Advertisement
ಸುದ್ದಿಗಳು

ಒಂದೇ ದಿನದಲ್ಲಿ ಶೀಟ್ ರಬ್ಬರ್ ಒಣಗಿಸುವ ಹೊಸ ವಿಧಾನ ಅಭಿವೃದ್ಧಿ |

Share
ರಬ್ಬರ್‌ ಶೀಟ್‌ ಒಣಗಿಸಲು ಇನ್ನು ದಿನಗಟ್ಟಲೆ ಕಾಯಬೇಕಾಗಿಲ್ಲ. ಕೇವಲ 24 ಗಂಟೆಯಲ್ಲಿ ಒಣಗಿಸುವ ವಿಧಾನವನ್ನು ಅಭಿವೃದ್ಧಿ ಪಡಿಸಲಾಗಿದೆ. ರಬ್ಬರ್ ಬೋರ್ಡ್ ಅಡಿಯಲ್ಲಿ ಬರುವ ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ ಈ ತಂತ್ರಜ್ಞಾನವನ್ನು ರಬ್ಬರ್‌ ಬೆಳೆಗಾರರಿಗಾಗಿ ನೀಡಿದೆ.
ರಬ್ಬರ್ ಬೋರ್ಡ್ ಅಡಿಯಲ್ಲಿ ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ 4 -5 ಐದು ದಿನಗಳನ್ನು ತೆಗೆದುಕೊಳ್ಳುವ ಸಾಂಪ್ರದಾಯಿಕ ರಬ್ಬರ್‌ ಒಣಗಿಸುವ ವಿಧಾನದ ಬದಲಿಗೆ 24 ಗಂಟೆಗಳಲ್ಲಿ ಶೀಟ್ ರಬ್ಬರ್ ಅನ್ನು ಒಣಗಿಸುವ ನೂತನ ವಿಧಾನವನ್ನು ಅಭಿವೃದ್ಧಿಪಡಿಸಿದೆ.

ಆಸಿಡ್ ಮತ್ತು ಆಲ್ಕೋಹಾಲ್ ಮಿಶ್ರಣ ಮತ್ತು ಸುಧಾರಿತ ಶೀಟಿಂಗ್ ಪ್ರಕ್ರಿಯೆಯೊಂದಿಗೆ ಈ ತಂತ್ರಜ್ಞಾನ ಇದೆ. ಸಾಂಪ್ರಾದಾಯಿಕವಾಗಿ ರಬ್ಬರ್ ಹೆಪ್ಪುಗಟ್ಟುವಿಕೆಯನ್ನು ದುರ್ಬಲಗೊಳಿಸಿದ ಫಾರ್ಮಿಕ್ ಆಸಿಡ್  ಬದಲಿಸುವ ಮೂಲಕ ಹೆಚ್ಚು ವೇಗವಾಗಿ ಒಣಗಿಸುವ ವಿಧಾನವನ್ನು ಮಾಡಲಾಗುತ್ತದೆ ಎಂದು ಸಂಸ್ಥೆಯ ವಿಜ್ಞಾನಿಯಾದ ಡಾ. ಥಾಮಸ್ ಹೇಳಿದ್ದಾರೆ.

ರಬ್ಬರ್ ತೋಟಗಳು ಹೆಚ್ಚಾಗಿ ಸಣ್ಣ ರೈತರ ಒಡೆತನದಲ್ಲಿರುವುದರಿಂದ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಗಳಿಸಲು ಈ ಶೀಟ್ ರಬ್ಬರ್ ಸಹಾಕಾರಿಯಾಗುತ್ತದೆ ಎಂದು ಸಂಸ್ಥೆಯ ವಿಜ್ಞಾನಿಗಳಾದ ವಿನೋತ್ ಥಾಮಸ್ ಮತ್ತು ಜಾಯ್ ಜೋಸೆಫ್ ಅಭಿಪ್ರಾಯಪಟ್ಟಿದ್ದಾರೆ. ಕಚ್ಚಾ ಲ್ಯಾಟೆಕ್ಸ್ ಅನ್ನು ಶೀಟ್ ರಬ್ಬರ್ ಆಗಿ ಪರಿವರ್ತಿಸುವುದರಿಂದ ಉತ್ಪನ್ನವನ್ನು ಸಂಗ್ರಹಿಸಲು ಮತ್ತು ಮಾರುಕಟ್ಟೆ ಪರಿಸ್ಥಿತಿಗೆ ಅನುಗುಣವಾಗಿ ಮಾರಾಟ ಮಾಡಲು ಸಹಾಯ ಮಾಡುತ್ತದೆ. ಮಾತ್ರವಲ್ಲದೆ, ಈ ಹೊಸ ವಿಧಾನವು  ರಬ್ಬರ್ ಹಾಳೆಗಳನ್ನು ಒಂದು ದಿನದೊಳಗೆ ಸಿದ್ದಗೊಳಿಸಲು ಸಹಾಯ ಮಾಡುತ್ತದೆ ಎಂದು ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ ತಿಳಿಸಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

6 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

6 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 day ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago