Advertisement
MIRROR FOCUS

ಆರ್ಥಿಕ ವರ್ಷದಲ್ಲಿ 33% ರಬ್ಬರ್‌ ಬೆಲೆ ಹೆಚ್ಚಳ | ಪೂರೈಕೆಯಲ್ಲೂ ಕೊರತೆ | ಒತ್ತಡದಲ್ಲಿ ಟಯರ್‌ ಕಂಪನಿಗಳು |

Share

ಈ ಆರ್ಥಿಕ ವರ್ಷದಲ್ಲಿ ರಬ್ಬರ್‌ ಧಾರಣೆ ಏರಿಕೆಯಾಗಿದೆ. ಸರಾಸರಿ ಕನಿಷ್ಟ 200 ರೂಪಾಯಿ ದರ ತಲಪಿದೆ. ದೇಶದಲ್ಲಿ ನೈಸರ್ಗಿಕ ರಬ್ಬರ್ ಬಳಕೆಯ ಶೇಕಡಾ 80 ರಷ್ಟನ್ನು ಟೈಯರ್ ಉದ್ಯಮವು‌ ಬಳಕೆ ಮಾಡುತ್ತದೆ. ಕಳೆದ ಕೆಲವು ವರ್ಷಗಳಿಂದ ರಬ್ಬರ್‌ ಧಾರಣೆ ಇಳಿಕೆಯಾಗಿತ್ತು. ಇದೀಗ ಧಾರಣೆ ಏರಿಕೆಯಾಗಿ ಈ ವರ್ಷ ಸರಾಸರಿ ಕನಿಷ್ಟ 200 ರೂಪಾಯಿಗೆ ತಲಪಿತ್ತು.  ಈಗ ರಬ್ಬರ್‌ ಪೂರೈಕೆಯಲ್ಲೂ ಕೊರತೆ ಇದೆ. ಹೀಗಾಗಿ ಟಯರ್‌ ಕಂಪನಿಗಳು ಒತ್ತಡದಲ್ಲಿದೆ ಎಂದು ಕ್ರೆಸಿಲ್‌ ವರದಿ ಮಾಡಿದೆ.

ಕ್ರೆಸಿಲ್‌ ಹಲವು ಮಾರುಕಟ್ಟೆಯ ಮಾಹಿತಿ, ಏರಿಳಿತಗಳ ವಿಶ್ಲೇಷಣೆಯನ್ನು ಒದಗಿಸುತ್ತದೆ.  ರಬ್ಬರ್‌ ಉದ್ಯಮಕ್ಕೆ ಸಂಬಂಧಿಸಿದಂತೆ ಈ ಬಾರಿ ಟಯರ್‌ ಕಂಪನಿಗಳ ಒತ್ತಡವನ್ನು ಕ್ರೆಸಿಲ್‌ ಹೇಳಿದೆ. ಟಯರ್‌ ತಯಾರಕರು ಗಗನಕ್ಕೇರುತ್ತಿರುವ ನೈಸರ್ಗಿಕ ರಬ್ಬರ್ ಬೆಲೆಗಳ ನಡುವೆ ಉತ್ಪಾದನೆ ಮಾಡಬೇಕಾಗಿದೆ ಎಂದು ಸಂಕ್ಷಿಪ್ತವಾಗಿ ಹೇಳಿದೆ.  ಈ ವರ್ಷದ ಕಳೆದ ಐದು ತಿಂಗಳಲ್ಲಿ ಶೇಕಡಾ 33 ರಷ್ಟು ರಬ್ಬರ್‌ ಬೆಲೆ ಏರಿಕೆಯಾಗಿದೆ ಎಂದು ಕ್ರಿಸಿಲ್ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ. ನೈಸರ್ಗಿಕ ರಬ್ಬರ್‌ನ ಪೂರೈಕೆ ಮತ್ತು ಹೆಚ್ಚುತ್ತಿರುವ ವೆಚ್ಚಗಳು ಟಯರ್ ತಯಾರಕರಿಗೆ ಸವಾಲಿನ ವಾತಾವರಣವನ್ನು ಸೃಷ್ಟಿಸಿವೆ ಎಂದು ಅದು ಹೇಳಿದೆ.

ದೇಶದಲ್ಲಿ ನೈಸರ್ಗಿಕ ರಬ್ಬರ್ ಬಳಕೆಯ ಶೇಕಡಾ 80 ರಷ್ಟನ್ನು ಟಯರ್ ಉದ್ಯಮವು ಹೊಂದಿದೆ. ನೈಸರ್ಗಿಕ ರಬ್ಬರ್ ಬೆಲೆಗಳು, ಕಳೆದ ಒಂದು ದಶಕದಿಂದ ಕೆಳಗಿಳಿದಿದ್ದು, ಈಗ ಪ್ರತಿ ಕಿಲೋಗ್ರಾಂಗೆ‌ ಸರಾಸರಿ ರೂ 200 ರ ಗಡಿಯನ್ನು ಮೀರಿದೆ. ಹೀಗಾಗಿ ಈಗ ಬೆಲೆ ಏರಿಕೆಯ ಸಮಸ್ಯೆ ಕಂಪನಿಗಳಿಗೆ ಕಾಡಿದೆ. ಈ ನಡುವೆ ರಬ್ಬರ್‌ ಪೂರೈಕೆಯಲ್ಲೂ ವ್ಯತ್ಯಾಸವಾಗಿದೆ. ಸರಿಯಾದ ಪ್ರಮಾಣದಲ್ಲಿ ಪೂರೈಕೆಯೂ ಆಗುತ್ತಿಲ್ಲ.

ವರದಿಯ ಪ್ರಕಾರ, ನೈಸರ್ಗಿಕ ರಬ್ಬರ್ ಬೆಲೆಗಳಲ್ಲಿನ ಪ್ರಸ್ತುತ ಏರಿಕೆಯು ರಬ್ಬರ್ ಬೇಡಿಕೆಯ ಕಾರಣದಿಂದ ಉಂಟಾಗಿದೆ. 2011 ಮತ್ತು 2023 ರ ನಡುವೆ, ಜಾಗತಿಕ ನೈಸರ್ಗಿಕ ರಬ್ಬರ್ ಉತ್ಪಾದನೆಯು ಶೇಕಡಾ 35 ರಷ್ಟು ಬೆಳೆದಿದೆ, ಆದರೆ ಬೇಡಿಕೆಯು ಶೇಕಡಾ 40 ರಷ್ಟು ಏರಿಕೆಯಾಗಿದೆ. ಈ ಅಂತರವು‌ ಹೆಚ್ಚಾಗುತ್ತಿರುವ ಕಾರಣ ಟಯರ್  ಕಂಪನಿಗಳು ಮಾರುಕಟ್ಟೆ ಅಗತ್ಯಗಳನ್ನು ಪೂರೈಸಲು ಸಂಕಷ್ಟ ಪಡುತ್ತಿದ್ದಾರೆ.

ಕಾರ್ಮಿಕರ ಕೊರತೆ ಹಾಗೂ ಇತರ ಕೆಲವು ಕಾರಣಗಳಿಂದ  ರಬ್ಬರ್‌ ಉತ್ಪಾದನೆಯ ಮೇಲೆ ಪರಿಣಾಮ ಬೀರಿತ್ತು.ಹೀಗಾಗಿ ಇಂದಿಗೂ ಬೇಡಿಕೆಗೆ ತಕ್ಕಂತೆ ರಬ್ಬರ್‌ ಪೂರೈಕೆ ಸಾಧ್ಯವಾಗುತ್ತಿಲ್ಲ. ಇದು ರಬ್ಬರ್‌ ಕಂಪನಿಗಳ ಮೇಲೆ ಪರಿಣಾಮ ಬೀರುತ್ತಿದೆ. ಆಮದು ಕೂಡಾ ಅನಿವಾರ್ಯವಾಗಿ ಮಾಡಬೇಕಾದ ಸ್ಥಿತಿ ಬರುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

4 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

12 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

13 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

23 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago