Advertisement
MIRROR FOCUS

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

Share

ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದ ಅಡಿಕೆ ಬೆಳೆಗಾರರು ವಿದೇಶಗಳಿಂದ ಆಮದಾಗುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ದೇಶೀಯ ಅಡಿಕೆ ಬೆಳೆಗಾರರ ಹಿತ ಕಾಪಾಡುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಲೋಕಸಭೆಯಲ್ಲಿ ನಿಯಮ 377ರಡಿ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ.

ಪ್ರಸ್ತಾಪನೆಯಲ್ಲಿ ಇಂಡೋನೇಷಿಯಾ, ಮ್ಯಾನ್ಮಾರ್, ಶ್ರೀಲಂಕಾ ಹಾಗೂ ಬಾಂಗ್ಲಾದೇಶಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಕಳಪೆ ಗುಣಮಟ್ಟದ ಅಡಿಕೆ ಭಾರತಕ್ಕೆ ಆಮದಾಗುತ್ತಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ಈ ಅಡಿಕೆಗಳನ್ನು ಕಸ್ಟಮ್ಸ್ ಸುಂಕ ತಪ್ಪಿಸಲು “ಹುರಿದ ಅಡಿಕೆ” ಎಂದು ನಮೂದಿಸಿ ದೇಶಕ್ಕೆ ತರಲಾಗುತ್ತಿದೆ ಎಂಬ ಆರೋಪವನ್ನು ದೇಶೀಯ ಅಡಿಕೆ ಬೆಳೆಗಾರರು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇಂತಹ ಅಕ್ರಮ ಆಮದನ್ನು ತಕ್ಷಣ ನಿಯಂತ್ರಿಸದಿದ್ದರೆ ಕರ್ನಾಟಕ ಸೇರಿದಂತೆ ದೇಶದ ಅಡಿಕೆ ಬೆಳೆಗಾರರಿಗೆ ಬೆಲೆ ಕುಸಿತದ ಹೊಡೆತ ಬೀಳುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ. ದೇಶೀಯ ಚಾಲಿ ಹಾಗೂ ರಾಶಿ ಸೇರಿದಂತೆ ಉತ್ತಮ ಗುಣಮಟ್ಟದ ಅಡಿಕೆಯೊಂದಿಗೆ ಕಳಪೆ ಅಡಿಕೆಯನ್ನು ಬೆರೆಸಿ ಮಾರಾಟ ಮಾಡುವುದರಿಂದ ಭಾರತೀಯ ಅಡಿಕೆಯ ಗುಣಮಟ್ಟದ ಖ್ಯಾತಿಗೂ ಧಕ್ಕೆ ಉಂಟಾಗಲಿದೆ ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ (CBIC) ಮೂಲಕ ಸಮಗ್ರ ಲೆಕ್ಕಪರಿಶೋಧನೆ ನಡೆಸಿ ಅಡಿಕೆ ಆಮದಿನ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ದೇಶದ ವಿವಿಧ ಬಂದರುಗಳಿಗೆ ಆಮದಾಗುವ ಅಡಿಕೆಯನ್ನು ಕಡ್ಡಾಯವಾಗಿ ಗುಣಮಟ್ಟ ಪರೀಕ್ಷೆಗೆ ಒಳಪಡಿಸಿ, ಅಕ್ರಮ ಹಾಗೂ ಕಳಪೆ ಅಡಿಕೆ ಆಮದನ್ನು ನಿಯಂತ್ರಿಸುವ ಮೂಲಕ ದೇಶೀಯ ಅಡಿಕೆ ಬೆಳೆಗಾರರ ಹಿತವನ್ನು ರಕ್ಷಿಸುವಂತೆ ಕೇಂದ್ರ ಸರ್ಕಾರವನ್ನು ಪ್ರಸ್ತಾಪನೆಯಲ್ಲಿ ಮನವಿ ಮಾಡಿದ್ದಾರೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

BJP MP Kota Srinivas Poojary has raised the issue of low-quality areca nut imports under Rule 377 in the Lok Sabha, urging the Central Government to protect Karnataka’s areca nut growers. He sought stricter CBIC monitoring, quality inspections at ports, and action against alleged duty evasion in areca nut imports.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

11 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

12 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

13 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

16 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago