Advertisement
ವಿಶೇಷ ವರದಿಗಳು

ಗ್ರಾಮೀಣ ಕೃಷಿ ಕಾರ್ಯ ಅನುಭವ | ವಿದ್ಯಾರ್ಥಿಗಳಿಂದ ಹೊಸ ಪ್ರಯೋಗ |

Share

ಕೃಷಿ ವಿಶ್ವವಿದ್ಯಾನಿಲಯಗಳಿಂದ ಹೊರಬರುವ ವಿದ್ಯಾರ್ಥಿಗಳು ರೈತರಿಗೆ ಅನುಕೂಲಕರವಾದ ಕೆಲಸ ಮಾಡಬೇಕು ಎನ್ನುವುದು ಎಲ್ಲರ ನಿರೀಕ್ಷೆ. ಆದರೆ ರೈತರು ಪ್ರಸಕ್ತ ಕಾಲಘಟ್ಟದಲ್ಲಿ ಅನುಭವಿಸುವ ಸಮಸ್ಯೆಗಳ ಬಗ್ಗೆ ಅರಿವು ಕೂಡಾ ಅಷ್ಟೇ ಅಗತ್ಯ ಇದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳೇ ಗ್ರಾಮೀಣ ಭಾಗಕ್ಕೆ ಆಗಮಿಸಿ ಸವಾಲುಗಳನ್ನು ಕಂಡುಕೊಂಡು ಅದಕ್ಕೆ ಪರಿಹಾರ ಹೇಳುವ ವಿನೂತನ ಕಾರ್ಯಕ್ರಮವನ್ನು ಹಾಸನದಲ್ಲಿ ವಿದ್ಯಾರ್ಥಿಗಳು ಆಯೋಜಿಸಿದ್ದರು.

ಹಾಸನದ ಕೃಷಿ ಮಹಾ ವಿಶ್ವವಿದ್ಯಾಲಯದ – ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಮೂರು ವರ್ಷದ ಕೃಷಿ ಪದವಿ ಮುಗಿಸಿದ ವಿದ್ಯಾರ್ಥಿಗಳು ಪಠ್ಯಕ್ರಮದ ಅನುಸಾರ ರೈತರೊಂದಿಗೆ ಬೆರೆತು ಕೃಷಿ ಸಂಬಂಧಿತ ಪ್ರಾಯೋಗಿಕ ಜ್ಞಾನ, ಅನುಭವ ಪಡೆದುಕೊಂಡರು.

ಮೂರು ವರ್ಷದ ಕೃಷಿ ಪದವಿ ಬಳಿಕ ಶೈಕ್ಷಣಿಕ ಕಲಿಕೆಯ ಭಾಗವಾಗಿ ಮೂರು ತಿಂಗಳ ಅವಧಿಗೆ ಈ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.ಪದವಿಯಲ್ಲಿ ಕಲಿತ ಕೃಷಿ ಆಧಾರಿತ ತಂತ್ರಜ್ಞಾನ ಹಾಗೂ ಮಾಹಿತಿಯನ್ನು ರೈತರಿಗೆ ತಿಳಿಸಿ, ಅವರಿಂದ ಹಿಮ್ಮಾಹಿತಿ ಪಡೆಯುವುದು ಕೂಡಾ ಇಲ್ಲಿ ಬಹುಮುಖ್ಯವಾಗಿದೆ. ಶಿಬಿರದಲ್ಲಿ ಕೃಷಿ ಕುರಿತ ಹಲವಾರು ಕಾರ್ಯಕ್ರಮಗಳನ್ನು ನಿತ್ಯವೂ ನಡೆಸಲಾಗಿತ್ತು. ಕೃಷಿ ಮಾಹಿತಿ ಕೇಂದ್ರ ತೆರೆದು ರೈತರಿಗೆ ಬಿತ್ತನೆ ಬೀಜ, ಕೀಟ ಬಾಧೆ, ವಿವಿಧ ತಳಿಗಳು, ಮಣ್ಣಿನ ಫಲವತ್ತತೆ ಸೇರಿ ಹಲವಾರು ಉಪಯುಕ್ತ ಮಾಹಿತಿಗಳನ್ನು ನೀಡಲಾಗಿತ್ತು.

ರೈತರೊಂದಿಗೆ ಕಾಲ ಕಳೆದು ಕೃಷಿ ಸಂಬಂಧಿತ ಸವಾಲುಗಳನ್ನು ಸ್ವತಃ ಮನಗಂಡು ಅವುಗಳಿಗೆ ಸಂಭಾವ್ಯ ಪರಿಹಾರ ಕ್ರಮಗಳ ಬಗ್ಗೆ ಚಿಂತಿಸಲು ಶಿಬಿರ ನೆರವಾಗುತ್ತಿದೆ ಎಂದುವಿದ್ಯಾರ್ಥಿ ಪವನ್ ಕುಮಾರ್‌ ಹೇಳುತ್ತಾರೆ.

ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿ ಕಲಿತ ವಿಷಯಗಳನ್ನು ಶಿಬಿರದಲ್ಲಿ ಪ್ರಾಯೋಗಿಕವಾಗಿ ಅರ್ಥೈಸಿಕೊಳ್ಳುತ್ತಿದ್ದಾರೆ. ಕೃಷಿ ಸಂಬಂಧಿತ ಪ್ರಾಯೋಗಿಕ ಅನುಭವದ ಜೊತೆಜೊತೆಗೆ ತಾವು ಕಲಿತ ತಾಂತ್ರಿಕ ವಿಷಯಗಳನ್ನು ರೈತರಿಗೆ ತಿಳಿಸುತ್ತಿದ್ದಾರೆ ಎಂದು ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮುನಿಸ್ವಾಮಿ ಗೌಡ ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

1 hour ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

2 hours ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

12 hours ago

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ

ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…

13 hours ago

ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ

ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…

20 hours ago