Advertisement
MIRROR FOCUS

ಆರ್ಥಿಕ ವರ್ಷದಲ್ಲಿ 33% ರಬ್ಬರ್‌ ಬೆಲೆ ಹೆಚ್ಚಳ | ಪೂರೈಕೆಯಲ್ಲೂ ಕೊರತೆ | ಒತ್ತಡದಲ್ಲಿ ಟಯರ್‌ ಕಂಪನಿಗಳು |

Share

ಈ ಆರ್ಥಿಕ ವರ್ಷದಲ್ಲಿ ರಬ್ಬರ್‌ ಧಾರಣೆ ಏರಿಕೆಯಾಗಿದೆ. ಸರಾಸರಿ ಕನಿಷ್ಟ 200 ರೂಪಾಯಿ ದರ ತಲಪಿದೆ. ದೇಶದಲ್ಲಿ ನೈಸರ್ಗಿಕ ರಬ್ಬರ್ ಬಳಕೆಯ ಶೇಕಡಾ 80 ರಷ್ಟನ್ನು ಟೈಯರ್ ಉದ್ಯಮವು‌ ಬಳಕೆ ಮಾಡುತ್ತದೆ. ಕಳೆದ ಕೆಲವು ವರ್ಷಗಳಿಂದ ರಬ್ಬರ್‌ ಧಾರಣೆ ಇಳಿಕೆಯಾಗಿತ್ತು. ಇದೀಗ ಧಾರಣೆ ಏರಿಕೆಯಾಗಿ ಈ ವರ್ಷ ಸರಾಸರಿ ಕನಿಷ್ಟ 200 ರೂಪಾಯಿಗೆ ತಲಪಿತ್ತು.  ಈಗ ರಬ್ಬರ್‌ ಪೂರೈಕೆಯಲ್ಲೂ ಕೊರತೆ ಇದೆ. ಹೀಗಾಗಿ ಟಯರ್‌ ಕಂಪನಿಗಳು ಒತ್ತಡದಲ್ಲಿದೆ ಎಂದು ಕ್ರೆಸಿಲ್‌ ವರದಿ ಮಾಡಿದೆ.

ಕ್ರೆಸಿಲ್‌ ಹಲವು ಮಾರುಕಟ್ಟೆಯ ಮಾಹಿತಿ, ಏರಿಳಿತಗಳ ವಿಶ್ಲೇಷಣೆಯನ್ನು ಒದಗಿಸುತ್ತದೆ.  ರಬ್ಬರ್‌ ಉದ್ಯಮಕ್ಕೆ ಸಂಬಂಧಿಸಿದಂತೆ ಈ ಬಾರಿ ಟಯರ್‌ ಕಂಪನಿಗಳ ಒತ್ತಡವನ್ನು ಕ್ರೆಸಿಲ್‌ ಹೇಳಿದೆ. ಟಯರ್‌ ತಯಾರಕರು ಗಗನಕ್ಕೇರುತ್ತಿರುವ ನೈಸರ್ಗಿಕ ರಬ್ಬರ್ ಬೆಲೆಗಳ ನಡುವೆ ಉತ್ಪಾದನೆ ಮಾಡಬೇಕಾಗಿದೆ ಎಂದು ಸಂಕ್ಷಿಪ್ತವಾಗಿ ಹೇಳಿದೆ.  ಈ ವರ್ಷದ ಕಳೆದ ಐದು ತಿಂಗಳಲ್ಲಿ ಶೇಕಡಾ 33 ರಷ್ಟು ರಬ್ಬರ್‌ ಬೆಲೆ ಏರಿಕೆಯಾಗಿದೆ ಎಂದು ಕ್ರಿಸಿಲ್ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ. ನೈಸರ್ಗಿಕ ರಬ್ಬರ್‌ನ ಪೂರೈಕೆ ಮತ್ತು ಹೆಚ್ಚುತ್ತಿರುವ ವೆಚ್ಚಗಳು ಟಯರ್ ತಯಾರಕರಿಗೆ ಸವಾಲಿನ ವಾತಾವರಣವನ್ನು ಸೃಷ್ಟಿಸಿವೆ ಎಂದು ಅದು ಹೇಳಿದೆ.

ದೇಶದಲ್ಲಿ ನೈಸರ್ಗಿಕ ರಬ್ಬರ್ ಬಳಕೆಯ ಶೇಕಡಾ 80 ರಷ್ಟನ್ನು ಟಯರ್ ಉದ್ಯಮವು ಹೊಂದಿದೆ. ನೈಸರ್ಗಿಕ ರಬ್ಬರ್ ಬೆಲೆಗಳು, ಕಳೆದ ಒಂದು ದಶಕದಿಂದ ಕೆಳಗಿಳಿದಿದ್ದು, ಈಗ ಪ್ರತಿ ಕಿಲೋಗ್ರಾಂಗೆ‌ ಸರಾಸರಿ ರೂ 200 ರ ಗಡಿಯನ್ನು ಮೀರಿದೆ. ಹೀಗಾಗಿ ಈಗ ಬೆಲೆ ಏರಿಕೆಯ ಸಮಸ್ಯೆ ಕಂಪನಿಗಳಿಗೆ ಕಾಡಿದೆ. ಈ ನಡುವೆ ರಬ್ಬರ್‌ ಪೂರೈಕೆಯಲ್ಲೂ ವ್ಯತ್ಯಾಸವಾಗಿದೆ. ಸರಿಯಾದ ಪ್ರಮಾಣದಲ್ಲಿ ಪೂರೈಕೆಯೂ ಆಗುತ್ತಿಲ್ಲ.

ವರದಿಯ ಪ್ರಕಾರ, ನೈಸರ್ಗಿಕ ರಬ್ಬರ್ ಬೆಲೆಗಳಲ್ಲಿನ ಪ್ರಸ್ತುತ ಏರಿಕೆಯು ರಬ್ಬರ್ ಬೇಡಿಕೆಯ ಕಾರಣದಿಂದ ಉಂಟಾಗಿದೆ. 2011 ಮತ್ತು 2023 ರ ನಡುವೆ, ಜಾಗತಿಕ ನೈಸರ್ಗಿಕ ರಬ್ಬರ್ ಉತ್ಪಾದನೆಯು ಶೇಕಡಾ 35 ರಷ್ಟು ಬೆಳೆದಿದೆ, ಆದರೆ ಬೇಡಿಕೆಯು ಶೇಕಡಾ 40 ರಷ್ಟು ಏರಿಕೆಯಾಗಿದೆ. ಈ ಅಂತರವು‌ ಹೆಚ್ಚಾಗುತ್ತಿರುವ ಕಾರಣ ಟಯರ್  ಕಂಪನಿಗಳು ಮಾರುಕಟ್ಟೆ ಅಗತ್ಯಗಳನ್ನು ಪೂರೈಸಲು ಸಂಕಷ್ಟ ಪಡುತ್ತಿದ್ದಾರೆ.

ಕಾರ್ಮಿಕರ ಕೊರತೆ ಹಾಗೂ ಇತರ ಕೆಲವು ಕಾರಣಗಳಿಂದ  ರಬ್ಬರ್‌ ಉತ್ಪಾದನೆಯ ಮೇಲೆ ಪರಿಣಾಮ ಬೀರಿತ್ತು.ಹೀಗಾಗಿ ಇಂದಿಗೂ ಬೇಡಿಕೆಗೆ ತಕ್ಕಂತೆ ರಬ್ಬರ್‌ ಪೂರೈಕೆ ಸಾಧ್ಯವಾಗುತ್ತಿಲ್ಲ. ಇದು ರಬ್ಬರ್‌ ಕಂಪನಿಗಳ ಮೇಲೆ ಪರಿಣಾಮ ಬೀರುತ್ತಿದೆ. ಆಮದು ಕೂಡಾ ಅನಿವಾರ್ಯವಾಗಿ ಮಾಡಬೇಕಾದ ಸ್ಥಿತಿ ಬರುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

9 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

10 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

11 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

20 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

22 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago