Advertisement
MIRROR FOCUS

ಆರ್ಥಿಕ ವರ್ಷದಲ್ಲಿ 33% ರಬ್ಬರ್‌ ಬೆಲೆ ಹೆಚ್ಚಳ | ಪೂರೈಕೆಯಲ್ಲೂ ಕೊರತೆ | ಒತ್ತಡದಲ್ಲಿ ಟಯರ್‌ ಕಂಪನಿಗಳು |

Share

ಈ ಆರ್ಥಿಕ ವರ್ಷದಲ್ಲಿ ರಬ್ಬರ್‌ ಧಾರಣೆ ಏರಿಕೆಯಾಗಿದೆ. ಸರಾಸರಿ ಕನಿಷ್ಟ 200 ರೂಪಾಯಿ ದರ ತಲಪಿದೆ. ದೇಶದಲ್ಲಿ ನೈಸರ್ಗಿಕ ರಬ್ಬರ್ ಬಳಕೆಯ ಶೇಕಡಾ 80 ರಷ್ಟನ್ನು ಟೈಯರ್ ಉದ್ಯಮವು‌ ಬಳಕೆ ಮಾಡುತ್ತದೆ. ಕಳೆದ ಕೆಲವು ವರ್ಷಗಳಿಂದ ರಬ್ಬರ್‌ ಧಾರಣೆ ಇಳಿಕೆಯಾಗಿತ್ತು. ಇದೀಗ ಧಾರಣೆ ಏರಿಕೆಯಾಗಿ ಈ ವರ್ಷ ಸರಾಸರಿ ಕನಿಷ್ಟ 200 ರೂಪಾಯಿಗೆ ತಲಪಿತ್ತು.  ಈಗ ರಬ್ಬರ್‌ ಪೂರೈಕೆಯಲ್ಲೂ ಕೊರತೆ ಇದೆ. ಹೀಗಾಗಿ ಟಯರ್‌ ಕಂಪನಿಗಳು ಒತ್ತಡದಲ್ಲಿದೆ ಎಂದು ಕ್ರೆಸಿಲ್‌ ವರದಿ ಮಾಡಿದೆ.

Advertisement
Advertisement

ಕ್ರೆಸಿಲ್‌ ಹಲವು ಮಾರುಕಟ್ಟೆಯ ಮಾಹಿತಿ, ಏರಿಳಿತಗಳ ವಿಶ್ಲೇಷಣೆಯನ್ನು ಒದಗಿಸುತ್ತದೆ.  ರಬ್ಬರ್‌ ಉದ್ಯಮಕ್ಕೆ ಸಂಬಂಧಿಸಿದಂತೆ ಈ ಬಾರಿ ಟಯರ್‌ ಕಂಪನಿಗಳ ಒತ್ತಡವನ್ನು ಕ್ರೆಸಿಲ್‌ ಹೇಳಿದೆ. ಟಯರ್‌ ತಯಾರಕರು ಗಗನಕ್ಕೇರುತ್ತಿರುವ ನೈಸರ್ಗಿಕ ರಬ್ಬರ್ ಬೆಲೆಗಳ ನಡುವೆ ಉತ್ಪಾದನೆ ಮಾಡಬೇಕಾಗಿದೆ ಎಂದು ಸಂಕ್ಷಿಪ್ತವಾಗಿ ಹೇಳಿದೆ.  ಈ ವರ್ಷದ ಕಳೆದ ಐದು ತಿಂಗಳಲ್ಲಿ ಶೇಕಡಾ 33 ರಷ್ಟು ರಬ್ಬರ್‌ ಬೆಲೆ ಏರಿಕೆಯಾಗಿದೆ ಎಂದು ಕ್ರಿಸಿಲ್ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ. ನೈಸರ್ಗಿಕ ರಬ್ಬರ್‌ನ ಪೂರೈಕೆ ಮತ್ತು ಹೆಚ್ಚುತ್ತಿರುವ ವೆಚ್ಚಗಳು ಟಯರ್ ತಯಾರಕರಿಗೆ ಸವಾಲಿನ ವಾತಾವರಣವನ್ನು ಸೃಷ್ಟಿಸಿವೆ ಎಂದು ಅದು ಹೇಳಿದೆ.

Advertisement

ದೇಶದಲ್ಲಿ ನೈಸರ್ಗಿಕ ರಬ್ಬರ್ ಬಳಕೆಯ ಶೇಕಡಾ 80 ರಷ್ಟನ್ನು ಟಯರ್ ಉದ್ಯಮವು ಹೊಂದಿದೆ. ನೈಸರ್ಗಿಕ ರಬ್ಬರ್ ಬೆಲೆಗಳು, ಕಳೆದ ಒಂದು ದಶಕದಿಂದ ಕೆಳಗಿಳಿದಿದ್ದು, ಈಗ ಪ್ರತಿ ಕಿಲೋಗ್ರಾಂಗೆ‌ ಸರಾಸರಿ ರೂ 200 ರ ಗಡಿಯನ್ನು ಮೀರಿದೆ. ಹೀಗಾಗಿ ಈಗ ಬೆಲೆ ಏರಿಕೆಯ ಸಮಸ್ಯೆ ಕಂಪನಿಗಳಿಗೆ ಕಾಡಿದೆ. ಈ ನಡುವೆ ರಬ್ಬರ್‌ ಪೂರೈಕೆಯಲ್ಲೂ ವ್ಯತ್ಯಾಸವಾಗಿದೆ. ಸರಿಯಾದ ಪ್ರಮಾಣದಲ್ಲಿ ಪೂರೈಕೆಯೂ ಆಗುತ್ತಿಲ್ಲ.

ವರದಿಯ ಪ್ರಕಾರ, ನೈಸರ್ಗಿಕ ರಬ್ಬರ್ ಬೆಲೆಗಳಲ್ಲಿನ ಪ್ರಸ್ತುತ ಏರಿಕೆಯು ರಬ್ಬರ್ ಬೇಡಿಕೆಯ ಕಾರಣದಿಂದ ಉಂಟಾಗಿದೆ. 2011 ಮತ್ತು 2023 ರ ನಡುವೆ, ಜಾಗತಿಕ ನೈಸರ್ಗಿಕ ರಬ್ಬರ್ ಉತ್ಪಾದನೆಯು ಶೇಕಡಾ 35 ರಷ್ಟು ಬೆಳೆದಿದೆ, ಆದರೆ ಬೇಡಿಕೆಯು ಶೇಕಡಾ 40 ರಷ್ಟು ಏರಿಕೆಯಾಗಿದೆ. ಈ ಅಂತರವು‌ ಹೆಚ್ಚಾಗುತ್ತಿರುವ ಕಾರಣ ಟಯರ್  ಕಂಪನಿಗಳು ಮಾರುಕಟ್ಟೆ ಅಗತ್ಯಗಳನ್ನು ಪೂರೈಸಲು ಸಂಕಷ್ಟ ಪಡುತ್ತಿದ್ದಾರೆ.

Advertisement

ಕಾರ್ಮಿಕರ ಕೊರತೆ ಹಾಗೂ ಇತರ ಕೆಲವು ಕಾರಣಗಳಿಂದ  ರಬ್ಬರ್‌ ಉತ್ಪಾದನೆಯ ಮೇಲೆ ಪರಿಣಾಮ ಬೀರಿತ್ತು.ಹೀಗಾಗಿ ಇಂದಿಗೂ ಬೇಡಿಕೆಗೆ ತಕ್ಕಂತೆ ರಬ್ಬರ್‌ ಪೂರೈಕೆ ಸಾಧ್ಯವಾಗುತ್ತಿಲ್ಲ. ಇದು ರಬ್ಬರ್‌ ಕಂಪನಿಗಳ ಮೇಲೆ ಪರಿಣಾಮ ಬೀರುತ್ತಿದೆ. ಆಮದು ಕೂಡಾ ಅನಿವಾರ್ಯವಾಗಿ ಮಾಡಬೇಕಾದ ಸ್ಥಿತಿ ಬರುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರದಲ್ಲಿ ಸೌರ ವಿದ್ಯುತ್ ಯೋಜನೆ ಜಾರಿ | ಒಣಗುತ್ತಿರುವ ತೋಟವನ್ನು ಉಳಿಸಿಕೊಂಡ ರೈತರು |

ಕೋಲಾರ ಜಿಲ್ಲೆಯ 9 ಮಂದಿ ರೈತರು ಕೇಂದ್ರ ಸರ್ಕಾರದಿಂದ ಸಹಾಯಧನದೊಂದಿಗೆ ಸೌರ ವಿದ್ಯುತ್…

10 hours ago

ಅ.3-14 | ಮಂಗಳೂರಿನ ಕುದ್ರೋಳಿ ದಸರಾ | ದಸರಾ ಮೆರವಣಿಗೆ ವೇಳೆ ಡಿಜೆ ಮ್ಯೂಸಿಕ್ ಕಡಿಮೆ ಆದ್ಯತೆಗೆ ಮನವಿ |

ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದ ಕುದ್ರೋಳಿಯ ಶ್ರೀಗೋಕರ್ಣನಾಥ ಕ್ಷೇತ್ರದ ನವರಾತ್ರಿ ಉತ್ಸವ…

13 hours ago

ಕಾವೇರಿ ವಿಚಾರದಲ್ಲಿ ರಾಜಕೀಯ ಸಲ್ಲದು | ತಮಿಳುನಾಡಿನ ರೈತರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ

ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸಾಮಿ…

13 hours ago

2025ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ,ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ…

14 hours ago

ರಾಜ್ಯ ಚೆಸ್‌ ಅಸೋಸಿಯೇಶನ್‌ ಉಪಾಧ್ಯಕ್ಷರಾಗಿ ರಮೇಶ್‌ ಕೋಟೆ ಆಯ್ಕೆ

ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ನ (KSCA) ಉಪಾಧ್ಯಕ್ಷರಾಗಿ 2024-27ರ ಅವಧಿಗೆ ರಮೇಶ್‌…

18 hours ago

ಹವಾಮಾನ ವರದಿ | 30-09-2024 | ಗುಡುಗು ಸಹಿತ ಮಳೆ ಸಾಧ್ಯತೆ |

ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಂಡಿರುವ ತಿರುವಿಕೆ ಪರಿಣಾಮದಿಂದ ಮುಂಗಾರು ಮಾರುತಗಳು ತಮಿಳುನಾಡು ಮೂಲಕ ರಾಜ್ಯಕ್ಕೆ…

19 hours ago