Advertisement
ವಿಶೇಷ ವರದಿಗಳು

ಗ್ರಾಮೀಣ ಕೃಷಿ ಕಾರ್ಯ ಅನುಭವ | ವಿದ್ಯಾರ್ಥಿಗಳಿಂದ ಹೊಸ ಪ್ರಯೋಗ |

Share

ಕೃಷಿ ವಿಶ್ವವಿದ್ಯಾನಿಲಯಗಳಿಂದ ಹೊರಬರುವ ವಿದ್ಯಾರ್ಥಿಗಳು ರೈತರಿಗೆ ಅನುಕೂಲಕರವಾದ ಕೆಲಸ ಮಾಡಬೇಕು ಎನ್ನುವುದು ಎಲ್ಲರ ನಿರೀಕ್ಷೆ. ಆದರೆ ರೈತರು ಪ್ರಸಕ್ತ ಕಾಲಘಟ್ಟದಲ್ಲಿ ಅನುಭವಿಸುವ ಸಮಸ್ಯೆಗಳ ಬಗ್ಗೆ ಅರಿವು ಕೂಡಾ ಅಷ್ಟೇ ಅಗತ್ಯ ಇದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳೇ ಗ್ರಾಮೀಣ ಭಾಗಕ್ಕೆ ಆಗಮಿಸಿ ಸವಾಲುಗಳನ್ನು ಕಂಡುಕೊಂಡು ಅದಕ್ಕೆ ಪರಿಹಾರ ಹೇಳುವ ವಿನೂತನ ಕಾರ್ಯಕ್ರಮವನ್ನು ಹಾಸನದಲ್ಲಿ ವಿದ್ಯಾರ್ಥಿಗಳು ಆಯೋಜಿಸಿದ್ದರು.

ಹಾಸನದ ಕೃಷಿ ಮಹಾ ವಿಶ್ವವಿದ್ಯಾಲಯದ – ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಮೂರು ವರ್ಷದ ಕೃಷಿ ಪದವಿ ಮುಗಿಸಿದ ವಿದ್ಯಾರ್ಥಿಗಳು ಪಠ್ಯಕ್ರಮದ ಅನುಸಾರ ರೈತರೊಂದಿಗೆ ಬೆರೆತು ಕೃಷಿ ಸಂಬಂಧಿತ ಪ್ರಾಯೋಗಿಕ ಜ್ಞಾನ, ಅನುಭವ ಪಡೆದುಕೊಂಡರು.

ಮೂರು ವರ್ಷದ ಕೃಷಿ ಪದವಿ ಬಳಿಕ ಶೈಕ್ಷಣಿಕ ಕಲಿಕೆಯ ಭಾಗವಾಗಿ ಮೂರು ತಿಂಗಳ ಅವಧಿಗೆ ಈ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.ಪದವಿಯಲ್ಲಿ ಕಲಿತ ಕೃಷಿ ಆಧಾರಿತ ತಂತ್ರಜ್ಞಾನ ಹಾಗೂ ಮಾಹಿತಿಯನ್ನು ರೈತರಿಗೆ ತಿಳಿಸಿ, ಅವರಿಂದ ಹಿಮ್ಮಾಹಿತಿ ಪಡೆಯುವುದು ಕೂಡಾ ಇಲ್ಲಿ ಬಹುಮುಖ್ಯವಾಗಿದೆ. ಶಿಬಿರದಲ್ಲಿ ಕೃಷಿ ಕುರಿತ ಹಲವಾರು ಕಾರ್ಯಕ್ರಮಗಳನ್ನು ನಿತ್ಯವೂ ನಡೆಸಲಾಗಿತ್ತು. ಕೃಷಿ ಮಾಹಿತಿ ಕೇಂದ್ರ ತೆರೆದು ರೈತರಿಗೆ ಬಿತ್ತನೆ ಬೀಜ, ಕೀಟ ಬಾಧೆ, ವಿವಿಧ ತಳಿಗಳು, ಮಣ್ಣಿನ ಫಲವತ್ತತೆ ಸೇರಿ ಹಲವಾರು ಉಪಯುಕ್ತ ಮಾಹಿತಿಗಳನ್ನು ನೀಡಲಾಗಿತ್ತು.

ರೈತರೊಂದಿಗೆ ಕಾಲ ಕಳೆದು ಕೃಷಿ ಸಂಬಂಧಿತ ಸವಾಲುಗಳನ್ನು ಸ್ವತಃ ಮನಗಂಡು ಅವುಗಳಿಗೆ ಸಂಭಾವ್ಯ ಪರಿಹಾರ ಕ್ರಮಗಳ ಬಗ್ಗೆ ಚಿಂತಿಸಲು ಶಿಬಿರ ನೆರವಾಗುತ್ತಿದೆ ಎಂದುವಿದ್ಯಾರ್ಥಿ ಪವನ್ ಕುಮಾರ್‌ ಹೇಳುತ್ತಾರೆ.

ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿ ಕಲಿತ ವಿಷಯಗಳನ್ನು ಶಿಬಿರದಲ್ಲಿ ಪ್ರಾಯೋಗಿಕವಾಗಿ ಅರ್ಥೈಸಿಕೊಳ್ಳುತ್ತಿದ್ದಾರೆ. ಕೃಷಿ ಸಂಬಂಧಿತ ಪ್ರಾಯೋಗಿಕ ಅನುಭವದ ಜೊತೆಜೊತೆಗೆ ತಾವು ಕಲಿತ ತಾಂತ್ರಿಕ ವಿಷಯಗಳನ್ನು ರೈತರಿಗೆ ತಿಳಿಸುತ್ತಿದ್ದಾರೆ ಎಂದು ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮುನಿಸ್ವಾಮಿ ಗೌಡ ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

4 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

5 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

5 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

18 hours ago

ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ

ದೇಶದ ವಿವಿದೆಡೆ ಮಾರ್ಚ್‌ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ವಿಶೇಷವಾಗಿ ರಾಜ್ಕೋಟ್‌ನಲ್ಲಿ ಅಸಾಮಾನ್ಯ ಹವಾಮಾನದಿಂದ…

19 hours ago

ಕೃಷಿಕರಿಗೂ ಇದೆ ಹೋರ್ಮುಜ್‌ ಸಂಕಷ್ಟ…! ರಸಗೊಬ್ಬರ ಪೂರೈಕೆ ಆತಂಕ…? | ಪ್ರಧಾನಿ ನೇತೃತ್ವದಲ್ಲಿ ಸಭೆ

ಹೋರ್ಮುಜ್‌ ಜಲಸಂಧಿ ಸಂಕಷ್ಟದಿಂದ ಭಾರತಕ್ಕೆ ಗೊಬ್ಬರ ಮತ್ತು ಇಂಧನ ಪೂರೈಕೆ ಮೇಲೆ ಒತ್ತಡ…

1 day ago