Advertisement
ಸುದ್ದಿಗಳು

ಒಂದೇ ದಿನದಲ್ಲಿ ಶೀಟ್ ರಬ್ಬರ್ ಒಣಗಿಸುವ ಹೊಸ ವಿಧಾನ ಅಭಿವೃದ್ಧಿ |

Share
ರಬ್ಬರ್‌ ಶೀಟ್‌ ಒಣಗಿಸಲು ಇನ್ನು ದಿನಗಟ್ಟಲೆ ಕಾಯಬೇಕಾಗಿಲ್ಲ. ಕೇವಲ 24 ಗಂಟೆಯಲ್ಲಿ ಒಣಗಿಸುವ ವಿಧಾನವನ್ನು ಅಭಿವೃದ್ಧಿ ಪಡಿಸಲಾಗಿದೆ. ರಬ್ಬರ್ ಬೋರ್ಡ್ ಅಡಿಯಲ್ಲಿ ಬರುವ ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ ಈ ತಂತ್ರಜ್ಞಾನವನ್ನು ರಬ್ಬರ್‌ ಬೆಳೆಗಾರರಿಗಾಗಿ ನೀಡಿದೆ.
ರಬ್ಬರ್ ಬೋರ್ಡ್ ಅಡಿಯಲ್ಲಿ ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ 4 -5 ಐದು ದಿನಗಳನ್ನು ತೆಗೆದುಕೊಳ್ಳುವ ಸಾಂಪ್ರದಾಯಿಕ ರಬ್ಬರ್‌ ಒಣಗಿಸುವ ವಿಧಾನದ ಬದಲಿಗೆ 24 ಗಂಟೆಗಳಲ್ಲಿ ಶೀಟ್ ರಬ್ಬರ್ ಅನ್ನು ಒಣಗಿಸುವ ನೂತನ ವಿಧಾನವನ್ನು ಅಭಿವೃದ್ಧಿಪಡಿಸಿದೆ.

ಆಸಿಡ್ ಮತ್ತು ಆಲ್ಕೋಹಾಲ್ ಮಿಶ್ರಣ ಮತ್ತು ಸುಧಾರಿತ ಶೀಟಿಂಗ್ ಪ್ರಕ್ರಿಯೆಯೊಂದಿಗೆ ಈ ತಂತ್ರಜ್ಞಾನ ಇದೆ. ಸಾಂಪ್ರಾದಾಯಿಕವಾಗಿ ರಬ್ಬರ್ ಹೆಪ್ಪುಗಟ್ಟುವಿಕೆಯನ್ನು ದುರ್ಬಲಗೊಳಿಸಿದ ಫಾರ್ಮಿಕ್ ಆಸಿಡ್  ಬದಲಿಸುವ ಮೂಲಕ ಹೆಚ್ಚು ವೇಗವಾಗಿ ಒಣಗಿಸುವ ವಿಧಾನವನ್ನು ಮಾಡಲಾಗುತ್ತದೆ ಎಂದು ಸಂಸ್ಥೆಯ ವಿಜ್ಞಾನಿಯಾದ ಡಾ. ಥಾಮಸ್ ಹೇಳಿದ್ದಾರೆ.

ರಬ್ಬರ್ ತೋಟಗಳು ಹೆಚ್ಚಾಗಿ ಸಣ್ಣ ರೈತರ ಒಡೆತನದಲ್ಲಿರುವುದರಿಂದ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಗಳಿಸಲು ಈ ಶೀಟ್ ರಬ್ಬರ್ ಸಹಾಕಾರಿಯಾಗುತ್ತದೆ ಎಂದು ಸಂಸ್ಥೆಯ ವಿಜ್ಞಾನಿಗಳಾದ ವಿನೋತ್ ಥಾಮಸ್ ಮತ್ತು ಜಾಯ್ ಜೋಸೆಫ್ ಅಭಿಪ್ರಾಯಪಟ್ಟಿದ್ದಾರೆ. ಕಚ್ಚಾ ಲ್ಯಾಟೆಕ್ಸ್ ಅನ್ನು ಶೀಟ್ ರಬ್ಬರ್ ಆಗಿ ಪರಿವರ್ತಿಸುವುದರಿಂದ ಉತ್ಪನ್ನವನ್ನು ಸಂಗ್ರಹಿಸಲು ಮತ್ತು ಮಾರುಕಟ್ಟೆ ಪರಿಸ್ಥಿತಿಗೆ ಅನುಗುಣವಾಗಿ ಮಾರಾಟ ಮಾಡಲು ಸಹಾಯ ಮಾಡುತ್ತದೆ. ಮಾತ್ರವಲ್ಲದೆ, ಈ ಹೊಸ ವಿಧಾನವು  ರಬ್ಬರ್ ಹಾಳೆಗಳನ್ನು ಒಂದು ದಿನದೊಳಗೆ ಸಿದ್ದಗೊಳಿಸಲು ಸಹಾಯ ಮಾಡುತ್ತದೆ ಎಂದು ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ ತಿಳಿಸಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

2 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

2 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

13 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

13 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

17 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago