ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವೆ ಸಲ್ಲಿಸುತ್ತಿರುವ ಆಂಬುಲೆನ್ಸ್ ಸೇವೆಗೆ ಆಕ್ಸಿಜನ್ ಸಿಲಿಂಡರ್ ಕೊಡುಗೆಯಾಗಿ ನೀಡಲಾಗಿದೆ.
ಕಳೆದ ವರ್ಷ ಸರಕಾರಿ ಆಂಬುಲೆನ್ಸ್ ಸೇವೆಯಲ್ಲಿ ಅನಾರೋಗ್ಯ ವ್ಯಕ್ತಿ ಒಬ್ಬರನ್ನು ಸಾಗಿಸುವಾಗ ಗುತ್ತಿಗಾರು ಸಮೀಪದಲ್ಲಿ ತಾಂತ್ರಿಕ ತೊಂದರೆಯಿಂದ ಆಕ್ಸಿಜನ್ ಕೊರತೆ ಉಂಟಾದಾಗ ತಕ್ಷಣವೇ ಸೇವೆ ನೀಡಿ ಸಂಕಷ್ಟದಲ್ಲಿ ಇದ್ದ ಅನಾರೋಗ್ಯ ದ ವ್ಯಕ್ತಿಯನ್ನು ರಕ್ಷಣೆ ಮಾಡಿತ್ತು. ಈ ವಿಷಯ ಗಮನಿಸಿ ತಕ್ಷಣವೇ ಟ್ರಸ್ಟ್ ಅನ್ನು ಸಂಪರ್ಕಿಸಿದ ಆನಂದ ಗೌಡ ಈಶ್ವರಮಂಗಲ ಅವರು ಟ್ರಸ್ಟ್ ಗೆ ತನ್ನ ಕೊಡುಗೆಯಾಗಿ ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ ಮಾಡಿದ್ದರು .ಇದೀಗ ಸುಳ್ಯಕ್ಕೆ ಭೇಟಿ ಮಾಡಿದ ಸಂದರ್ಭದಲ್ಲಿ ಆಕ್ಸಿಜನ್ ಸಿಲಿಂಡರ್ ಹಸ್ತಾಂತರದೊಂದಿಗೆ ಸಹಾಯಧನ ನೀಡಿ ಗ್ರಾಮೀಣ ಪ್ರದೇಶದ ಆಂಬುಲೆನ್ಸ್ ಸೇವೆಗೆ ಶುಭಾಶಯಗಳು ತಿಳಿಸಿದರು.
ಈ ಸಂದರ್ಭದಲ್ಲಿ ವನಿತಾ ಆನಂದ ಗೌಡ, ಸಾತ್ವಿಕ್ ಕನ್ನಡ್ಕ, ಪ್ರವೀಣ್ ಕಡೋಡಿ, ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ ಉಪಸ್ಥಿತರಿದ್ದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…