ವಿಶೇಷ ವರದಿಗಳು

ಗ್ರಾಮೀಣ ಕೃಷಿ ಕಾರ್ಯ ಅನುಭವ | ವಿದ್ಯಾರ್ಥಿಗಳಿಂದ ಹೊಸ ಪ್ರಯೋಗ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೃಷಿ ವಿಶ್ವವಿದ್ಯಾನಿಲಯಗಳಿಂದ ಹೊರಬರುವ ವಿದ್ಯಾರ್ಥಿಗಳು ರೈತರಿಗೆ ಅನುಕೂಲಕರವಾದ ಕೆಲಸ ಮಾಡಬೇಕು ಎನ್ನುವುದು ಎಲ್ಲರ ನಿರೀಕ್ಷೆ. ಆದರೆ ರೈತರು ಪ್ರಸಕ್ತ ಕಾಲಘಟ್ಟದಲ್ಲಿ ಅನುಭವಿಸುವ ಸಮಸ್ಯೆಗಳ ಬಗ್ಗೆ ಅರಿವು ಕೂಡಾ ಅಷ್ಟೇ ಅಗತ್ಯ ಇದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳೇ ಗ್ರಾಮೀಣ ಭಾಗಕ್ಕೆ ಆಗಮಿಸಿ ಸವಾಲುಗಳನ್ನು ಕಂಡುಕೊಂಡು ಅದಕ್ಕೆ ಪರಿಹಾರ ಹೇಳುವ ವಿನೂತನ ಕಾರ್ಯಕ್ರಮವನ್ನು ಹಾಸನದಲ್ಲಿ ವಿದ್ಯಾರ್ಥಿಗಳು ಆಯೋಜಿಸಿದ್ದರು.

Advertisement
Advertisement

ಹಾಸನದ ಕೃಷಿ ಮಹಾ ವಿಶ್ವವಿದ್ಯಾಲಯದ – ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಮೂರು ವರ್ಷದ ಕೃಷಿ ಪದವಿ ಮುಗಿಸಿದ ವಿದ್ಯಾರ್ಥಿಗಳು ಪಠ್ಯಕ್ರಮದ ಅನುಸಾರ ರೈತರೊಂದಿಗೆ ಬೆರೆತು ಕೃಷಿ ಸಂಬಂಧಿತ ಪ್ರಾಯೋಗಿಕ ಜ್ಞಾನ, ಅನುಭವ ಪಡೆದುಕೊಂಡರು.

ಮೂರು ವರ್ಷದ ಕೃಷಿ ಪದವಿ ಬಳಿಕ ಶೈಕ್ಷಣಿಕ ಕಲಿಕೆಯ ಭಾಗವಾಗಿ ಮೂರು ತಿಂಗಳ ಅವಧಿಗೆ ಈ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.ಪದವಿಯಲ್ಲಿ ಕಲಿತ ಕೃಷಿ ಆಧಾರಿತ ತಂತ್ರಜ್ಞಾನ ಹಾಗೂ ಮಾಹಿತಿಯನ್ನು ರೈತರಿಗೆ ತಿಳಿಸಿ, ಅವರಿಂದ ಹಿಮ್ಮಾಹಿತಿ ಪಡೆಯುವುದು ಕೂಡಾ ಇಲ್ಲಿ ಬಹುಮುಖ್ಯವಾಗಿದೆ. ಶಿಬಿರದಲ್ಲಿ ಕೃಷಿ ಕುರಿತ ಹಲವಾರು ಕಾರ್ಯಕ್ರಮಗಳನ್ನು ನಿತ್ಯವೂ ನಡೆಸಲಾಗಿತ್ತು. ಕೃಷಿ ಮಾಹಿತಿ ಕೇಂದ್ರ ತೆರೆದು ರೈತರಿಗೆ ಬಿತ್ತನೆ ಬೀಜ, ಕೀಟ ಬಾಧೆ, ವಿವಿಧ ತಳಿಗಳು, ಮಣ್ಣಿನ ಫಲವತ್ತತೆ ಸೇರಿ ಹಲವಾರು ಉಪಯುಕ್ತ ಮಾಹಿತಿಗಳನ್ನು ನೀಡಲಾಗಿತ್ತು.

ರೈತರೊಂದಿಗೆ ಕಾಲ ಕಳೆದು ಕೃಷಿ ಸಂಬಂಧಿತ ಸವಾಲುಗಳನ್ನು ಸ್ವತಃ ಮನಗಂಡು ಅವುಗಳಿಗೆ ಸಂಭಾವ್ಯ ಪರಿಹಾರ ಕ್ರಮಗಳ ಬಗ್ಗೆ ಚಿಂತಿಸಲು ಶಿಬಿರ ನೆರವಾಗುತ್ತಿದೆ ಎಂದುವಿದ್ಯಾರ್ಥಿ ಪವನ್ ಕುಮಾರ್‌ ಹೇಳುತ್ತಾರೆ.

Advertisement

ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿ ಕಲಿತ ವಿಷಯಗಳನ್ನು ಶಿಬಿರದಲ್ಲಿ ಪ್ರಾಯೋಗಿಕವಾಗಿ ಅರ್ಥೈಸಿಕೊಳ್ಳುತ್ತಿದ್ದಾರೆ. ಕೃಷಿ ಸಂಬಂಧಿತ ಪ್ರಾಯೋಗಿಕ ಅನುಭವದ ಜೊತೆಜೊತೆಗೆ ತಾವು ಕಲಿತ ತಾಂತ್ರಿಕ ವಿಷಯಗಳನ್ನು ರೈತರಿಗೆ ತಿಳಿಸುತ್ತಿದ್ದಾರೆ ಎಂದು ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮುನಿಸ್ವಾಮಿ ಗೌಡ ಹೇಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

10 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

1 day ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

1 day ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

1 day ago