Advertisement
ವಿಶೇಷ ವರದಿಗಳು

ಗ್ರಾಮೀಣ ಕೃಷಿ ಕಾರ್ಯ ಅನುಭವ | ವಿದ್ಯಾರ್ಥಿಗಳಿಂದ ಹೊಸ ಪ್ರಯೋಗ |

Share

ಕೃಷಿ ವಿಶ್ವವಿದ್ಯಾನಿಲಯಗಳಿಂದ ಹೊರಬರುವ ವಿದ್ಯಾರ್ಥಿಗಳು ರೈತರಿಗೆ ಅನುಕೂಲಕರವಾದ ಕೆಲಸ ಮಾಡಬೇಕು ಎನ್ನುವುದು ಎಲ್ಲರ ನಿರೀಕ್ಷೆ. ಆದರೆ ರೈತರು ಪ್ರಸಕ್ತ ಕಾಲಘಟ್ಟದಲ್ಲಿ ಅನುಭವಿಸುವ ಸಮಸ್ಯೆಗಳ ಬಗ್ಗೆ ಅರಿವು ಕೂಡಾ ಅಷ್ಟೇ ಅಗತ್ಯ ಇದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳೇ ಗ್ರಾಮೀಣ ಭಾಗಕ್ಕೆ ಆಗಮಿಸಿ ಸವಾಲುಗಳನ್ನು ಕಂಡುಕೊಂಡು ಅದಕ್ಕೆ ಪರಿಹಾರ ಹೇಳುವ ವಿನೂತನ ಕಾರ್ಯಕ್ರಮವನ್ನು ಹಾಸನದಲ್ಲಿ ವಿದ್ಯಾರ್ಥಿಗಳು ಆಯೋಜಿಸಿದ್ದರು.

ಹಾಸನದ ಕೃಷಿ ಮಹಾ ವಿಶ್ವವಿದ್ಯಾಲಯದ – ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಮೂರು ವರ್ಷದ ಕೃಷಿ ಪದವಿ ಮುಗಿಸಿದ ವಿದ್ಯಾರ್ಥಿಗಳು ಪಠ್ಯಕ್ರಮದ ಅನುಸಾರ ರೈತರೊಂದಿಗೆ ಬೆರೆತು ಕೃಷಿ ಸಂಬಂಧಿತ ಪ್ರಾಯೋಗಿಕ ಜ್ಞಾನ, ಅನುಭವ ಪಡೆದುಕೊಂಡರು.

ಮೂರು ವರ್ಷದ ಕೃಷಿ ಪದವಿ ಬಳಿಕ ಶೈಕ್ಷಣಿಕ ಕಲಿಕೆಯ ಭಾಗವಾಗಿ ಮೂರು ತಿಂಗಳ ಅವಧಿಗೆ ಈ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.ಪದವಿಯಲ್ಲಿ ಕಲಿತ ಕೃಷಿ ಆಧಾರಿತ ತಂತ್ರಜ್ಞಾನ ಹಾಗೂ ಮಾಹಿತಿಯನ್ನು ರೈತರಿಗೆ ತಿಳಿಸಿ, ಅವರಿಂದ ಹಿಮ್ಮಾಹಿತಿ ಪಡೆಯುವುದು ಕೂಡಾ ಇಲ್ಲಿ ಬಹುಮುಖ್ಯವಾಗಿದೆ. ಶಿಬಿರದಲ್ಲಿ ಕೃಷಿ ಕುರಿತ ಹಲವಾರು ಕಾರ್ಯಕ್ರಮಗಳನ್ನು ನಿತ್ಯವೂ ನಡೆಸಲಾಗಿತ್ತು. ಕೃಷಿ ಮಾಹಿತಿ ಕೇಂದ್ರ ತೆರೆದು ರೈತರಿಗೆ ಬಿತ್ತನೆ ಬೀಜ, ಕೀಟ ಬಾಧೆ, ವಿವಿಧ ತಳಿಗಳು, ಮಣ್ಣಿನ ಫಲವತ್ತತೆ ಸೇರಿ ಹಲವಾರು ಉಪಯುಕ್ತ ಮಾಹಿತಿಗಳನ್ನು ನೀಡಲಾಗಿತ್ತು.

ರೈತರೊಂದಿಗೆ ಕಾಲ ಕಳೆದು ಕೃಷಿ ಸಂಬಂಧಿತ ಸವಾಲುಗಳನ್ನು ಸ್ವತಃ ಮನಗಂಡು ಅವುಗಳಿಗೆ ಸಂಭಾವ್ಯ ಪರಿಹಾರ ಕ್ರಮಗಳ ಬಗ್ಗೆ ಚಿಂತಿಸಲು ಶಿಬಿರ ನೆರವಾಗುತ್ತಿದೆ ಎಂದುವಿದ್ಯಾರ್ಥಿ ಪವನ್ ಕುಮಾರ್‌ ಹೇಳುತ್ತಾರೆ.

ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿ ಕಲಿತ ವಿಷಯಗಳನ್ನು ಶಿಬಿರದಲ್ಲಿ ಪ್ರಾಯೋಗಿಕವಾಗಿ ಅರ್ಥೈಸಿಕೊಳ್ಳುತ್ತಿದ್ದಾರೆ. ಕೃಷಿ ಸಂಬಂಧಿತ ಪ್ರಾಯೋಗಿಕ ಅನುಭವದ ಜೊತೆಜೊತೆಗೆ ತಾವು ಕಲಿತ ತಾಂತ್ರಿಕ ವಿಷಯಗಳನ್ನು ರೈತರಿಗೆ ತಿಳಿಸುತ್ತಿದ್ದಾರೆ ಎಂದು ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮುನಿಸ್ವಾಮಿ ಗೌಡ ಹೇಳುತ್ತಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

5 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

11 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

19 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

22 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago