Advertisement
ಸುದ್ದಿಗಳು

ಒಂದೇ ದಿನದಲ್ಲಿ ಶೀಟ್ ರಬ್ಬರ್ ಒಣಗಿಸುವ ಹೊಸ ವಿಧಾನ ಅಭಿವೃದ್ಧಿ |

Share
ರಬ್ಬರ್‌ ಶೀಟ್‌ ಒಣಗಿಸಲು ಇನ್ನು ದಿನಗಟ್ಟಲೆ ಕಾಯಬೇಕಾಗಿಲ್ಲ. ಕೇವಲ 24 ಗಂಟೆಯಲ್ಲಿ ಒಣಗಿಸುವ ವಿಧಾನವನ್ನು ಅಭಿವೃದ್ಧಿ ಪಡಿಸಲಾಗಿದೆ. ರಬ್ಬರ್ ಬೋರ್ಡ್ ಅಡಿಯಲ್ಲಿ ಬರುವ ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ ಈ ತಂತ್ರಜ್ಞಾನವನ್ನು ರಬ್ಬರ್‌ ಬೆಳೆಗಾರರಿಗಾಗಿ ನೀಡಿದೆ.
ರಬ್ಬರ್ ಬೋರ್ಡ್ ಅಡಿಯಲ್ಲಿ ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ 4 -5 ಐದು ದಿನಗಳನ್ನು ತೆಗೆದುಕೊಳ್ಳುವ ಸಾಂಪ್ರದಾಯಿಕ ರಬ್ಬರ್‌ ಒಣಗಿಸುವ ವಿಧಾನದ ಬದಲಿಗೆ 24 ಗಂಟೆಗಳಲ್ಲಿ ಶೀಟ್ ರಬ್ಬರ್ ಅನ್ನು ಒಣಗಿಸುವ ನೂತನ ವಿಧಾನವನ್ನು ಅಭಿವೃದ್ಧಿಪಡಿಸಿದೆ.

ಆಸಿಡ್ ಮತ್ತು ಆಲ್ಕೋಹಾಲ್ ಮಿಶ್ರಣ ಮತ್ತು ಸುಧಾರಿತ ಶೀಟಿಂಗ್ ಪ್ರಕ್ರಿಯೆಯೊಂದಿಗೆ ಈ ತಂತ್ರಜ್ಞಾನ ಇದೆ. ಸಾಂಪ್ರಾದಾಯಿಕವಾಗಿ ರಬ್ಬರ್ ಹೆಪ್ಪುಗಟ್ಟುವಿಕೆಯನ್ನು ದುರ್ಬಲಗೊಳಿಸಿದ ಫಾರ್ಮಿಕ್ ಆಸಿಡ್  ಬದಲಿಸುವ ಮೂಲಕ ಹೆಚ್ಚು ವೇಗವಾಗಿ ಒಣಗಿಸುವ ವಿಧಾನವನ್ನು ಮಾಡಲಾಗುತ್ತದೆ ಎಂದು ಸಂಸ್ಥೆಯ ವಿಜ್ಞಾನಿಯಾದ ಡಾ. ಥಾಮಸ್ ಹೇಳಿದ್ದಾರೆ.

ರಬ್ಬರ್ ತೋಟಗಳು ಹೆಚ್ಚಾಗಿ ಸಣ್ಣ ರೈತರ ಒಡೆತನದಲ್ಲಿರುವುದರಿಂದ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಗಳಿಸಲು ಈ ಶೀಟ್ ರಬ್ಬರ್ ಸಹಾಕಾರಿಯಾಗುತ್ತದೆ ಎಂದು ಸಂಸ್ಥೆಯ ವಿಜ್ಞಾನಿಗಳಾದ ವಿನೋತ್ ಥಾಮಸ್ ಮತ್ತು ಜಾಯ್ ಜೋಸೆಫ್ ಅಭಿಪ್ರಾಯಪಟ್ಟಿದ್ದಾರೆ. ಕಚ್ಚಾ ಲ್ಯಾಟೆಕ್ಸ್ ಅನ್ನು ಶೀಟ್ ರಬ್ಬರ್ ಆಗಿ ಪರಿವರ್ತಿಸುವುದರಿಂದ ಉತ್ಪನ್ನವನ್ನು ಸಂಗ್ರಹಿಸಲು ಮತ್ತು ಮಾರುಕಟ್ಟೆ ಪರಿಸ್ಥಿತಿಗೆ ಅನುಗುಣವಾಗಿ ಮಾರಾಟ ಮಾಡಲು ಸಹಾಯ ಮಾಡುತ್ತದೆ. ಮಾತ್ರವಲ್ಲದೆ, ಈ ಹೊಸ ವಿಧಾನವು  ರಬ್ಬರ್ ಹಾಳೆಗಳನ್ನು ಒಂದು ದಿನದೊಳಗೆ ಸಿದ್ದಗೊಳಿಸಲು ಸಹಾಯ ಮಾಡುತ್ತದೆ ಎಂದು ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ ತಿಳಿಸಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

9 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

20 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

20 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

21 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago