Advertisement
ಸುದ್ದಿಗಳು

ಒಂದೇ ದಿನದಲ್ಲಿ ಶೀಟ್ ರಬ್ಬರ್ ಒಣಗಿಸುವ ಹೊಸ ವಿಧಾನ ಅಭಿವೃದ್ಧಿ |

Share
ರಬ್ಬರ್‌ ಶೀಟ್‌ ಒಣಗಿಸಲು ಇನ್ನು ದಿನಗಟ್ಟಲೆ ಕಾಯಬೇಕಾಗಿಲ್ಲ. ಕೇವಲ 24 ಗಂಟೆಯಲ್ಲಿ ಒಣಗಿಸುವ ವಿಧಾನವನ್ನು ಅಭಿವೃದ್ಧಿ ಪಡಿಸಲಾಗಿದೆ. ರಬ್ಬರ್ ಬೋರ್ಡ್ ಅಡಿಯಲ್ಲಿ ಬರುವ ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ ಈ ತಂತ್ರಜ್ಞಾನವನ್ನು ರಬ್ಬರ್‌ ಬೆಳೆಗಾರರಿಗಾಗಿ ನೀಡಿದೆ.
ರಬ್ಬರ್ ಬೋರ್ಡ್ ಅಡಿಯಲ್ಲಿ ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ 4 -5 ಐದು ದಿನಗಳನ್ನು ತೆಗೆದುಕೊಳ್ಳುವ ಸಾಂಪ್ರದಾಯಿಕ ರಬ್ಬರ್‌ ಒಣಗಿಸುವ ವಿಧಾನದ ಬದಲಿಗೆ 24 ಗಂಟೆಗಳಲ್ಲಿ ಶೀಟ್ ರಬ್ಬರ್ ಅನ್ನು ಒಣಗಿಸುವ ನೂತನ ವಿಧಾನವನ್ನು ಅಭಿವೃದ್ಧಿಪಡಿಸಿದೆ.

ಆಸಿಡ್ ಮತ್ತು ಆಲ್ಕೋಹಾಲ್ ಮಿಶ್ರಣ ಮತ್ತು ಸುಧಾರಿತ ಶೀಟಿಂಗ್ ಪ್ರಕ್ರಿಯೆಯೊಂದಿಗೆ ಈ ತಂತ್ರಜ್ಞಾನ ಇದೆ. ಸಾಂಪ್ರಾದಾಯಿಕವಾಗಿ ರಬ್ಬರ್ ಹೆಪ್ಪುಗಟ್ಟುವಿಕೆಯನ್ನು ದುರ್ಬಲಗೊಳಿಸಿದ ಫಾರ್ಮಿಕ್ ಆಸಿಡ್  ಬದಲಿಸುವ ಮೂಲಕ ಹೆಚ್ಚು ವೇಗವಾಗಿ ಒಣಗಿಸುವ ವಿಧಾನವನ್ನು ಮಾಡಲಾಗುತ್ತದೆ ಎಂದು ಸಂಸ್ಥೆಯ ವಿಜ್ಞಾನಿಯಾದ ಡಾ. ಥಾಮಸ್ ಹೇಳಿದ್ದಾರೆ.

ರಬ್ಬರ್ ತೋಟಗಳು ಹೆಚ್ಚಾಗಿ ಸಣ್ಣ ರೈತರ ಒಡೆತನದಲ್ಲಿರುವುದರಿಂದ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಗಳಿಸಲು ಈ ಶೀಟ್ ರಬ್ಬರ್ ಸಹಾಕಾರಿಯಾಗುತ್ತದೆ ಎಂದು ಸಂಸ್ಥೆಯ ವಿಜ್ಞಾನಿಗಳಾದ ವಿನೋತ್ ಥಾಮಸ್ ಮತ್ತು ಜಾಯ್ ಜೋಸೆಫ್ ಅಭಿಪ್ರಾಯಪಟ್ಟಿದ್ದಾರೆ. ಕಚ್ಚಾ ಲ್ಯಾಟೆಕ್ಸ್ ಅನ್ನು ಶೀಟ್ ರಬ್ಬರ್ ಆಗಿ ಪರಿವರ್ತಿಸುವುದರಿಂದ ಉತ್ಪನ್ನವನ್ನು ಸಂಗ್ರಹಿಸಲು ಮತ್ತು ಮಾರುಕಟ್ಟೆ ಪರಿಸ್ಥಿತಿಗೆ ಅನುಗುಣವಾಗಿ ಮಾರಾಟ ಮಾಡಲು ಸಹಾಯ ಮಾಡುತ್ತದೆ. ಮಾತ್ರವಲ್ಲದೆ, ಈ ಹೊಸ ವಿಧಾನವು  ರಬ್ಬರ್ ಹಾಳೆಗಳನ್ನು ಒಂದು ದಿನದೊಳಗೆ ಸಿದ್ದಗೊಳಿಸಲು ಸಹಾಯ ಮಾಡುತ್ತದೆ ಎಂದು ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ ತಿಳಿಸಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

1 hour ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

1 hour ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

19 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago