ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವೆ ಸಲ್ಲಿಸುತ್ತಿರುವ ಆಂಬುಲೆನ್ಸ್ ಸೇವೆಗೆ ಆಕ್ಸಿಜನ್ ಸಿಲಿಂಡರ್ ಕೊಡುಗೆಯಾಗಿ ನೀಡಲಾಗಿದೆ.
ಕಳೆದ ವರ್ಷ ಸರಕಾರಿ ಆಂಬುಲೆನ್ಸ್ ಸೇವೆಯಲ್ಲಿ ಅನಾರೋಗ್ಯ ವ್ಯಕ್ತಿ ಒಬ್ಬರನ್ನು ಸಾಗಿಸುವಾಗ ಗುತ್ತಿಗಾರು ಸಮೀಪದಲ್ಲಿ ತಾಂತ್ರಿಕ ತೊಂದರೆಯಿಂದ ಆಕ್ಸಿಜನ್ ಕೊರತೆ ಉಂಟಾದಾಗ ತಕ್ಷಣವೇ ಸೇವೆ ನೀಡಿ ಸಂಕಷ್ಟದಲ್ಲಿ ಇದ್ದ ಅನಾರೋಗ್ಯ ದ ವ್ಯಕ್ತಿಯನ್ನು ರಕ್ಷಣೆ ಮಾಡಿತ್ತು. ಈ ವಿಷಯ ಗಮನಿಸಿ ತಕ್ಷಣವೇ ಟ್ರಸ್ಟ್ ಅನ್ನು ಸಂಪರ್ಕಿಸಿದ ಆನಂದ ಗೌಡ ಈಶ್ವರಮಂಗಲ ಅವರು ಟ್ರಸ್ಟ್ ಗೆ ತನ್ನ ಕೊಡುಗೆಯಾಗಿ ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ ಮಾಡಿದ್ದರು .ಇದೀಗ ಸುಳ್ಯಕ್ಕೆ ಭೇಟಿ ಮಾಡಿದ ಸಂದರ್ಭದಲ್ಲಿ ಆಕ್ಸಿಜನ್ ಸಿಲಿಂಡರ್ ಹಸ್ತಾಂತರದೊಂದಿಗೆ ಸಹಾಯಧನ ನೀಡಿ ಗ್ರಾಮೀಣ ಪ್ರದೇಶದ ಆಂಬುಲೆನ್ಸ್ ಸೇವೆಗೆ ಶುಭಾಶಯಗಳು ತಿಳಿಸಿದರು.
ಈ ಸಂದರ್ಭದಲ್ಲಿ ವನಿತಾ ಆನಂದ ಗೌಡ, ಸಾತ್ವಿಕ್ ಕನ್ನಡ್ಕ, ಪ್ರವೀಣ್ ಕಡೋಡಿ, ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ ಉಪಸ್ಥಿತರಿದ್ದರು.
ರಾಜ್ಯದ ಕರಾವಳಿಯಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ,…
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…