ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವೆ ಸಲ್ಲಿಸುತ್ತಿರುವ ಆಂಬುಲೆನ್ಸ್ ಸೇವೆಗೆ ಆಕ್ಸಿಜನ್ ಸಿಲಿಂಡರ್ ಕೊಡುಗೆಯಾಗಿ ನೀಡಲಾಗಿದೆ.
ಕಳೆದ ವರ್ಷ ಸರಕಾರಿ ಆಂಬುಲೆನ್ಸ್ ಸೇವೆಯಲ್ಲಿ ಅನಾರೋಗ್ಯ ವ್ಯಕ್ತಿ ಒಬ್ಬರನ್ನು ಸಾಗಿಸುವಾಗ ಗುತ್ತಿಗಾರು ಸಮೀಪದಲ್ಲಿ ತಾಂತ್ರಿಕ ತೊಂದರೆಯಿಂದ ಆಕ್ಸಿಜನ್ ಕೊರತೆ ಉಂಟಾದಾಗ ತಕ್ಷಣವೇ ಸೇವೆ ನೀಡಿ ಸಂಕಷ್ಟದಲ್ಲಿ ಇದ್ದ ಅನಾರೋಗ್ಯ ದ ವ್ಯಕ್ತಿಯನ್ನು ರಕ್ಷಣೆ ಮಾಡಿತ್ತು. ಈ ವಿಷಯ ಗಮನಿಸಿ ತಕ್ಷಣವೇ ಟ್ರಸ್ಟ್ ಅನ್ನು ಸಂಪರ್ಕಿಸಿದ ಆನಂದ ಗೌಡ ಈಶ್ವರಮಂಗಲ ಅವರು ಟ್ರಸ್ಟ್ ಗೆ ತನ್ನ ಕೊಡುಗೆಯಾಗಿ ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ ಮಾಡಿದ್ದರು .ಇದೀಗ ಸುಳ್ಯಕ್ಕೆ ಭೇಟಿ ಮಾಡಿದ ಸಂದರ್ಭದಲ್ಲಿ ಆಕ್ಸಿಜನ್ ಸಿಲಿಂಡರ್ ಹಸ್ತಾಂತರದೊಂದಿಗೆ ಸಹಾಯಧನ ನೀಡಿ ಗ್ರಾಮೀಣ ಪ್ರದೇಶದ ಆಂಬುಲೆನ್ಸ್ ಸೇವೆಗೆ ಶುಭಾಶಯಗಳು ತಿಳಿಸಿದರು.
ಈ ಸಂದರ್ಭದಲ್ಲಿ ವನಿತಾ ಆನಂದ ಗೌಡ, ಸಾತ್ವಿಕ್ ಕನ್ನಡ್ಕ, ಪ್ರವೀಣ್ ಕಡೋಡಿ, ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ ಉಪಸ್ಥಿತರಿದ್ದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…