜನೆಯು 5.3 ಕೋಟಿ ನಾಟಿ ಸಾಮಗ್ರಿಗಳನ್ನು ವಿತರಿಸಿದೆ. ಒಂದು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರನ್ನು ಈ ಯೋಜನೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿದೆ. ಯೋಜನೆ ಪೂರ್ಣಗೊಳ್ಳುವ ವೇಳೆ 2.5 ಲಕ್ಷ ಫಲಾನುಭವಿಗಳ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗಳನ್ನು ಉನ್ನತೀಕರಿಸುವ ನಿರೀಕ್ಷೆಯಿದೆ. ರಬ್ಬರ್ ತೋಟಗಳು ಬೆಳೆದಂತೆ, ಮಾದರಿ ಸ್ಮೋಕ್ಹೌಸ್ಗಳು ಮತ್ತು ರಬ್ಬರ್ ಬೆಳೆಗಾರರಲ್ಲಿ ಸುಧಾರಿತ ಕ್ರಮಗಳನ್ನು ಪ್ರಸಾರ ಮಾಡುವುದು ಸೇರಿದಂತೆ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವತ್ತ ಗಮನ ಹರಿಸಲಾಗುವುದು ಎಂದು ರಾಜೀವ್ ಬುದಿರಾಜ ಹೇಳಿದರು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…