ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವೆ ಸಲ್ಲಿಸುತ್ತಿರುವ ಆಂಬುಲೆನ್ಸ್ ಸೇವೆಗೆ ಆಕ್ಸಿಜನ್ ಸಿಲಿಂಡರ್ ಕೊಡುಗೆಯಾಗಿ ನೀಡಲಾಗಿದೆ.
ಕಳೆದ ವರ್ಷ ಸರಕಾರಿ ಆಂಬುಲೆನ್ಸ್ ಸೇವೆಯಲ್ಲಿ ಅನಾರೋಗ್ಯ ವ್ಯಕ್ತಿ ಒಬ್ಬರನ್ನು ಸಾಗಿಸುವಾಗ ಗುತ್ತಿಗಾರು ಸಮೀಪದಲ್ಲಿ ತಾಂತ್ರಿಕ ತೊಂದರೆಯಿಂದ ಆಕ್ಸಿಜನ್ ಕೊರತೆ ಉಂಟಾದಾಗ ತಕ್ಷಣವೇ ಸೇವೆ ನೀಡಿ ಸಂಕಷ್ಟದಲ್ಲಿ ಇದ್ದ ಅನಾರೋಗ್ಯ ದ ವ್ಯಕ್ತಿಯನ್ನು ರಕ್ಷಣೆ ಮಾಡಿತ್ತು. ಈ ವಿಷಯ ಗಮನಿಸಿ ತಕ್ಷಣವೇ ಟ್ರಸ್ಟ್ ಅನ್ನು ಸಂಪರ್ಕಿಸಿದ ಆನಂದ ಗೌಡ ಈಶ್ವರಮಂಗಲ ಅವರು ಟ್ರಸ್ಟ್ ಗೆ ತನ್ನ ಕೊಡುಗೆಯಾಗಿ ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ ಮಾಡಿದ್ದರು .ಇದೀಗ ಸುಳ್ಯಕ್ಕೆ ಭೇಟಿ ಮಾಡಿದ ಸಂದರ್ಭದಲ್ಲಿ ಆಕ್ಸಿಜನ್ ಸಿಲಿಂಡರ್ ಹಸ್ತಾಂತರದೊಂದಿಗೆ ಸಹಾಯಧನ ನೀಡಿ ಗ್ರಾಮೀಣ ಪ್ರದೇಶದ ಆಂಬುಲೆನ್ಸ್ ಸೇವೆಗೆ ಶುಭಾಶಯಗಳು ತಿಳಿಸಿದರು.
ಈ ಸಂದರ್ಭದಲ್ಲಿ ವನಿತಾ ಆನಂದ ಗೌಡ, ಸಾತ್ವಿಕ್ ಕನ್ನಡ್ಕ, ಪ್ರವೀಣ್ ಕಡೋಡಿ, ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ ಉಪಸ್ಥಿತರಿದ್ದರು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…