Advertisement
ಸುದ್ದಿಗಳು

ಒಂದೇ ದಿನದಲ್ಲಿ ಶೀಟ್ ರಬ್ಬರ್ ಒಣಗಿಸುವ ಹೊಸ ವಿಧಾನ ಅಭಿವೃದ್ಧಿ |

Share
ರಬ್ಬರ್‌ ಶೀಟ್‌ ಒಣಗಿಸಲು ಇನ್ನು ದಿನಗಟ್ಟಲೆ ಕಾಯಬೇಕಾಗಿಲ್ಲ. ಕೇವಲ 24 ಗಂಟೆಯಲ್ಲಿ ಒಣಗಿಸುವ ವಿಧಾನವನ್ನು ಅಭಿವೃದ್ಧಿ ಪಡಿಸಲಾಗಿದೆ. ರಬ್ಬರ್ ಬೋರ್ಡ್ ಅಡಿಯಲ್ಲಿ ಬರುವ ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ ಈ ತಂತ್ರಜ್ಞಾನವನ್ನು ರಬ್ಬರ್‌ ಬೆಳೆಗಾರರಿಗಾಗಿ ನೀಡಿದೆ.
ರಬ್ಬರ್ ಬೋರ್ಡ್ ಅಡಿಯಲ್ಲಿ ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ 4 -5 ಐದು ದಿನಗಳನ್ನು ತೆಗೆದುಕೊಳ್ಳುವ ಸಾಂಪ್ರದಾಯಿಕ ರಬ್ಬರ್‌ ಒಣಗಿಸುವ ವಿಧಾನದ ಬದಲಿಗೆ 24 ಗಂಟೆಗಳಲ್ಲಿ ಶೀಟ್ ರಬ್ಬರ್ ಅನ್ನು ಒಣಗಿಸುವ ನೂತನ ವಿಧಾನವನ್ನು ಅಭಿವೃದ್ಧಿಪಡಿಸಿದೆ.

ಆಸಿಡ್ ಮತ್ತು ಆಲ್ಕೋಹಾಲ್ ಮಿಶ್ರಣ ಮತ್ತು ಸುಧಾರಿತ ಶೀಟಿಂಗ್ ಪ್ರಕ್ರಿಯೆಯೊಂದಿಗೆ ಈ ತಂತ್ರಜ್ಞಾನ ಇದೆ. ಸಾಂಪ್ರಾದಾಯಿಕವಾಗಿ ರಬ್ಬರ್ ಹೆಪ್ಪುಗಟ್ಟುವಿಕೆಯನ್ನು ದುರ್ಬಲಗೊಳಿಸಿದ ಫಾರ್ಮಿಕ್ ಆಸಿಡ್  ಬದಲಿಸುವ ಮೂಲಕ ಹೆಚ್ಚು ವೇಗವಾಗಿ ಒಣಗಿಸುವ ವಿಧಾನವನ್ನು ಮಾಡಲಾಗುತ್ತದೆ ಎಂದು ಸಂಸ್ಥೆಯ ವಿಜ್ಞಾನಿಯಾದ ಡಾ. ಥಾಮಸ್ ಹೇಳಿದ್ದಾರೆ.

ರಬ್ಬರ್ ತೋಟಗಳು ಹೆಚ್ಚಾಗಿ ಸಣ್ಣ ರೈತರ ಒಡೆತನದಲ್ಲಿರುವುದರಿಂದ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಗಳಿಸಲು ಈ ಶೀಟ್ ರಬ್ಬರ್ ಸಹಾಕಾರಿಯಾಗುತ್ತದೆ ಎಂದು ಸಂಸ್ಥೆಯ ವಿಜ್ಞಾನಿಗಳಾದ ವಿನೋತ್ ಥಾಮಸ್ ಮತ್ತು ಜಾಯ್ ಜೋಸೆಫ್ ಅಭಿಪ್ರಾಯಪಟ್ಟಿದ್ದಾರೆ. ಕಚ್ಚಾ ಲ್ಯಾಟೆಕ್ಸ್ ಅನ್ನು ಶೀಟ್ ರಬ್ಬರ್ ಆಗಿ ಪರಿವರ್ತಿಸುವುದರಿಂದ ಉತ್ಪನ್ನವನ್ನು ಸಂಗ್ರಹಿಸಲು ಮತ್ತು ಮಾರುಕಟ್ಟೆ ಪರಿಸ್ಥಿತಿಗೆ ಅನುಗುಣವಾಗಿ ಮಾರಾಟ ಮಾಡಲು ಸಹಾಯ ಮಾಡುತ್ತದೆ. ಮಾತ್ರವಲ್ಲದೆ, ಈ ಹೊಸ ವಿಧಾನವು  ರಬ್ಬರ್ ಹಾಳೆಗಳನ್ನು ಒಂದು ದಿನದೊಳಗೆ ಸಿದ್ದಗೊಳಿಸಲು ಸಹಾಯ ಮಾಡುತ್ತದೆ ಎಂದು ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ ತಿಳಿಸಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

53 minutes ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 hour ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

8 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

10 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

19 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

19 hours ago