ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವೆ ಸಲ್ಲಿಸುತ್ತಿರುವ ಆಂಬುಲೆನ್ಸ್ ಸೇವೆಗೆ ಆಕ್ಸಿಜನ್ ಸಿಲಿಂಡರ್ ಕೊಡುಗೆಯಾಗಿ ನೀಡಲಾಗಿದೆ.
ಕಳೆದ ವರ್ಷ ಸರಕಾರಿ ಆಂಬುಲೆನ್ಸ್ ಸೇವೆಯಲ್ಲಿ ಅನಾರೋಗ್ಯ ವ್ಯಕ್ತಿ ಒಬ್ಬರನ್ನು ಸಾಗಿಸುವಾಗ ಗುತ್ತಿಗಾರು ಸಮೀಪದಲ್ಲಿ ತಾಂತ್ರಿಕ ತೊಂದರೆಯಿಂದ ಆಕ್ಸಿಜನ್ ಕೊರತೆ ಉಂಟಾದಾಗ ತಕ್ಷಣವೇ ಸೇವೆ ನೀಡಿ ಸಂಕಷ್ಟದಲ್ಲಿ ಇದ್ದ ಅನಾರೋಗ್ಯ ದ ವ್ಯಕ್ತಿಯನ್ನು ರಕ್ಷಣೆ ಮಾಡಿತ್ತು. ಈ ವಿಷಯ ಗಮನಿಸಿ ತಕ್ಷಣವೇ ಟ್ರಸ್ಟ್ ಅನ್ನು ಸಂಪರ್ಕಿಸಿದ ಆನಂದ ಗೌಡ ಈಶ್ವರಮಂಗಲ ಅವರು ಟ್ರಸ್ಟ್ ಗೆ ತನ್ನ ಕೊಡುಗೆಯಾಗಿ ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ ಮಾಡಿದ್ದರು .ಇದೀಗ ಸುಳ್ಯಕ್ಕೆ ಭೇಟಿ ಮಾಡಿದ ಸಂದರ್ಭದಲ್ಲಿ ಆಕ್ಸಿಜನ್ ಸಿಲಿಂಡರ್ ಹಸ್ತಾಂತರದೊಂದಿಗೆ ಸಹಾಯಧನ ನೀಡಿ ಗ್ರಾಮೀಣ ಪ್ರದೇಶದ ಆಂಬುಲೆನ್ಸ್ ಸೇವೆಗೆ ಶುಭಾಶಯಗಳು ತಿಳಿಸಿದರು.
ಈ ಸಂದರ್ಭದಲ್ಲಿ ವನಿತಾ ಆನಂದ ಗೌಡ, ಸಾತ್ವಿಕ್ ಕನ್ನಡ್ಕ, ಪ್ರವೀಣ್ ಕಡೋಡಿ, ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ ಉಪಸ್ಥಿತರಿದ್ದರು.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…