ಆರ್ಥಿಕ ವರ್ಷದಲ್ಲಿ 33% ರಬ್ಬರ್‌ ಬೆಲೆ ಹೆಚ್ಚಳ | ಪೂರೈಕೆಯಲ್ಲೂ ಕೊರತೆ | ಒತ್ತಡದಲ್ಲಿ ಟಯರ್‌ ಕಂಪನಿಗಳು |

October 1, 2024
9:08 AM
ಜಾಗತಿಕ ನೈಸರ್ಗಿಕ ರಬ್ಬರ್ ಉತ್ಪಾದನೆಯು ಶೇಕಡಾ 35 ರಷ್ಟು ಬೆಳೆದಿದೆ, ಆದರೆ ಬೇಡಿಕೆಯು ಶೇಕಡಾ 40 ರಷ್ಟು ಏರಿಕೆಯಾಗಿದೆ. ಈ ಅಂತರವು‌ ಹೆಚ್ಚಾಗುತ್ತಿರುವ ಕಾರಣ ಟಯರ್  ಕಂಪನಿಗಳು ಮಾರುಕಟ್ಟೆ ಅಗತ್ಯಗಳನ್ನು ಪೂರೈಸಲು ಸಂಕಷ್ಟ ಪಡುತ್ತಿದ್ದಾರೆ. 

ಈ ಆರ್ಥಿಕ ವರ್ಷದಲ್ಲಿ ರಬ್ಬರ್‌ ಧಾರಣೆ ಏರಿಕೆಯಾಗಿದೆ. ಸರಾಸರಿ ಕನಿಷ್ಟ 200 ರೂಪಾಯಿ ದರ ತಲಪಿದೆ. ದೇಶದಲ್ಲಿ ನೈಸರ್ಗಿಕ ರಬ್ಬರ್ ಬಳಕೆಯ ಶೇಕಡಾ 80 ರಷ್ಟನ್ನು ಟೈಯರ್ ಉದ್ಯಮವು‌ ಬಳಕೆ ಮಾಡುತ್ತದೆ. ಕಳೆದ ಕೆಲವು ವರ್ಷಗಳಿಂದ ರಬ್ಬರ್‌ ಧಾರಣೆ ಇಳಿಕೆಯಾಗಿತ್ತು. ಇದೀಗ ಧಾರಣೆ ಏರಿಕೆಯಾಗಿ ಈ ವರ್ಷ ಸರಾಸರಿ ಕನಿಷ್ಟ 200 ರೂಪಾಯಿಗೆ ತಲಪಿತ್ತು.  ಈಗ ರಬ್ಬರ್‌ ಪೂರೈಕೆಯಲ್ಲೂ ಕೊರತೆ ಇದೆ. ಹೀಗಾಗಿ ಟಯರ್‌ ಕಂಪನಿಗಳು ಒತ್ತಡದಲ್ಲಿದೆ ಎಂದು ಕ್ರೆಸಿಲ್‌ ವರದಿ ಮಾಡಿದೆ.

ಕ್ರೆಸಿಲ್‌ ಹಲವು ಮಾರುಕಟ್ಟೆಯ ಮಾಹಿತಿ, ಏರಿಳಿತಗಳ ವಿಶ್ಲೇಷಣೆಯನ್ನು ಒದಗಿಸುತ್ತದೆ.  ರಬ್ಬರ್‌ ಉದ್ಯಮಕ್ಕೆ ಸಂಬಂಧಿಸಿದಂತೆ ಈ ಬಾರಿ ಟಯರ್‌ ಕಂಪನಿಗಳ ಒತ್ತಡವನ್ನು ಕ್ರೆಸಿಲ್‌ ಹೇಳಿದೆ. ಟಯರ್‌ ತಯಾರಕರು ಗಗನಕ್ಕೇರುತ್ತಿರುವ ನೈಸರ್ಗಿಕ ರಬ್ಬರ್ ಬೆಲೆಗಳ ನಡುವೆ ಉತ್ಪಾದನೆ ಮಾಡಬೇಕಾಗಿದೆ ಎಂದು ಸಂಕ್ಷಿಪ್ತವಾಗಿ ಹೇಳಿದೆ.  ಈ ವರ್ಷದ ಕಳೆದ ಐದು ತಿಂಗಳಲ್ಲಿ ಶೇಕಡಾ 33 ರಷ್ಟು ರಬ್ಬರ್‌ ಬೆಲೆ ಏರಿಕೆಯಾಗಿದೆ ಎಂದು ಕ್ರಿಸಿಲ್ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ. ನೈಸರ್ಗಿಕ ರಬ್ಬರ್‌ನ ಪೂರೈಕೆ ಮತ್ತು ಹೆಚ್ಚುತ್ತಿರುವ ವೆಚ್ಚಗಳು ಟಯರ್ ತಯಾರಕರಿಗೆ ಸವಾಲಿನ ವಾತಾವರಣವನ್ನು ಸೃಷ್ಟಿಸಿವೆ ಎಂದು ಅದು ಹೇಳಿದೆ.

ದೇಶದಲ್ಲಿ ನೈಸರ್ಗಿಕ ರಬ್ಬರ್ ಬಳಕೆಯ ಶೇಕಡಾ 80 ರಷ್ಟನ್ನು ಟಯರ್ ಉದ್ಯಮವು ಹೊಂದಿದೆ. ನೈಸರ್ಗಿಕ ರಬ್ಬರ್ ಬೆಲೆಗಳು, ಕಳೆದ ಒಂದು ದಶಕದಿಂದ ಕೆಳಗಿಳಿದಿದ್ದು, ಈಗ ಪ್ರತಿ ಕಿಲೋಗ್ರಾಂಗೆ‌ ಸರಾಸರಿ ರೂ 200 ರ ಗಡಿಯನ್ನು ಮೀರಿದೆ. ಹೀಗಾಗಿ ಈಗ ಬೆಲೆ ಏರಿಕೆಯ ಸಮಸ್ಯೆ ಕಂಪನಿಗಳಿಗೆ ಕಾಡಿದೆ. ಈ ನಡುವೆ ರಬ್ಬರ್‌ ಪೂರೈಕೆಯಲ್ಲೂ ವ್ಯತ್ಯಾಸವಾಗಿದೆ. ಸರಿಯಾದ ಪ್ರಮಾಣದಲ್ಲಿ ಪೂರೈಕೆಯೂ ಆಗುತ್ತಿಲ್ಲ.

ವರದಿಯ ಪ್ರಕಾರ, ನೈಸರ್ಗಿಕ ರಬ್ಬರ್ ಬೆಲೆಗಳಲ್ಲಿನ ಪ್ರಸ್ತುತ ಏರಿಕೆಯು ರಬ್ಬರ್ ಬೇಡಿಕೆಯ ಕಾರಣದಿಂದ ಉಂಟಾಗಿದೆ. 2011 ಮತ್ತು 2023 ರ ನಡುವೆ, ಜಾಗತಿಕ ನೈಸರ್ಗಿಕ ರಬ್ಬರ್ ಉತ್ಪಾದನೆಯು ಶೇಕಡಾ 35 ರಷ್ಟು ಬೆಳೆದಿದೆ, ಆದರೆ ಬೇಡಿಕೆಯು ಶೇಕಡಾ 40 ರಷ್ಟು ಏರಿಕೆಯಾಗಿದೆ. ಈ ಅಂತರವು‌ ಹೆಚ್ಚಾಗುತ್ತಿರುವ ಕಾರಣ ಟಯರ್  ಕಂಪನಿಗಳು ಮಾರುಕಟ್ಟೆ ಅಗತ್ಯಗಳನ್ನು ಪೂರೈಸಲು ಸಂಕಷ್ಟ ಪಡುತ್ತಿದ್ದಾರೆ.

ಕಾರ್ಮಿಕರ ಕೊರತೆ ಹಾಗೂ ಇತರ ಕೆಲವು ಕಾರಣಗಳಿಂದ  ರಬ್ಬರ್‌ ಉತ್ಪಾದನೆಯ ಮೇಲೆ ಪರಿಣಾಮ ಬೀರಿತ್ತು.ಹೀಗಾಗಿ ಇಂದಿಗೂ ಬೇಡಿಕೆಗೆ ತಕ್ಕಂತೆ ರಬ್ಬರ್‌ ಪೂರೈಕೆ ಸಾಧ್ಯವಾಗುತ್ತಿಲ್ಲ. ಇದು ರಬ್ಬರ್‌ ಕಂಪನಿಗಳ ಮೇಲೆ ಪರಿಣಾಮ ಬೀರುತ್ತಿದೆ. ಆಮದು ಕೂಡಾ ಅನಿವಾರ್ಯವಾಗಿ ಮಾಡಬೇಕಾದ ಸ್ಥಿತಿ ಬರುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror