Advertisement
ವಿಶೇಷ ವರದಿಗಳು

ಗ್ರಾಮೀಣ ಕೃಷಿ ಕಾರ್ಯ ಅನುಭವ | ವಿದ್ಯಾರ್ಥಿಗಳಿಂದ ಹೊಸ ಪ್ರಯೋಗ |

Share

ಕೃಷಿ ವಿಶ್ವವಿದ್ಯಾನಿಲಯಗಳಿಂದ ಹೊರಬರುವ ವಿದ್ಯಾರ್ಥಿಗಳು ರೈತರಿಗೆ ಅನುಕೂಲಕರವಾದ ಕೆಲಸ ಮಾಡಬೇಕು ಎನ್ನುವುದು ಎಲ್ಲರ ನಿರೀಕ್ಷೆ. ಆದರೆ ರೈತರು ಪ್ರಸಕ್ತ ಕಾಲಘಟ್ಟದಲ್ಲಿ ಅನುಭವಿಸುವ ಸಮಸ್ಯೆಗಳ ಬಗ್ಗೆ ಅರಿವು ಕೂಡಾ ಅಷ್ಟೇ ಅಗತ್ಯ ಇದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳೇ ಗ್ರಾಮೀಣ ಭಾಗಕ್ಕೆ ಆಗಮಿಸಿ ಸವಾಲುಗಳನ್ನು ಕಂಡುಕೊಂಡು ಅದಕ್ಕೆ ಪರಿಹಾರ ಹೇಳುವ ವಿನೂತನ ಕಾರ್ಯಕ್ರಮವನ್ನು ಹಾಸನದಲ್ಲಿ ವಿದ್ಯಾರ್ಥಿಗಳು ಆಯೋಜಿಸಿದ್ದರು.

Advertisement
Advertisement
Advertisement
Advertisement

ಹಾಸನದ ಕೃಷಿ ಮಹಾ ವಿಶ್ವವಿದ್ಯಾಲಯದ – ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಮೂರು ವರ್ಷದ ಕೃಷಿ ಪದವಿ ಮುಗಿಸಿದ ವಿದ್ಯಾರ್ಥಿಗಳು ಪಠ್ಯಕ್ರಮದ ಅನುಸಾರ ರೈತರೊಂದಿಗೆ ಬೆರೆತು ಕೃಷಿ ಸಂಬಂಧಿತ ಪ್ರಾಯೋಗಿಕ ಜ್ಞಾನ, ಅನುಭವ ಪಡೆದುಕೊಂಡರು.

Advertisement

ಮೂರು ವರ್ಷದ ಕೃಷಿ ಪದವಿ ಬಳಿಕ ಶೈಕ್ಷಣಿಕ ಕಲಿಕೆಯ ಭಾಗವಾಗಿ ಮೂರು ತಿಂಗಳ ಅವಧಿಗೆ ಈ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.ಪದವಿಯಲ್ಲಿ ಕಲಿತ ಕೃಷಿ ಆಧಾರಿತ ತಂತ್ರಜ್ಞಾನ ಹಾಗೂ ಮಾಹಿತಿಯನ್ನು ರೈತರಿಗೆ ತಿಳಿಸಿ, ಅವರಿಂದ ಹಿಮ್ಮಾಹಿತಿ ಪಡೆಯುವುದು ಕೂಡಾ ಇಲ್ಲಿ ಬಹುಮುಖ್ಯವಾಗಿದೆ. ಶಿಬಿರದಲ್ಲಿ ಕೃಷಿ ಕುರಿತ ಹಲವಾರು ಕಾರ್ಯಕ್ರಮಗಳನ್ನು ನಿತ್ಯವೂ ನಡೆಸಲಾಗಿತ್ತು. ಕೃಷಿ ಮಾಹಿತಿ ಕೇಂದ್ರ ತೆರೆದು ರೈತರಿಗೆ ಬಿತ್ತನೆ ಬೀಜ, ಕೀಟ ಬಾಧೆ, ವಿವಿಧ ತಳಿಗಳು, ಮಣ್ಣಿನ ಫಲವತ್ತತೆ ಸೇರಿ ಹಲವಾರು ಉಪಯುಕ್ತ ಮಾಹಿತಿಗಳನ್ನು ನೀಡಲಾಗಿತ್ತು.

Advertisement

ರೈತರೊಂದಿಗೆ ಕಾಲ ಕಳೆದು ಕೃಷಿ ಸಂಬಂಧಿತ ಸವಾಲುಗಳನ್ನು ಸ್ವತಃ ಮನಗಂಡು ಅವುಗಳಿಗೆ ಸಂಭಾವ್ಯ ಪರಿಹಾರ ಕ್ರಮಗಳ ಬಗ್ಗೆ ಚಿಂತಿಸಲು ಶಿಬಿರ ನೆರವಾಗುತ್ತಿದೆ ಎಂದುವಿದ್ಯಾರ್ಥಿ ಪವನ್ ಕುಮಾರ್‌ ಹೇಳುತ್ತಾರೆ.

ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿ ಕಲಿತ ವಿಷಯಗಳನ್ನು ಶಿಬಿರದಲ್ಲಿ ಪ್ರಾಯೋಗಿಕವಾಗಿ ಅರ್ಥೈಸಿಕೊಳ್ಳುತ್ತಿದ್ದಾರೆ. ಕೃಷಿ ಸಂಬಂಧಿತ ಪ್ರಾಯೋಗಿಕ ಅನುಭವದ ಜೊತೆಜೊತೆಗೆ ತಾವು ಕಲಿತ ತಾಂತ್ರಿಕ ವಿಷಯಗಳನ್ನು ರೈತರಿಗೆ ತಿಳಿಸುತ್ತಿದ್ದಾರೆ ಎಂದು ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮುನಿಸ್ವಾಮಿ ಗೌಡ ಹೇಳುತ್ತಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶರಾವತಿ ಮುಳುಗಡೆ ಸಂತ್ರಸ್ತರ ಹಕ್ಕುಪತ್ರ ನೀಡಲು ಒತ್ತಾಯಿಸಿ ಧರಣಿ

ಅರಣ್ಯವಾಸಿಗಳ ಕೃಷಿ ಭೂಮಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ…

13 mins ago

ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು | ತಾಲೂಕು ಮಟ್ಟದ ಭಾಷಣ ಸ್ಪರ್ಧೆ

ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ, ರೋಟರಿ ಕ್ಲಬ್ ಪುತ್ತೂರು ಈಸ್ಟ್…

50 mins ago

ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |

ನ.2 ರಿಂದ 10ರ ವರೆಗೆ ಹವ್ಯಾಸಿ ಛಾಯಾಚಿತ್ರ ಗ್ರಾಹಕ ಅಭಿಷೇಕ.ಡಿ,ಪುಂಡಿತ್ತೂರು ಅವರ ಪಕ್ಷಿ,…

1 hour ago

24 ರಿಂದ ಹಾಸನಾಂಬ ಜಾತ್ರಾ ಮಹೋತ್ಸವ ಆರಂಭ

ಅ.24ರಿಂದ  ನ 3ರವರೆಗೆ  ಹಾಸನಾಂಬೆ ಜಾತ್ರೆ ನಡೆಯಲಿದೆ.

2 hours ago

ಎಮ್ಮೆ-ಹಸುಗಳು ಸಾವನ್ನಪ್ಪಿದರೆ ಪರಿಹಾರ |

ಎಮ್ಮೆ ಹಸುಗಳು ಸಾವನ್ನಪ್ಪಿದರೆ ಪರಿಹಾರವಾಗಿ 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಪಶುಸಂಗೋಪನಾ…

3 hours ago

ಕಾಫಿ ಬೆಳೆಗಾರರು ಸಂಕಷ್ಟದಲ್ಲಿದ್ದು, ಹರಾಜು ಪ್ರಕ್ರಿಯೆಯನ್ನು ಮುಂದೂಡಿ – ಕೋಟಾ ಶ್ರೀನಿವಾಸ ಪೂಜಾರಿ ಒತ್ತಾಯ |

ಕಾಫಿ ಬೆಳೆಗಾರರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಕೇಂದ್ರ ನಾಯಕರ ಜೊತೆ ಚರ್ಚಿಸಲಾಗುವುದು ಎಂದು…

3 hours ago