Advertisement
ಸುದ್ದಿಗಳು

ಈಶಾನ್ಯ ಭಾರತದಲ್ಲಿ ರಬ್ಬರ್‌ ಬೆಳೆ ವಿಸ್ತರಣೆ | 1.25 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ರಬ್ಬರ್‌ ತೋಟ |

Share

2024-25 ರ ಹೊತ್ತಿಗೆ ಈಶಾನ್ಯ ರಾಜ್ಯಗಳು ಮತ್ತು ಪಶ್ಚಿಮ ಬಂಗಾಳದ 94 ಜಿಲ್ಲೆಗಳಲ್ಲಿ 1.25 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಹೊಸ ರಬ್ಬರ್ ತೋಟಗಳನ್ನು ಸ್ಥಾಪಿಸಲಾಗಿದೆ. ಕೇವಲ ನಾಲ್ಕು ವರ್ಷಗಳಲ್ಲಿ ಭಾರತದ ಅತ್ಯಂತ ಮಹತ್ವದ ರಬ್ಬರ್ ತೋಟದ ವಿಸ್ತರಣೆಗಳಲ್ಲಿ ಇದು ಒಂದಾಗಿದೆ. …..ಮುಂದೆ ಓದಿ….

ರಬ್ಬರ್ ಬೋರ್ಡ್ ಆಫ್ ಇಂಡಿಯಾದ ನೇತೃತ್ವದಲ್ಲಿ ಮತ್ತು ಆಟೋಮೋಟಿವ್ ಟೈರ್ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ​​ಹಾಗೂ ಪ್ರಮುಖ ಟೈರ್ ತಯಾರಕರುಗಳಾದ ಅಪೊಲೊ, ಸಿಯೇಟ್ ಮೊದಲಾದ ಕಂಪನಿಗಳ ಬೆಂಬಲದೊಂದಿಗೆ, ರಬ್ಬರ್‌ ಬೆಳೆ ವಿಸ್ತರಣೆ ಮಾಡಲಾಗಿದೆ. ಸುಮಾರು  2 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ರಬ್ಬರ್ ತೋಟಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ. ಟೈರ್ ಉದ್ಯಮವು ನೇರವಾಗಿ ತೋಟದ ಅಭಿವೃದ್ಧಿಯಲ್ಲಿ ಹೂಡಿಕೆ ಮಾಡುವ ಜಾಗತಿಕವಾಗಿ ಮೊದಲ ಪ್ರಯತ್ನ ಇದಾಗಿದೆ.

ಇದುವರೆಗಿನ ಸವಾಲುಗಳ ನಡುವೆ  ನಾಲ್ಕು ವರ್ಷಗಳ ಪ್ಲಾಂಟೇಶನ್ ಗುರಿಯಲ್ಲಿ ಸುಮಾರು 90% ರಷ್ಟು ತಲುಪಲಾಗಿದೆ. ರಬ್ಬರ್‌  ಪ್ರದೇಶಗಳನ್ನು ವಿಸ್ತರಿಸುವುದರ ಜೊತೆಗೆ, ಯೋಜನೆಯು ಸ್ಥಳೀಯ ನರ್ಸರಿಗಳನ್ನು ಬಲಪಡಿಸಿದೆ . ಟೈರ್ ಕಂಪನಿಗಳು ಮತ್ತು ರಬ್ಬರ್ ಬೋರ್ಡ್ ಆಫ್ ಇಂಡಿಯಾ ಸಯಯೋಗದ ಪ್ರಯತ್ನ ಇದಾಗಿದೆ ಎಂದು ಯೋಜನೆಯ ನಾಲ್ಕನೇ ವಾರ್ಷಿಕೋತ್ಸವದಲ್ಲಿ ಯೋಜನೆ ನಿರ್ದೇಶಕ ರಾಜೀವ್ ಬುದಿರಾಜ ಹೇಳಿದರು.

ಕಳೆದ ನಾಲ್ಕು ವರ್ಷಗಳಲ್ಲಿ, ಈ ಯೋಜನೆಯು 5.3 ಕೋಟಿ ನಾಟಿ ಸಾಮಗ್ರಿಗಳನ್ನು ವಿತರಿಸಿದೆ. ಒಂದು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರನ್ನು ಈ ಯೋಜನೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿದೆ. ಯೋಜನೆ ಪೂರ್ಣಗೊಳ್ಳುವ ವೇಳೆ  2.5 ಲಕ್ಷ ಫಲಾನುಭವಿಗಳ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗಳನ್ನು ಉನ್ನತೀಕರಿಸುವ ನಿರೀಕ್ಷೆಯಿದೆ. ರಬ್ಬರ್ ತೋಟಗಳು ಬೆಳೆದಂತೆ, ಮಾದರಿ ಸ್ಮೋಕ್‌ಹೌಸ್‌ಗಳು ಮತ್ತು ರಬ್ಬರ್ ಬೆಳೆಗಾರರಲ್ಲಿ ಸುಧಾರಿತ ಕ್ರಮಗಳನ್ನು ಪ್ರಸಾರ ಮಾಡುವುದು ಸೇರಿದಂತೆ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವತ್ತ ಗಮನ ಹರಿಸಲಾಗುವುದು ಎಂದು ರಾಜೀವ್ ಬುದಿರಾಜ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

4 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

4 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

4 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

14 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

15 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

15 hours ago