Advertisement
ವಿಶೇಷ ವರದಿಗಳು

ಗ್ರಾಮೀಣ ಕೃಷಿ ಕಾರ್ಯ ಅನುಭವ | ವಿದ್ಯಾರ್ಥಿಗಳಿಂದ ಹೊಸ ಪ್ರಯೋಗ |

Share

ಕೃಷಿ ವಿಶ್ವವಿದ್ಯಾನಿಲಯಗಳಿಂದ ಹೊರಬರುವ ವಿದ್ಯಾರ್ಥಿಗಳು ರೈತರಿಗೆ ಅನುಕೂಲಕರವಾದ ಕೆಲಸ ಮಾಡಬೇಕು ಎನ್ನುವುದು ಎಲ್ಲರ ನಿರೀಕ್ಷೆ. ಆದರೆ ರೈತರು ಪ್ರಸಕ್ತ ಕಾಲಘಟ್ಟದಲ್ಲಿ ಅನುಭವಿಸುವ ಸಮಸ್ಯೆಗಳ ಬಗ್ಗೆ ಅರಿವು ಕೂಡಾ ಅಷ್ಟೇ ಅಗತ್ಯ ಇದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳೇ ಗ್ರಾಮೀಣ ಭಾಗಕ್ಕೆ ಆಗಮಿಸಿ ಸವಾಲುಗಳನ್ನು ಕಂಡುಕೊಂಡು ಅದಕ್ಕೆ ಪರಿಹಾರ ಹೇಳುವ ವಿನೂತನ ಕಾರ್ಯಕ್ರಮವನ್ನು ಹಾಸನದಲ್ಲಿ ವಿದ್ಯಾರ್ಥಿಗಳು ಆಯೋಜಿಸಿದ್ದರು.

ಹಾಸನದ ಕೃಷಿ ಮಹಾ ವಿಶ್ವವಿದ್ಯಾಲಯದ – ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಮೂರು ವರ್ಷದ ಕೃಷಿ ಪದವಿ ಮುಗಿಸಿದ ವಿದ್ಯಾರ್ಥಿಗಳು ಪಠ್ಯಕ್ರಮದ ಅನುಸಾರ ರೈತರೊಂದಿಗೆ ಬೆರೆತು ಕೃಷಿ ಸಂಬಂಧಿತ ಪ್ರಾಯೋಗಿಕ ಜ್ಞಾನ, ಅನುಭವ ಪಡೆದುಕೊಂಡರು.

ಮೂರು ವರ್ಷದ ಕೃಷಿ ಪದವಿ ಬಳಿಕ ಶೈಕ್ಷಣಿಕ ಕಲಿಕೆಯ ಭಾಗವಾಗಿ ಮೂರು ತಿಂಗಳ ಅವಧಿಗೆ ಈ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.ಪದವಿಯಲ್ಲಿ ಕಲಿತ ಕೃಷಿ ಆಧಾರಿತ ತಂತ್ರಜ್ಞಾನ ಹಾಗೂ ಮಾಹಿತಿಯನ್ನು ರೈತರಿಗೆ ತಿಳಿಸಿ, ಅವರಿಂದ ಹಿಮ್ಮಾಹಿತಿ ಪಡೆಯುವುದು ಕೂಡಾ ಇಲ್ಲಿ ಬಹುಮುಖ್ಯವಾಗಿದೆ. ಶಿಬಿರದಲ್ಲಿ ಕೃಷಿ ಕುರಿತ ಹಲವಾರು ಕಾರ್ಯಕ್ರಮಗಳನ್ನು ನಿತ್ಯವೂ ನಡೆಸಲಾಗಿತ್ತು. ಕೃಷಿ ಮಾಹಿತಿ ಕೇಂದ್ರ ತೆರೆದು ರೈತರಿಗೆ ಬಿತ್ತನೆ ಬೀಜ, ಕೀಟ ಬಾಧೆ, ವಿವಿಧ ತಳಿಗಳು, ಮಣ್ಣಿನ ಫಲವತ್ತತೆ ಸೇರಿ ಹಲವಾರು ಉಪಯುಕ್ತ ಮಾಹಿತಿಗಳನ್ನು ನೀಡಲಾಗಿತ್ತು.

ರೈತರೊಂದಿಗೆ ಕಾಲ ಕಳೆದು ಕೃಷಿ ಸಂಬಂಧಿತ ಸವಾಲುಗಳನ್ನು ಸ್ವತಃ ಮನಗಂಡು ಅವುಗಳಿಗೆ ಸಂಭಾವ್ಯ ಪರಿಹಾರ ಕ್ರಮಗಳ ಬಗ್ಗೆ ಚಿಂತಿಸಲು ಶಿಬಿರ ನೆರವಾಗುತ್ತಿದೆ ಎಂದುವಿದ್ಯಾರ್ಥಿ ಪವನ್ ಕುಮಾರ್‌ ಹೇಳುತ್ತಾರೆ.

ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿ ಕಲಿತ ವಿಷಯಗಳನ್ನು ಶಿಬಿರದಲ್ಲಿ ಪ್ರಾಯೋಗಿಕವಾಗಿ ಅರ್ಥೈಸಿಕೊಳ್ಳುತ್ತಿದ್ದಾರೆ. ಕೃಷಿ ಸಂಬಂಧಿತ ಪ್ರಾಯೋಗಿಕ ಅನುಭವದ ಜೊತೆಜೊತೆಗೆ ತಾವು ಕಲಿತ ತಾಂತ್ರಿಕ ವಿಷಯಗಳನ್ನು ರೈತರಿಗೆ ತಿಳಿಸುತ್ತಿದ್ದಾರೆ ಎಂದು ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮುನಿಸ್ವಾಮಿ ಗೌಡ ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

16 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

23 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

23 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

23 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 day ago