ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವೆ ಸಲ್ಲಿಸುತ್ತಿರುವ ಆಂಬುಲೆನ್ಸ್ ಸೇವೆಗೆ ಆಕ್ಸಿಜನ್ ಸಿಲಿಂಡರ್ ಕೊಡುಗೆಯಾಗಿ ನೀಡಲಾಗಿದೆ.
ಕಳೆದ ವರ್ಷ ಸರಕಾರಿ ಆಂಬುಲೆನ್ಸ್ ಸೇವೆಯಲ್ಲಿ ಅನಾರೋಗ್ಯ ವ್ಯಕ್ತಿ ಒಬ್ಬರನ್ನು ಸಾಗಿಸುವಾಗ ಗುತ್ತಿಗಾರು ಸಮೀಪದಲ್ಲಿ ತಾಂತ್ರಿಕ ತೊಂದರೆಯಿಂದ ಆಕ್ಸಿಜನ್ ಕೊರತೆ ಉಂಟಾದಾಗ ತಕ್ಷಣವೇ ಸೇವೆ ನೀಡಿ ಸಂಕಷ್ಟದಲ್ಲಿ ಇದ್ದ ಅನಾರೋಗ್ಯ ದ ವ್ಯಕ್ತಿಯನ್ನು ರಕ್ಷಣೆ ಮಾಡಿತ್ತು. ಈ ವಿಷಯ ಗಮನಿಸಿ ತಕ್ಷಣವೇ ಟ್ರಸ್ಟ್ ಅನ್ನು ಸಂಪರ್ಕಿಸಿದ ಆನಂದ ಗೌಡ ಈಶ್ವರಮಂಗಲ ಅವರು ಟ್ರಸ್ಟ್ ಗೆ ತನ್ನ ಕೊಡುಗೆಯಾಗಿ ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ ಮಾಡಿದ್ದರು .ಇದೀಗ ಸುಳ್ಯಕ್ಕೆ ಭೇಟಿ ಮಾಡಿದ ಸಂದರ್ಭದಲ್ಲಿ ಆಕ್ಸಿಜನ್ ಸಿಲಿಂಡರ್ ಹಸ್ತಾಂತರದೊಂದಿಗೆ ಸಹಾಯಧನ ನೀಡಿ ಗ್ರಾಮೀಣ ಪ್ರದೇಶದ ಆಂಬುಲೆನ್ಸ್ ಸೇವೆಗೆ ಶುಭಾಶಯಗಳು ತಿಳಿಸಿದರು.
ಈ ಸಂದರ್ಭದಲ್ಲಿ ವನಿತಾ ಆನಂದ ಗೌಡ, ಸಾತ್ವಿಕ್ ಕನ್ನಡ್ಕ, ಪ್ರವೀಣ್ ಕಡೋಡಿ, ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ ಉಪಸ್ಥಿತರಿದ್ದರು.
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…
ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…
ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್ ಜಾಮ್ಗೆ ವಿಶೇಷ ಸಂಚಾರ ನಿರ್ವಹಣಾ…
ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…