Advertisement
ವಿಶೇಷ ವರದಿಗಳು

ಗ್ರಾಮೀಣ ಕೃಷಿ ಕಾರ್ಯ ಅನುಭವ | ವಿದ್ಯಾರ್ಥಿಗಳಿಂದ ಹೊಸ ಪ್ರಯೋಗ |

Share

ಕೃಷಿ ವಿಶ್ವವಿದ್ಯಾನಿಲಯಗಳಿಂದ ಹೊರಬರುವ ವಿದ್ಯಾರ್ಥಿಗಳು ರೈತರಿಗೆ ಅನುಕೂಲಕರವಾದ ಕೆಲಸ ಮಾಡಬೇಕು ಎನ್ನುವುದು ಎಲ್ಲರ ನಿರೀಕ್ಷೆ. ಆದರೆ ರೈತರು ಪ್ರಸಕ್ತ ಕಾಲಘಟ್ಟದಲ್ಲಿ ಅನುಭವಿಸುವ ಸಮಸ್ಯೆಗಳ ಬಗ್ಗೆ ಅರಿವು ಕೂಡಾ ಅಷ್ಟೇ ಅಗತ್ಯ ಇದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳೇ ಗ್ರಾಮೀಣ ಭಾಗಕ್ಕೆ ಆಗಮಿಸಿ ಸವಾಲುಗಳನ್ನು ಕಂಡುಕೊಂಡು ಅದಕ್ಕೆ ಪರಿಹಾರ ಹೇಳುವ ವಿನೂತನ ಕಾರ್ಯಕ್ರಮವನ್ನು ಹಾಸನದಲ್ಲಿ ವಿದ್ಯಾರ್ಥಿಗಳು ಆಯೋಜಿಸಿದ್ದರು.

Advertisement
Advertisement
Advertisement
Advertisement

ಹಾಸನದ ಕೃಷಿ ಮಹಾ ವಿಶ್ವವಿದ್ಯಾಲಯದ – ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಮೂರು ವರ್ಷದ ಕೃಷಿ ಪದವಿ ಮುಗಿಸಿದ ವಿದ್ಯಾರ್ಥಿಗಳು ಪಠ್ಯಕ್ರಮದ ಅನುಸಾರ ರೈತರೊಂದಿಗೆ ಬೆರೆತು ಕೃಷಿ ಸಂಬಂಧಿತ ಪ್ರಾಯೋಗಿಕ ಜ್ಞಾನ, ಅನುಭವ ಪಡೆದುಕೊಂಡರು.

Advertisement

ಮೂರು ವರ್ಷದ ಕೃಷಿ ಪದವಿ ಬಳಿಕ ಶೈಕ್ಷಣಿಕ ಕಲಿಕೆಯ ಭಾಗವಾಗಿ ಮೂರು ತಿಂಗಳ ಅವಧಿಗೆ ಈ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.ಪದವಿಯಲ್ಲಿ ಕಲಿತ ಕೃಷಿ ಆಧಾರಿತ ತಂತ್ರಜ್ಞಾನ ಹಾಗೂ ಮಾಹಿತಿಯನ್ನು ರೈತರಿಗೆ ತಿಳಿಸಿ, ಅವರಿಂದ ಹಿಮ್ಮಾಹಿತಿ ಪಡೆಯುವುದು ಕೂಡಾ ಇಲ್ಲಿ ಬಹುಮುಖ್ಯವಾಗಿದೆ. ಶಿಬಿರದಲ್ಲಿ ಕೃಷಿ ಕುರಿತ ಹಲವಾರು ಕಾರ್ಯಕ್ರಮಗಳನ್ನು ನಿತ್ಯವೂ ನಡೆಸಲಾಗಿತ್ತು. ಕೃಷಿ ಮಾಹಿತಿ ಕೇಂದ್ರ ತೆರೆದು ರೈತರಿಗೆ ಬಿತ್ತನೆ ಬೀಜ, ಕೀಟ ಬಾಧೆ, ವಿವಿಧ ತಳಿಗಳು, ಮಣ್ಣಿನ ಫಲವತ್ತತೆ ಸೇರಿ ಹಲವಾರು ಉಪಯುಕ್ತ ಮಾಹಿತಿಗಳನ್ನು ನೀಡಲಾಗಿತ್ತು.

Advertisement

ರೈತರೊಂದಿಗೆ ಕಾಲ ಕಳೆದು ಕೃಷಿ ಸಂಬಂಧಿತ ಸವಾಲುಗಳನ್ನು ಸ್ವತಃ ಮನಗಂಡು ಅವುಗಳಿಗೆ ಸಂಭಾವ್ಯ ಪರಿಹಾರ ಕ್ರಮಗಳ ಬಗ್ಗೆ ಚಿಂತಿಸಲು ಶಿಬಿರ ನೆರವಾಗುತ್ತಿದೆ ಎಂದುವಿದ್ಯಾರ್ಥಿ ಪವನ್ ಕುಮಾರ್‌ ಹೇಳುತ್ತಾರೆ.

ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿ ಕಲಿತ ವಿಷಯಗಳನ್ನು ಶಿಬಿರದಲ್ಲಿ ಪ್ರಾಯೋಗಿಕವಾಗಿ ಅರ್ಥೈಸಿಕೊಳ್ಳುತ್ತಿದ್ದಾರೆ. ಕೃಷಿ ಸಂಬಂಧಿತ ಪ್ರಾಯೋಗಿಕ ಅನುಭವದ ಜೊತೆಜೊತೆಗೆ ತಾವು ಕಲಿತ ತಾಂತ್ರಿಕ ವಿಷಯಗಳನ್ನು ರೈತರಿಗೆ ತಿಳಿಸುತ್ತಿದ್ದಾರೆ ಎಂದು ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮುನಿಸ್ವಾಮಿ ಗೌಡ ಹೇಳುತ್ತಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

13 hours ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

1 day ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

1 day ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

2 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

2 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

2 days ago