Advertisement
ಸುದ್ದಿಗಳು

ಒಂದೇ ದಿನದಲ್ಲಿ ಶೀಟ್ ರಬ್ಬರ್ ಒಣಗಿಸುವ ಹೊಸ ವಿಧಾನ ಅಭಿವೃದ್ಧಿ |

Share
ರಬ್ಬರ್‌ ಶೀಟ್‌ ಒಣಗಿಸಲು ಇನ್ನು ದಿನಗಟ್ಟಲೆ ಕಾಯಬೇಕಾಗಿಲ್ಲ. ಕೇವಲ 24 ಗಂಟೆಯಲ್ಲಿ ಒಣಗಿಸುವ ವಿಧಾನವನ್ನು ಅಭಿವೃದ್ಧಿ ಪಡಿಸಲಾಗಿದೆ. ರಬ್ಬರ್ ಬೋರ್ಡ್ ಅಡಿಯಲ್ಲಿ ಬರುವ ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ ಈ ತಂತ್ರಜ್ಞಾನವನ್ನು ರಬ್ಬರ್‌ ಬೆಳೆಗಾರರಿಗಾಗಿ ನೀಡಿದೆ.
ರಬ್ಬರ್ ಬೋರ್ಡ್ ಅಡಿಯಲ್ಲಿ ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ 4 -5 ಐದು ದಿನಗಳನ್ನು ತೆಗೆದುಕೊಳ್ಳುವ ಸಾಂಪ್ರದಾಯಿಕ ರಬ್ಬರ್‌ ಒಣಗಿಸುವ ವಿಧಾನದ ಬದಲಿಗೆ 24 ಗಂಟೆಗಳಲ್ಲಿ ಶೀಟ್ ರಬ್ಬರ್ ಅನ್ನು ಒಣಗಿಸುವ ನೂತನ ವಿಧಾನವನ್ನು ಅಭಿವೃದ್ಧಿಪಡಿಸಿದೆ.

ಆಸಿಡ್ ಮತ್ತು ಆಲ್ಕೋಹಾಲ್ ಮಿಶ್ರಣ ಮತ್ತು ಸುಧಾರಿತ ಶೀಟಿಂಗ್ ಪ್ರಕ್ರಿಯೆಯೊಂದಿಗೆ ಈ ತಂತ್ರಜ್ಞಾನ ಇದೆ. ಸಾಂಪ್ರಾದಾಯಿಕವಾಗಿ ರಬ್ಬರ್ ಹೆಪ್ಪುಗಟ್ಟುವಿಕೆಯನ್ನು ದುರ್ಬಲಗೊಳಿಸಿದ ಫಾರ್ಮಿಕ್ ಆಸಿಡ್  ಬದಲಿಸುವ ಮೂಲಕ ಹೆಚ್ಚು ವೇಗವಾಗಿ ಒಣಗಿಸುವ ವಿಧಾನವನ್ನು ಮಾಡಲಾಗುತ್ತದೆ ಎಂದು ಸಂಸ್ಥೆಯ ವಿಜ್ಞಾನಿಯಾದ ಡಾ. ಥಾಮಸ್ ಹೇಳಿದ್ದಾರೆ.

Advertisement
Advertisement
Advertisement
Advertisement
ರಬ್ಬರ್ ತೋಟಗಳು ಹೆಚ್ಚಾಗಿ ಸಣ್ಣ ರೈತರ ಒಡೆತನದಲ್ಲಿರುವುದರಿಂದ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಗಳಿಸಲು ಈ ಶೀಟ್ ರಬ್ಬರ್ ಸಹಾಕಾರಿಯಾಗುತ್ತದೆ ಎಂದು ಸಂಸ್ಥೆಯ ವಿಜ್ಞಾನಿಗಳಾದ ವಿನೋತ್ ಥಾಮಸ್ ಮತ್ತು ಜಾಯ್ ಜೋಸೆಫ್ ಅಭಿಪ್ರಾಯಪಟ್ಟಿದ್ದಾರೆ. ಕಚ್ಚಾ ಲ್ಯಾಟೆಕ್ಸ್ ಅನ್ನು ಶೀಟ್ ರಬ್ಬರ್ ಆಗಿ ಪರಿವರ್ತಿಸುವುದರಿಂದ ಉತ್ಪನ್ನವನ್ನು ಸಂಗ್ರಹಿಸಲು ಮತ್ತು ಮಾರುಕಟ್ಟೆ ಪರಿಸ್ಥಿತಿಗೆ ಅನುಗುಣವಾಗಿ ಮಾರಾಟ ಮಾಡಲು ಸಹಾಯ ಮಾಡುತ್ತದೆ. ಮಾತ್ರವಲ್ಲದೆ, ಈ ಹೊಸ ವಿಧಾನವು  ರಬ್ಬರ್ ಹಾಳೆಗಳನ್ನು ಒಂದು ದಿನದೊಳಗೆ ಸಿದ್ದಗೊಳಿಸಲು ಸಹಾಯ ಮಾಡುತ್ತದೆ ಎಂದು ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ ತಿಳಿಸಿದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

3 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

4 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

5 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

14 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

14 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

14 hours ago