ಸುದ್ದಿಗಳು

ಒಂದೇ ದಿನದಲ್ಲಿ ಶೀಟ್ ರಬ್ಬರ್ ಒಣಗಿಸುವ ಹೊಸ ವಿಧಾನ ಅಭಿವೃದ್ಧಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ರಬ್ಬರ್‌ ಶೀಟ್‌ ಒಣಗಿಸಲು ಇನ್ನು ದಿನಗಟ್ಟಲೆ ಕಾಯಬೇಕಾಗಿಲ್ಲ. ಕೇವಲ 24 ಗಂಟೆಯಲ್ಲಿ ಒಣಗಿಸುವ ವಿಧಾನವನ್ನು ಅಭಿವೃದ್ಧಿ ಪಡಿಸಲಾಗಿದೆ. ರಬ್ಬರ್ ಬೋರ್ಡ್ ಅಡಿಯಲ್ಲಿ ಬರುವ ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ ಈ ತಂತ್ರಜ್ಞಾನವನ್ನು ರಬ್ಬರ್‌ ಬೆಳೆಗಾರರಿಗಾಗಿ ನೀಡಿದೆ.
ರಬ್ಬರ್ ಬೋರ್ಡ್ ಅಡಿಯಲ್ಲಿ ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ 4 -5 ಐದು ದಿನಗಳನ್ನು ತೆಗೆದುಕೊಳ್ಳುವ ಸಾಂಪ್ರದಾಯಿಕ ರಬ್ಬರ್‌ ಒಣಗಿಸುವ ವಿಧಾನದ ಬದಲಿಗೆ 24 ಗಂಟೆಗಳಲ್ಲಿ ಶೀಟ್ ರಬ್ಬರ್ ಅನ್ನು ಒಣಗಿಸುವ ನೂತನ ವಿಧಾನವನ್ನು ಅಭಿವೃದ್ಧಿಪಡಿಸಿದೆ.

ಆಸಿಡ್ ಮತ್ತು ಆಲ್ಕೋಹಾಲ್ ಮಿಶ್ರಣ ಮತ್ತು ಸುಧಾರಿತ ಶೀಟಿಂಗ್ ಪ್ರಕ್ರಿಯೆಯೊಂದಿಗೆ ಈ ತಂತ್ರಜ್ಞಾನ ಇದೆ. ಸಾಂಪ್ರಾದಾಯಿಕವಾಗಿ ರಬ್ಬರ್ ಹೆಪ್ಪುಗಟ್ಟುವಿಕೆಯನ್ನು ದುರ್ಬಲಗೊಳಿಸಿದ ಫಾರ್ಮಿಕ್ ಆಸಿಡ್  ಬದಲಿಸುವ ಮೂಲಕ ಹೆಚ್ಚು ವೇಗವಾಗಿ ಒಣಗಿಸುವ ವಿಧಾನವನ್ನು ಮಾಡಲಾಗುತ್ತದೆ ಎಂದು ಸಂಸ್ಥೆಯ ವಿಜ್ಞಾನಿಯಾದ ಡಾ. ಥಾಮಸ್ ಹೇಳಿದ್ದಾರೆ.

Advertisement
Advertisement
ರಬ್ಬರ್ ತೋಟಗಳು ಹೆಚ್ಚಾಗಿ ಸಣ್ಣ ರೈತರ ಒಡೆತನದಲ್ಲಿರುವುದರಿಂದ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಗಳಿಸಲು ಈ ಶೀಟ್ ರಬ್ಬರ್ ಸಹಾಕಾರಿಯಾಗುತ್ತದೆ ಎಂದು ಸಂಸ್ಥೆಯ ವಿಜ್ಞಾನಿಗಳಾದ ವಿನೋತ್ ಥಾಮಸ್ ಮತ್ತು ಜಾಯ್ ಜೋಸೆಫ್ ಅಭಿಪ್ರಾಯಪಟ್ಟಿದ್ದಾರೆ. ಕಚ್ಚಾ ಲ್ಯಾಟೆಕ್ಸ್ ಅನ್ನು ಶೀಟ್ ರಬ್ಬರ್ ಆಗಿ ಪರಿವರ್ತಿಸುವುದರಿಂದ ಉತ್ಪನ್ನವನ್ನು ಸಂಗ್ರಹಿಸಲು ಮತ್ತು ಮಾರುಕಟ್ಟೆ ಪರಿಸ್ಥಿತಿಗೆ ಅನುಗುಣವಾಗಿ ಮಾರಾಟ ಮಾಡಲು ಸಹಾಯ ಮಾಡುತ್ತದೆ. ಮಾತ್ರವಲ್ಲದೆ, ಈ ಹೊಸ ವಿಧಾನವು  ರಬ್ಬರ್ ಹಾಳೆಗಳನ್ನು ಒಂದು ದಿನದೊಳಗೆ ಸಿದ್ದಗೊಳಿಸಲು ಸಹಾಯ ಮಾಡುತ್ತದೆ ಎಂದು ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ ತಿಳಿಸಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

52 minutes ago

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

10 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

10 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

11 hours ago

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…

11 hours ago

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…

11 hours ago