ಕೇಂದ್ರ ಸರ್ಕಾರ 2018ರಲ್ಲಿ ಜಾರಿಗೊಳಿಸಿದ ರಾಷ್ಟ್ರೀಯ ಗ್ರಾಮ ಸ್ವರಾಜ್ಯ ಅಭಿಯಾನ (ಆರ್ಜಿಎಸ್ಎ)ದ ಪರಿಷ್ಕೃತ ಯೋಜನೆಗೆ ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಮಿತಿ ಸಭೆಯಲ್ಲಿ 5,911 ಕೋಟಿ ರೂ. ವೆಚ್ಚದ ಪರಿಷ್ಕೃತ ಯೋಜನೆಗೆ ಸಮ್ಮತಿ ಸೂಚಿಸಲಾಗಿದೆ. ಈ ಪೈಕಿ 3,700 ಕೋಟಿ ರೂ. ಕೇಂದ್ರ ಸರ್ಕಾರ, 2,211 ಕೋಟಿ ರೂ. ಮೊತ್ತವನ್ನು ರಾಜ್ಯ ಸರ್ಕಾರಗಳು ನೀಡಲಿವೆ.
ಪರಿಷ್ಕೃತ ಯೋಜನೆಯ ಅನ್ವಯ ಏ.1 ರಿಂದ 2026 ರ ಮಾ.31 ರ ವರೆಗೆ ದೇಶದ 2.78 ಲಕ್ಷ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿರುವ 60 ಲಕ್ಷ ಚುನಾಯಿತ ಪ್ರತಿನಿಧಿಗಳು, ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಇದರಿಂದ ನೆರವಾಗಲಿದೆ.
ಅಭಿವೃದ್ಧಿ ಗುರಿಯನ್ನೇ ಪ್ರಮುಖವಾಗಿ ಇರಿಸಿಕೊಳ್ಳಲಾಗಿರುವ ಬಡತನ ಮುಕ್ತ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸುಧಾರಿತ ಜೀವನ ಕ್ರಮ, ಆರೋಗ್ಯಯುಕ್ತ ಗ್ರಾಮ, ಮಕ್ಕಳ ಸ್ನೇಹಿ ವಾತಾವರಣ ಇರುವ, ಉತ್ತಮ ರೀತಿಯಲ್ಲಿ ನೀರು ಪೂರೈಕೆ, ನೈರ್ಮಲೀಕರಣ ಮತ್ತು ಹಸಿರುಯುಕ್ತ, ಮೂಲಸೌಕರ್ಯಗಳಲ್ಲಿ ಸ್ವಾವಲಂಬನೆ, ಸಾಮಾಜಿಕವಾಗಿ ಕೂಡ ಭದ್ರತೆ ಹೊಂದಿರುವ, ಉತ್ತಮ ಆಡಳಿತ ವ್ಯವಸ್ಥೆ ಹೊಂದಿರುವ ಮತ್ತು ಅಳಿವಿನ ಅಂಚಿನಲ್ಲಿರುವ ವ್ಯವಸ್ಥೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಕಾಪಾಡಿಕೊಳ್ಳುವ ಅಂಶಗಳನ್ನು ಆರ್ಜಿಎಸ್ಎ ಒಳಗೊಂಡಿದೆ.
ಗ್ರಾಮೀಣ ಮತ್ತು ನಗರ ಪ್ರದೇಶಗಳ ನಡುವೆ ಇರುವ ಹಲವು ಅಂತರವನ್ನು ತಗ್ಗಿಸುವ ನಿಟ್ಟಿನಲ್ಲಿ ಈ ಯೋಜನೆ ನೆರವಾಗಲಿದೆ ಎಂದು ಸಂಪುಟ ಸಭೆಯ ಬಳಿಕ ಮಾತನಾಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…
24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…