MIRROR FOCUS

ಸಹಕಾರಿ ಸಂಘದಿಂದ ಗ್ರಾಮೀಣ ಭಾಗದ ಪ್ರತಿಭೆಗಳಿಗೆ “ಉತ್ಕರ್ಷ ಸಹಕಾರ ಟ್ರೋಫಿ” | ಮಾದರಿಯಾದ ಪಂಜದ ಸಹಕಾರಿ ಸಂಘ |

Share

ಗ್ರಾಮೀಣ ಭಾಗದ ಪ್ರತಿಭೆಗಳು ಅವಕಾಶಗಳಿಂದ ವಂಚಿತರಾಗುವುದು ಹೆಚ್ಚು. ಅಂತಹದ್ದರಲ್ಲಿ ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟವನ್ನು ಏರ್ಪಡಿಸಿ ಮಾದರಿಯಾಗಿದೆ ಪಂಜದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ. ಜಿಲ್ಲಾ ಮಟ್ಟದ ಚೆಸ್‌ ಪಂದ್ಯಾಟ ಹಾಗೂ ಕೇರಂ ಪಂದ್ಯಾಟವನ್ನು ಏರ್ಪಡಿಸುವ ಮೂಲಕ “ಸಹಕಾರ” ತತ್ತ್ವದ ಜೊತೆಗೆ ಪ್ರತಿಭೆಗಳಿಗೂ ಪ್ರೋತ್ಸಾಹ ನೀಡಿದೆ.…..ಮುಂದೆ ಓದಿ….

Advertisement

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಸಿಬಂದಿ ವರ್ಗದವರ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕಿರಿಯ ಬಾಲಕ ಮತ್ತು ಬಾಲಕಿಯರ ಹಾಗೂ ಮುಕ್ತ ರಾಪಿಡ್‌ ಚೆಸ್‌ ಪಂದ್ಯಾಟ ಮತ್ತು ಮುಕ್ತ ಡಬಲ್ಸ್‌ ಕೇರಂ ಪಂದ್ಯಾಟ ಆಯೋಜನೆ ಮಾಡಿದೆ. ಈ ಸಹಕಾರಿ ಸಂಘದ ಸಿಬಂದಿ ವರ್ಗದವರ ಸಹಕಾರ ಹಾಗೂ ಜಂಟಿ ಆಶ್ರಯವೂ ಇದೆ. ಕಳೆದ 6 ವರ್ಷಗಳಿಂದ ಕ್ರೀಡಾಕೂಟವನ್ನು ಏರ್ಪಾಡು ಮಾಡುತ್ತಿದ್ದ ಈ ಸಹಕಾರ ಸಂಘ ಹಾಗೂ ಇದರ ಸಿಬಂದಿಗಳು ಇದುವರೆಗೂ ಶಟಲ್‌ ಪಂದ್ಯಾಟ ನಡೆಸುತ್ತಿದ್ದರು. ಈ ಬಾರಿ ಮೊದಲ ಬಾರಿಗೆ ಚೆಸ್‌ ಹಾಗೂ ಕೇರಂ ಪಂದ್ಯಾಟ ಆಯೋಜನೆ ಮಾಡಿದೆ. ಗ್ರಾಮೀಣ ಭಾಗದಲ್ಲಿ ಸಹಕಾರಿ ಸಂಘವೊಂದು ಜಿಲ್ಲಾ ಮಟ್ಟದ ಕ್ರೀಡಾಕೂಟ ಆಯೋಜನೆ ಮಾಡಿರುವುದು ಸಣ್ಣ ಕೆಲಸವೇನೆಲ್ಲ. ಗ್ರಾಮೀಣ ಭಾಗದಲ್ಲಿ ಹಲವಾರು ಪ್ರತಿಭೆಗಳು ಇದ್ದಾರೆ. ಆದರೆ ಅವಕಾಶಗಳು ಲಭಿಸಿದರೆ ಮುಂದೆ ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದವರೆಗೂ ಸಾಧನೆ ತೋರಲು ಸಾಧ್ಯವಿದೆ.  ಈ ನೆಲೆಯಲ್ಲಿ ಸಹಕಾರಿ ಸಂಘವೊಂದು ಕಳೆದ 6 ವರ್ಷಗಳಿಂದಲೂ ಹಮ್ಮಿಕೊಂಡು ಬರುತ್ತಿರುವ ಕಾರ್ಯವನ್ನು ಮೆಚ್ಚಬೇಕಿದೆ. ಸಹಕಾರಿ ಸಂಘ, ಸಂಘದ ಸದಸ್ಯರು,  ಸಿಬಂದಿಗಳು ಹಾಗೂ ಕ್ರೀಡಾಭಿಮಾನಿಗಳಿಂದ ಸಂಗ್ರಹ ಮಾಡುತ್ತಾರೆ.…..ಮುಂದೆ ಓದಿ….

ಹಲವು ಕಡೆ ಆಡಳಿತ ಮಂಡಳಿ ಹಾಗೂ ಸಂಸ್ಥೆಗಳ ಸಿಬಂದಿಗಳ ನಡುವೆ ಅಂತರ ಇರುವುದು ಕಾಣುತ್ತದೆ.ಆದರೆ ಪಂಜದ ಸಹಕಾರಿ ಸಂಘದಲ್ಲಿ ಆಡಳಿತ ಮಂಡಳಿ ಹಾಗೂ ಸಿಬಂದಿಗಳು ಜೊತೆಯಾಗಿ ಕಾರ್ಯಕ್ರಮ ಆಯೋಜನೆ ಮಾಡುತ್ತಿವೆ. ಅಂದರೆ ಕ್ರೀಡಾ ಕೂಟದ ಆಯೋಜನೆಯ ವೆಚ್ಚಗಳಲ್ಲಿ ಕೂಡಾ ಸಿಬಂದಿಗಳು ಕೂಡಾ ಭಾಗಿಯಾಗುವುದು ವಿಶೇಷ. ಸಿಬಂದಿಗಳಿಗೆ ಯಾವ ಲಾಭವೂ ಇಲ್ಲಿ ಇಲ್ಲದಿದ್ದರೂ ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಅವಕಾಶ ನೀಡಲು ತಾವು ದುಡಿಯುವ ಸಹಕಾರಿ ಸಂಘದ ಹೆಸರಿನಲ್ಲಿ ಮಾಡುವ ಸೇವೆ ಇನ್ನೊಂದು ಮಾದರಿ ಕಾರ್ಯ.

ಒಂದು ಕಾಲದಲ್ಲಿ ಈ ಸಂಘವು ತೀರಾ ಸಂಕಷ್ಟದ ಸ್ಥಿತಿಯಲ್ಲಿತ್ತು. ಆ ಬಳಿಕ ಜನರನ್ನು ಒಂದಾಗಿಸಿಕೊಂಡು, ಪರಸ್ಪರ ಸಹಕಾರ ಚಿಂತನೆಯಲ್ಲಿ ಮುಂದುವರಿದು, ಎಲ್ಲಾ ರೀತಿಯ ಸೇವೆಯೂ ಸಂಸ್ಥೆಯಲ್ಲಿ ದೊರೆಯುವಂತೆ ಮಾಡಲಾಗಿತ್ತು. ಇದೀಗ ಉತ್ತಮ ಸಹಕಾರಿ ಸಂಘವಾಗಿ ಮುನ್ನಡೆಯುತ್ತಿದೆ.

ಚೆಸ್‌ನಂತಹ ಕ್ರೀಡೆಯಲ್ಲಿ ಗ್ರಾಮೀಣ ಭಾಗದಲ್ಲಿ ಅನೇಕ ಆಟಗಾರರು ಇದ್ದಾರೆ. ಅಂತಹವರಿಗೆ ಅವಕಾಶ ನೀಡಲು ಸಹಕಾರಿ ಸಂಘಗಳು ಹಾಗೂ ಇತರ ಸಂಘಗಗಳು ವೇದಿಕೆ ಸೃಷ್ಟಿ ಮಾಡುವುದು ಉತ್ತಮವಾದ ಕಾರ್ಯವಾಗಿದೆ ಎನ್ನುತ್ತಾರೆ ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಅಧ್ಯಕ್ಷ, ರಾಜ್ಯ ಉಪಾಧ್ಯಕ್ಷ ರಮೇಶ್‌ ಕೋಟೆ.

ಸಹಕಾರಿ ಸಂಘದಲ್ಲಿ ಆಡಳಿತ ಮಂಡಳಿ ಹಾಗೂ ಸಿಬಂದಿಗಳು ಎನ್ನುವ ಬದಲಾಗಿ ನಾವೊಂದು ಕುಟುಂಬದ ರೀತಿಯಲ್ಲಿ ಕೆಲಸ ಮಾಡುತ್ತೇವೆ. ಹೀಗಾಗಿಯೇ ಇಂತಹ ಕೆಲಸಗಳು ನಡೆಯಲು ಸಾಧ್ಯವಾಗಿದೆ. ಸಿಬಂದಿಗಳು ಈ ಕ್ರೀಡಾಕೂಟದ ಆಯೋಜನೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುತ್ತಾರೆ. ಸಂಘದ ಸದಸ್ಯರು ಇಂತಹ ಚಟುವಟಿಕಗೆ ಪ್ರೋತ್ಸಾಹ ನೀಡುತ್ತಾರೆ ಎಂದು ಹೇಳುತ್ತಾರೆ ಸಂಘದ ಅಧ್ಯಕ್ಷ ಗಣೇಶ್‌ ಪೈ ಹೇಳುತ್ತಾರೆ.
ಗಣೇಶ್‌ ಪೈ
ಕಳೆದ  6 ವರ್ಷಗಳಿಂದ ಸಹಕಾರಿ ಸಂಘದ ಸಹಕಾರದೊಂದಿಗೆ ಕ್ರೀಡಾ ಕೂಟ ನಡೆಯುತ್ತಿದೆ. ಈ ಬಾರಿ ಚೆಸ್‌ ಸ್ಫರ್ಧೆ ಆಯೋಜನೆ ಮಾಡಲಾಗಿದೆ. ನಮ್ಮೂರಿನ ಪ್ರತಿಭೆಗಳಿಗೂ ಅವಕಾಶ ಸಿಗಬೇಕು ಎನ್ನುವುದೇ ನಮ್ಮ ಉದ್ದೇಶ ಎನ್ನುತ್ತಾರೆ ಸಂಘದ ನಿರ್ದೇಶಕ ಚಂದ್ರಶೇಖರ ಶಾಸ್ತ್ರಿ.
ಚಂದ್ರಶೇಖರ ಶಾಸ್ತ್ರಿ
ಸಂಘದ ಕೆಲಸ, ಸಂಘದ ಬೆಳವಣಿಗೆ ಜೊತೆಗೆ ನಮ್ಮ ಆಸಕ್ತಿಗಳನ್ನು ಬೆಳೆಸುವುದು ಹಾಗೂ ನಮ್ಮೂರಿನ ಪ್ರತಿಭೆಗಳನ್ನು ಗುರುತಿಸಿ ಬೆಳೆಸಲು ಇಂತಹ ಕ್ರೀಡಾಕೂಟದ ಆಯೋಜನೆಯನ್ನು ಮಾಡಲಾಗುತ್ತದೆ ಎನ್ನುತ್ತಾರೆ ಸಂಘದ ಸಿಬಂದಿ, ಕ್ರೀಡಾಕೂಟದ ಆಯೋಜನೆಯ ನೇತೃತ್ವ ವಹಿಸಿದ ಕೇಶವ ಕೆರೆಮೂಲೆ ಹೇಳುತ್ತಾರೆ.
ಕೇಶವ ಕೆರೆಮೂಲೆ

Chess and carrom competitions are organized in rural areas as a model activity under the joint auspices of the Panja Primary Agricultural Cooperative Society and the Staff . This initiative provides an opportunity for showcasing rural talent.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…

8 hours ago

ಅಡುಗೆ ಮನೆ ‘ಬೇಯಿಸುವ ಕೋಣೆ’ಯಲ್ಲ!

ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…

8 hours ago

2025ರಲ್ಲಿ ಶನಿ ತಮ್ಮ ನಕ್ಷತ್ರ ಅಥವಾ ರಾಶಿಯಲ್ಲಿ ಅಧೋಗತಿಯ ಚಲನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |

ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…

18 hours ago

ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…

19 hours ago

ತಾಂತ್ರಿಕ ಸಮಸ್ಯೆ | ದೇಶಾದ್ಯಂತ ಯುಪಿಐ, ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ

ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…

19 hours ago